ಮೊಹಮ್ಮದ್ ಜುಬೈರ್ 
ದೇಶ

ಯುಪಿ ಪ್ರಕರಣದಲ್ಲಿ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಮಧ್ಯಂತರ ಜಾಮೀನು ವಿಸ್ತರಿಸಿದ ಸುಪ್ರೀಂ ಕೋರ್ಟ್!

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ಉತ್ತರ ಪ್ರದೇಶದ ಸೀತಾಪುರ್‌ ಜಿಲ್ಲೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆಲ್ಟ್‌ ನ್ಯೂಸ್‌ ಸಹ ಸಂಸ್ಥಾಪಕ ಮೊಹಮ್ಮದ್‌ ಜುಬೇರ್‌ ವಿರುದ್ಧದ ಮಧ್ಯಂತರ ಜಾಮೀನನ್ನು ಸುಪ್ರೀಂ ಕೋರ್ಟ್‌ ಮುಂದಿನ ಆದೇಶದವರೆಗೆ ವಿಸ್ತರಿಸಿದೆ.

ನವದೆಹಲಿ: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ಉತ್ತರ ಪ್ರದೇಶದ ಸೀತಾಪುರ್‌ ಜಿಲ್ಲೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆಲ್ಟ್‌ ನ್ಯೂಸ್‌ ಸಹ ಸಂಸ್ಥಾಪಕ ಮೊಹಮ್ಮದ್‌ ಜುಬೇರ್‌ ವಿರುದ್ಧದ ಮಧ್ಯಂತರ ಜಾಮೀನನ್ನು ಸುಪ್ರೀಂ ಕೋರ್ಟ್‌ ಮುಂದಿನ ಆದೇಶದವರೆಗೆ ವಿಸ್ತರಿಸಿದೆ.

ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ್ ಮತ್ತು ಎಎಸ್ ಬೋಪಣ್ಣ ಅವರನ್ನೊಳಗೊಂಡ ವಿಭಾಗೀಯ ಪೀಠಕ್ಕೆ ರಾಜ್ಯ ಸರ್ಕಾರದ ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ ರಾಜು ಅವರು, ಪ್ರಕರಣದಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಜುಬೇರ್ ಸಲ್ಲಿಸಿರುವ ಮನವಿಗೆ ಪ್ರತಿ ಅಫಿಡವಿಟ್ ಸಲ್ಲಿಸುವುದಾಗಿ ಹೇಳಿದರು.

ಈ ಪ್ರಕರಣದಲ್ಲಿ ಜುಬೇರ್‌ಗೆ ಈಗಾಗಲೇ ಜಾಮೀನು ದೊರೆತಿರುವುದರಿಂದ ಅಫಿಡವಿಟ್ ಸಲ್ಲಿಸಲು ಕಾಲಾವಕಾಶ ನೀಡಲು ಅವರ ಕಡೆಯಿಂದ ಯಾವುದೇ ಆಕ್ಷೇಪಣೆ ಬರಬಾರದು ಎಂದು ರಾಜು ಹೇಳಿದರು.

ಜುಬೈರ್ ಪರ ವಾದ ಮಂಡಿಸಿದ ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವಿಸ್ ಅವರು ನ್ಯಾಯಾಲಯದ ರಜಾಕಾಲದ ಪೀಠವು ಈಗಾಗಲೇ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ರಾಜ್ಯ ಸರ್ಕಾರ ಸಲ್ಲಿಸಲಿರುವ ಪ್ರತಿ ಅಫಿಡವಿಟ್‌ಗೆ ತಮ್ಮ ಉತ್ತರವನ್ನು ಸಲ್ಲಿಸಲು ಬಯಸುತ್ತೇವೆ ಎಂದು ಹೇಳಿದರು.

ಹೀಗಾಗಿ ಪೀಠವು ಸೆಪ್ಟೆಂಬರ್ 7ಕ್ಕೆ ಅಂತಿಮ ವಿಚಾರಣೆ ನಡೆಸುವುದಾಗಿ ಹೇಳಿದ್ದು ನಾಲ್ಕು ವಾರಗಳಲ್ಲಿ ಉತ್ತರ ಪ್ರದೇಶ ಸರ್ಕಾರವು ತನ್ನ ಪ್ರತಿಕ್ರಿಯೆಯನ್ನು ಸಲ್ಲಿಸುವಂತೆ ಸೂಚಿಸಿದೆ. ಅಲ್ಲದೆ ಜುಬೈರ್ ಪರವಾಗಿ ಯಾವುದೇ ಮರು ಅರ್ಜಿ ಸಲ್ಲಿಸಬೇಕಾದರೆ ಅದನ್ನು ಎರಡು ವಾರಗಳಲ್ಲಿ ಸಲ್ಲಿಸಬೇಕು ಕೋರ್ಟ್ ಸೂಚಿಸಿದೆ.

ಕಳೆದ ಜುಲೈ 8ರಂದು ಸುಪ್ರೀಂ ಕೋರ್ಟ್‌ನ ರಜಾಕಾಲದ ಪೀಠವು ಪ್ರಕರಣದಲ್ಲಿ ಜುಬೇರ್‌ಗೆ ಐದು ದಿನಗಳ ಮಧ್ಯಂತರ ಜಾಮೀನು ನೀಡಿತ್ತು. ಇನ್ನೊಂದು ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದ ಆದೇಶದಂತೆ ಜುಬೇರ್ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಜೂನ್ 1ರಂದು ಹಿಂದೂ ಶೇರ್ ಸೇನಾ ಸೀತಾಪುರ್ ಜಿಲ್ಲೆಯ ಭಗವಾನ್ ಶರಣ್ ನೀಡಿದ ದೂರಿನ ಮೇರೆಗೆ ಉತ್ತರ ಪ್ರದೇಶದಲ್ಲಿ ಜುಬೇರ್ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 295 ಎ(ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ಅಧ್ಯಕ್ಷರ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯ) ಮತ್ತು ಐಟಿ ಕಾಯ್ದೆಯ ಸೆಕ್ಷನ್ 67 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

ದಿಢೀರ್‌ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!

ಚಾಣಕ್ಯನ ಅರ್ಥಶಾಸ್ತ್ರದಲ್ಲಿ ಸಾಲದ ಪರಿಕಲ್ಪನೆ ಹೀಗಿತ್ತು ! (ಹಣಕ್ಲಾಸು)

ದೆಹಲಿ: ಫ್ರೆಂಡ್​ಶಿಪ್ ನಿರಕಾರಿಸಿದ್ದಕ್ಕೆ 21 ವರ್ಷದ ಮಾಡೆಲ್'ನನ್ನು ಆಕೆಯ ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್!