ರಾಹುಲ್ ಗಾಂಧಿ 
ದೇಶ

ದಾರಿತಪ್ಪಿದ, ಮೋಸ ಹೋದವರು: ನಿರುದ್ಯೋಗಿಗಳು ಈ ‘ಅಸಂಸದೀಯ’ ಪದ ಬಳಸಬಹುದೇ - ಮೋದಿ ವಿರುದ್ಧ ರಾಹುಲ್ ವಾಗ್ದಾಳಿ

ನಿರುದ್ಯೋಗ ಸಮಸ್ಯೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಶುಕ್ರವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಭಾರತದ ನಿರುದ್ಯೋಗಿ ಯುವಕರು ಪ್ರತಿ ವರ್ಷ ಎರಡು ಕೋಟಿ...

ನವದೆಹಲಿ: ನಿರುದ್ಯೋಗ ಸಮಸ್ಯೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಶುಕ್ರವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಭಾರತದ ನಿರುದ್ಯೋಗಿ ಯುವಕರು ಪ್ರತಿ ವರ್ಷ ಎರಡು ಕೋಟಿ ಉದ್ಯೋಗಗಳನ್ನು ಒದಗಿಸುವ ನಿಮ್ಮ ಸುಳ್ಳು ಭರವಸೆ ದಾರಿ ತಪ್ಪಿಸುವ, ದ್ರೋಹ ಬಗೆದ ಮತ್ತು ವಂಚಿಸಿದ ಎಂಬ "ಅಸಂಸದೀಯ" ಪದಗಳನ್ನು ಬಳಸಬಹುದೇ ಎಂದು ಕೇಳಿದ್ದಾರೆ.

2017-18 ರಿಂದ 2021-22 ರವರೆಗೆ ಐದು ವರ್ಷಗಳಲ್ಲಿ ನಿರುದ್ಯೋಗ ದ್ವಿಗುಣಗೊಂಡಿದೆ ಎಂದು ತೋರಿಸಿರುವ ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ (CMIE)ಯ ದತ್ತಾಂಶವನ್ನು ಆಧರಿಸಿದ ಗ್ರಾಫ್ ಅನ್ನು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಗ್ರಾಫ್ ಕಳೆದ ಐದು ವರ್ಷಗಳಲ್ಲಿ ನಿರುದ್ಯೋಗದ ಶೇಕಡಾವಾರು ಪ್ರಮಾಣವನ್ನು ತೋರಿಸಿದೆ: "ಪ್ರಧಾನಿಯವರೇ, ವರ್ಷಕ್ಕೆ 2 ಕೋಟಿ ಉದ್ಯೋಗಗಳು ಎಲ್ಲಿವೆ?" "ದಾರಿ ತಪ್ಪಿದ. ದ್ರೋಹ ಬಗೆದ, ಮೋಸ ಮಾಡಿದ ಪ್ರಧಾನಿ. ಭಾರತದ ನಿರುದ್ಯೋಗಿ ಯುವಕರು ನಿಮ್ಮ ಸುಳ್ಳುಗಳಿಗೆ ಈ 'ಅಸಂಸದೀಯ' ಪದಗಳನ್ನು ಬಳಸಬಹುದೇ?" ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಸೋಮವಾರ ಆರಂಭವಾಗಲಿರುವ ಮುಂಗಾರು ಅಧಿವೇಶನಕ್ಕೂ ಮುನ್ನ ಅಸಂಸದೀಯ ಪದಗಳೆಂದು ಪಟ್ಟಿ ಮಾಡಿ ಅವುಗಳನ್ನ ಸದನದಲ್ಲಿ ಬಳಸಬಾರದೆಂದು ಲೋಕಸಭೆ ಸಚಿವಾಲಯ ಹೊರಡಿಸಿರುವ ಹೊಸ ಕಿರುಹೊತ್ತಿಗೆಯಲ್ಲಿನ ಪದಗಳಿಗೆ ಭಾರೀ ವಿರೋಧ ವ್ಯಕ್ತವಾದ ನಂತರ ರಾಹುಲ್ ಗಾಂಧಿ ಈ ವಾಗ್ದಾಳಿ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT