ಅಮರನಾಥ ಯಾತ್ರಿಗಳ ಚಿತ್ರ 
ದೇಶ

ಅಮರನಾಥ ಯಾತ್ರೆ: 6 ಯಾತ್ರಿಗಳ ಸಾವು, ಒಟ್ಟು ಮೃತರ ಸಂಖ್ಯೆ 49ಕ್ಕೆ ಏರಿಕೆ

ಕಳೆದ 36 ಗಂಟೆಗಳಲ್ಲಿ ಅಮರನಾಥ ಯಾತ್ರೆಯ ಸಂದರ್ಭದಲ್ಲಿ ಆರು ಯಾತ್ರಿಕರು ಮತ್ತು ಕುದುರೆ ಸವಾರನೊಬ್ಬ ಸ್ವಾಭಾವಿಕವಾಗಿ ಸಾವನ್ನಪ್ಪಿದ್ದಾರೆ.

ಜಮ್ಮು-ಕಾಶ್ಮೀರ: ಕಳೆದ 36 ಗಂಟೆಗಳಲ್ಲಿ ಅಮರನಾಥ ಯಾತ್ರೆಯ ಸಂದರ್ಭದಲ್ಲಿ ಆರು ಯಾತ್ರಿಕರು ಮತ್ತು ಕುದುರೆ ಸವಾರನೊಬ್ಬ ಸ್ವಾಭಾವಿಕವಾಗಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಒಟ್ಟಾರೇ ಮೃತಪಟ್ಟವರ ಸಂಖ್ಯೆ 49ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಜುಲೈ 8 ರಂದು ಸಂಭವಿಸಿದ್ದ ದಿಢೀರ್ ಪ್ರವಾಹದಲ್ಲಿ ಸಿಲುಕಿ ಪ್ರಾಣ ಕಳೆದುಕೊಂಡ 15 ಯಾತ್ರಿಗಳು ಕೂಡಾ ಇದರಲ್ಲಿ ಸೇರಿದ್ದಾರೆ. ಜೂನ್ 30 ರಿಂದ ಆರಂಭವಾದ ಯಾತ್ರೆಯಲ್ಲಿ ಈವರೆಗೆ 47 ಯಾತ್ರಿಗಳು ಹಾಗೂ ಇಬ್ಬರು ಕುದುರೆ ಸವಾರರು ಪ್ರಾಣ ಕಳೆದುಕೊಂಡಿದ್ದಾರೆ. ಪಹಲ್ಗಾಮ್‌ನ ಆಳವಾದ ಕಂದರಕ್ಕೆ ಕುದುರೆಯಿಂದ ಬಿದ್ದು  ಕುದುರೆ ಸಾವನ್ನೊಬ್ಬ ಸಾವನ್ನಪ್ಪಿದ್ದ.

ಜುಲೈ 8 ರಂದು ಗುಹಾ ದೇಗುಲದ ಸಮೀಪ ಸಂಭವಿಸಿದ ಪ್ರವಾಹದಲ್ಲಿ 15 ಯಾತ್ರಿಗಳು ಪ್ರಾಣ ಕಳೆದುಕೊಂಡಿದ್ದರೆ ಸುಮಾರು 55 ಜನರು ಗಾಯಗೊಂಡಿದ್ದರು. ಇಲ್ಲಿಯವರೆಗೆ 1.5 ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳು ಗುಹಾ ದೇಗುಲಕ್ಕೆ ಭೇಟಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT