ದ್ರೌಪದಿ ಮುರ್ಮು ಮತ್ತು ರಾಜ್ ಭರ್ 
ದೇಶ

ರಾಷ್ಟ್ರಪತಿ ಚುನಾವಣೆ: ಯಶವಂತ್ ಸಿನ್ಹಾಗೆ ಮತ್ತೊಂದು ಹಿನ್ನಡೆ; ಮುರ್ಮು ಬೆಂಬಲಿಸಿದ ಅಖಿಲೇಶ್ ಯಾದವ್ ಮಿತ್ರ ಓಂ ಪ್ರಕಾಶ್ ರಾಜ್ಭರ್

ರಾಷ್ಟ್ರಪತಿ ಚುನಾವಣೆಯ ಪ್ರತಿಪಕ್ಷಗಳ ಅಭ್ಯರ್ಥಿ ಯಶವಂತ ಸಿನ್ಹಾ ಅವರ ಪ್ರಚಾರಕ್ಕೆ ಶುಕ್ರವಾರ ಮತ್ತೊಂದು ಹಿನ್ನಡೆಯಾಗಿದೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಮಿತ್ರ ಓಂ ಪ್ರಕಾಶ್ ರಾಜ್ ಭರ್ ದ್ರೌಪದಿ ಮುರ್ಮು ಅವರಿಗೆ ಬೆಂಬಲ ನೀಡುವ ಭರವಸೆ ನೀಡಿದ್ದಾರೆ.

ಲಖನೌ: ರಾಷ್ಟ್ರಪತಿ ಚುನಾವಣೆಯ ಪ್ರತಿಪಕ್ಷಗಳ ಅಭ್ಯರ್ಥಿ ಯಶವಂತ ಸಿನ್ಹಾ ಅವರ ಪ್ರಚಾರಕ್ಕೆ ಶುಕ್ರವಾರ ಮತ್ತೊಂದು ಹಿನ್ನಡೆಯಾಗಿದೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಮಿತ್ರ ಓಂ ಪ್ರಕಾಶ್ ರಾಜ್ ಭರ್ ದ್ರೌಪದಿ ಮುರ್ಮು ಅವರಿಗೆ ಬೆಂಬಲ ನೀಡುವ ಭರವಸೆ ನೀಡಿದ್ದಾರೆ.

ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಆರು ಶಾಸಕರನ್ನು ಹೊಂದಿರುವ ಸುಹೇಲ್ ದೇವ್ ಭಾರತೀಯ ಸಮಾಜ ಪಕ್ಷದ (ಎಸ್ ಬಿಎಸ್ ಪಿ) ಮುಖ್ಯಸ್ಥ ರಾಜ್ ಭರ್, ಪಕ್ಷದ ಮುಖಂಡರು ಹಾಗೂ ಪದಾಧಿಕಾರಿಗಳ ಜೊತೆಗೆ ಚರ್ಚಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

2019ರಲ್ಲಿ ಪಕ್ಷ ಬದಲಾಯಿಸಿದ ಮಾಜಿ ಬಿಜೆಪಿ ಮಿತ್ರ ರಾಜ್ ಭರ್ ಈ ವಾರದ ಆರಂಭದಲ್ಲಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹಾಗೂ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೂರೆನ್ ನಂತರ ಮುರ್ಮು ಬೆಂಬಲಿಸಿದ ನಾಯಕರಾಗಿದ್ದಾರೆ.

ಉದ್ಧವ್ ಠಾಕ್ರೆ ಆರಂಭದಲ್ಲಿ ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ಅವರನ್ನು ಬೆಂಬಲಿಸಿದ್ದರು. ಆದರೆ, ಮಂಗಳವಾರ ಮುರ್ಮು ಪರ ನಿಂತರು. ಎರಡು ದಿನಗಳ ನಂತರ ತನ್ನ ಪಾಲುದಾರ ಕಾಂಗ್ರೆಸ್ ವಿರುದ್ಧವಾಗಿ ಜಾರ್ಖಂಡ್ ಮುಕ್ತಿ ಮೋರ್ಚಾ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸುವ ಎನ್ ಡಿಎಯೇತರ ಪಕ್ಷಗಳ ಪಟ್ಟಿಗೆ ಸೇರಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT