ಸಾಂದರ್ಭಿಕ ಚಿತ್ರ 
ದೇಶ

ಲಖನೌ: ಮಗ ಸಾಕಿದ ಪಿಟ್‌ಬುಲ್ ನಾಯಿಯಿಂದಲೇ ತಾಯಿ ಸಾವು!

ತಾಯಿಯೊಬ್ಬರು ಮಗ ಸಾಕಿದ್ದ ಮುದ್ದಿನ ಪಿಟ್‌ಬುಲ್ ನಾಯಿಯಿಂದಲೇ ಸಾವನ್ನಪ್ಪಿರುವ ದುರಾದೃಷ್ಟಕರ ಘಟನೆ ಉತ್ತರ ಪ್ರದೇಶದ ಲಖನೌದ ಕೈಸರ್‌ಬಾಗ್ ಪ್ರದೇಶದ ಬಂಗಾಳಿ ಟೋಲಾ ಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಲಖನೌ: ತಾಯಿಯೊಬ್ಬರು ಮಗ ಸಾಕಿದ್ದ ಮುದ್ದಿನ ಪಿಟ್‌ಬುಲ್ ನಾಯಿಯಿಂದಲೇ ಸಾವನ್ನಪ್ಪಿರುವ ದುರಾದೃಷ್ಟಕರ ಘಟನೆ ಉತ್ತರ ಪ್ರದೇಶದ ಲಖನೌದ ಕೈಸರ್‌ಬಾಗ್ ಪ್ರದೇಶದ ಬಂಗಾಳಿ ಟೋಲಾ ಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಮೃತರನ್ನು ಸುಶೀಲಾ ತ್ರಿಪಾಠಿ ಎಂದು ಗುರುತಿಸಲಾಗಿದೆ. 82 ವರ್ಷದ ಸುಶೀಲಾ ತ್ರಿಪಾಠಿ ನಿವೃತ್ತ ಶಿಕ್ಷಕಿ. ಆಕೆಯ ಮಗ ಅಮಿತ್, ಜಿಮ್ ತರಬೇತುದಾರ. ಈತ ಪಿಟ್‌ಬುಲ್ ಮತ್ತು ಲ್ಯಾಬ್ರಡಾರ್ ಎಂಬ ಎರಡು ನಾಯಿಗಳನ್ನು ಸಾಕಿದ್ದರು.

ಸುಶೀಲಾ ತ್ರಿಪಾಠಿ ಮೇಲೆ ದಾಳಿ ಮಾಡಿದ ಬ್ರೌನಿ ಎಂಬ ಪಿಟ್‌ಬುಲ್ ನಾಯಿಯನ್ನು ಮೂರು ವರ್ಷಗಳ ಹಿಂದೆ ಮನೆಗೆ ತರಲಾಗಿತ್ತು. ಸುಶೀಲಾ ತ್ರಿಪಾಠಿ ಮನೆಯಲ್ಲಿ ಒಬ್ಬರೇ ಇದ್ದಾಗ ಬೆಳಗ್ಗೆ 6 ಗಂಟೆ ಸುಮಾರಿಗೆ ನಾಯಿಯೇ ಸುಶೀಲಾ ಅವರನ್ನು ಕಚ್ಚಿ ಕೊಂದಿರುವ ಘಟನೆ ನಡೆದಿದೆ.

ಮನೆಗೆ ಬಂದಾಗ ತಾಯಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡು ಮಗ ಅಮಿತ್ ಆಕೆಯನ್ನು ಬಲರಾಂಪುರ್ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಹೆಚ್ಚಿನ ರಕ್ತಸ್ರಾವದಿಂದಾಗಿ ಅವರು ಅಸುನೀಗಿದರು. ಮರಣೋತ್ತರ ಪರೀಕ್ಷೆಯ ವರದಿಯ ಪ್ರಕಾರ ಸುಶೀಲಾ ಅವರ ದೇಹದಲ್ಲಿ ಕುತ್ತಿಗೆಯಿಂದ ಹೊಟ್ಟೆಯವರೆಗೆ ಒಟ್ಟು 12 ತೀವ್ರ ಗಾಯಗಳು ಪತ್ತೆಯಾಗಿವೆ.

ನೆರೆಹೊರೆಯವರ ಪ್ರಕಾರ, ಬೆಳಗ್ಗೆ 6 ಗಂಟೆ ಸುಮಾರಿಗೆ ನಾಯಿಗಳು ಬೊಗಳುವುದು ಮತ್ತು ಸುಶೀಲಾ ಅವರು ಸಹಾಯಕ್ಕಾಗಿ ಕೂಗುವುದು ಕೇಳಿತು. ನಾವು ಅವರ ಮನೆಗೆ ಧಾವಿಸಿದೆವು. ಆದರೆ ಅದು ಒಳಗಿನಿಂದ ಬೀಗ ಹಾಕಲಾಗಿತ್ತು. ಮಹಿಳೆಯ ಮಗ ಮನೆಗೆ ಬಂದು ತೆರೆದು ನೋಡಿದಾಗ ತಾಯಿ ತೀವ್ರವಾಗಿ ಗಾಯಗೊಂಡಿರುವುದು ತಿಳಿದು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!