ಸಾಂದರ್ಭಿಕ ಚಿತ್ರ 
ದೇಶ

ಲಖನೌ ಲುಲು ಮಾಲ್‌ನಲ್ಲಿ ನಮಾಜ್: ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲು

ಉತ್ತರ ಪ್ರದೇಶದ ಲಖನೌ ನಲ್ಲಿ ಇತ್ತೀಚೆಗಷ್ಟೇ ಉದ್ಘಾಟನೆಗೊಂಡ ಲುಲು ಮಾಲ್‌ನಲ್ಲಿ ನಮಾಜ್ ವಿಚಾರವಾಗಿ ಗಲಾಟೆ ನಡೆದಿರುವ ಹಿನ್ನೆಲೆಯಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಲಖನೌ: ಉತ್ತರ ಪ್ರದೇಶದ ಲಖನೌ ನಲ್ಲಿ ಇತ್ತೀಚೆಗಷ್ಟೇ ಉದ್ಘಾಟನೆಗೊಂಡ ಲುಲು ಮಾಲ್‌ನಲ್ಲಿ ನಮಾಜ್ ವಿಚಾರವಾಗಿ ಗಲಾಟೆ ನಡೆದಿರುವ ಹಿನ್ನೆಲೆಯಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಖಿಲ ಭಾರತ ಹಿಂದೂ ಮಹಾಸಭಾದ ಶಿಶಿರ್ ಚತುರ್ವೇದಿ ಅವರು ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಮಾಲ್ ಒಳಗೆ ಕೆಲವರು ನಮಾಜ್ ಮಾಡುತ್ತಿರುವ ವೀಡಿಯೊ ವೈರಲ್ ಆದ ನಂತರ ಈ ಪ್ರಕರಣ ದಾಖಲಾಗಿದೆ.

ಜುಲೈ 10 ರಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಈ ಲುಲು ಮಾಲ್ ಅನ್ನು ಉದ್ಘಾಟಿಸಿದ್ದರು.

ಅಖಿಲ ಭಾರತ ಹಿಂದೂ ಮಹಾಸಭಾದ ಶಿಶಿರ್ ಚತುರ್ವೇದಿ ಅವರು ಲುಲು ಮಾಲ್‌ನಲ್ಲಿ ನಮಾಜ್ ಮಾಡುತ್ತಿರುವ ಬಗ್ಗೆ ದೂರು ದಾಖಲಿಸಿದ್ದಾರೆ. ತನಿಖೆಯ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸುಶಾಂತ್ ಗಾಲ್ಫ್ ಸಿಟಿಯ ಪೊಲೀಸ್ ಠಾಣೆ ಪ್ರಭಾರಿ ಅಜಯ್ ಪ್ರತಾಪ್ ಸಿಂಗ್ ಅವರು ಹೇಳಿದ್ದಾರೆ.

"ಲುಲು ಮಾಲ್ ಮ್ಯಾನೇಜ್‌ಮೆಂಟ್ ನೀಡಿದ ದೂರಿನ ಮೇರೆಗೆ ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಎಫ್‌ಐಆರ್‌ನಲ್ಲಿ ಐಪಿಸಿ ಸೆಕ್ಷನ್ 153 ಎ, 295 ಎ, 341 ಮತ್ತು ಇತರ ಸೆಕ್ಷನ್ ಗಳಡಿ ಕೇಸ್ ದಾಖಲಿಸಲಾಗಿದೆ " ಎಂದು ಅವರು ತಿಳಿಸಿದ್ದಾರೆ.

ಆದರೆ, ಲುಲು ಮಾಲ್‌ನಲ್ಲಿ ಯಾವುದೇ ಪ್ರಾರ್ಥನೆಗೆ ಅವಕಾಶವಿಲ್ಲ ಎಂದು ಲುಲು ಮಾಲ್‌ನ ಜನರಲ್ ಮ್ಯಾನೇಜರ್ ಸಮೀರ್ ವರ್ಮಾ ಹೇಳಿದ್ದಾರೆ.

"ಲುಲು ಮಾಲ್ ಎಲ್ಲಾ ಧರ್ಮಗಳನ್ನು ಗೌರವಿಸುತ್ತದೆ. ಆದರೆ ಯಾವುದೇ ರೀತಿಯ ಪೂಜೆಗೆ ಇಲ್ಲಿ ಅನುಮತಿ ಇಲ್ಲ. ಈ ನಿಟ್ಟಿನಲ್ಲಿ ನಾವು ನಮ್ಮ ಸಿಬ್ಬಂದಿಗೆ ಇಂತಹ ಘಟನೆಗಳ ಮೇಲೆ ನಿಗಾ ಇಡಲು ಕಟ್ಟುನಿಟ್ಟಿನ ತರಬೇತಿಯನ್ನು ನೀಡುತ್ತೇವೆ" ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia conflict: ದೇಶದ ಮೇಲೆ ಯುದ್ಧದ ಪರಿಣಾಮ ತಗ್ಗಿಸಲು ಕೇಂದ್ರ ಸಜ್ಜು; ಪ್ರಧಾನಿ ಮೋದಿ ಮಹತ್ವದ ಸಭೆ, LPG-LNG ಲಭ್ಯತೆ ಖಚಿತಪಡಿಸಲು ಖಡಕ್ ಸೂಚನೆ

ಹೊಸ ವಿತ್ತೀಯ ವರ್ಷದಲ್ಲಿ ಆಗಿರುವ ಬದಲಾವಣೆಗಳೇನು ಗೊತ್ತಾ? (ಹಣಕ್ಲಾಸು)

'13 ರೂ. ಮೌಲ್ಯದ ಚೀಲಗಳನ್ನು 52 ರೂ.ಗೆ ಖರೀದಿ’: IAS ಅಧಿಕಾರಿ ರೋಹಿಣಿ ಸಿಂಧೂರಿಗೆ ಹೈಕೋರ್ಟ್ ಶಾಕ್, ತನಿಖೆಗೆ ಅನುಮತಿ

SSLC ಯಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್: ಸರ್ಕಾರದ ನಿರ್ಧಾರ ವಿರುದ್ಧ ಹೈಕೋರ್ಟ್ ಗೆ ಅರ್ಜಿ

ಸಾಂಸ್ಕೃತಿಕ ವೈಭವಕ್ಕೆ ಸಾಕ್ಷಿಯಾದ ಬೆಂಗಳೂರು: ಧರ್ಮರಾಯಸ್ವಾಮಿ ದೇವಸ್ಥಾನದಿಂದ ವೈಭವದ ಕರಗ ಆರಂಭ, ಲಕ್ಷಾಂತರ ಭಕ್ತರು ಸಾಕ್ಷಿ

SCROLL FOR NEXT