ದೇವೇಂದ್ರ ಫಡ್ನವೀಸ್, ಏಕನಾಥ್ ಶಿಂಧೆ 
ದೇಶ

ಔರಂಗಬಾದ್, ಉಸ್ಮಾನಾಬಾದ್ ನಗರಗಳಿಗೆ ಮತ್ತೆ ಹೆಸರು ಬದಲಾಯಿಸಿದ ಶಿಂಧೆ ಸರ್ಕಾರ

ಮಹಾರಾಷ್ಟ್ರದಲ್ಲಿನ ಔರಂಗಬಾದ್ ಮತ್ತು ಉಸ್ಮಾನಾಬಾದ್ ನಗರಗಳ ಹೆಸರನ್ನು ಕ್ರಮವಾಗಿ ಛತ್ರಪತಿ ಸಾಂಬಾಜಿನಗರ ಮತ್ತು ಧಾರಶಿವ್ ಎಂದು ಮರು ನಾಮಕರಣ ಮಾಡಲು ಏಕನಾಥ್ ಶಿಂಧೆ ನೇತೃತ್ವದ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಮುಂಬೈ: ಮಹಾರಾಷ್ಟ್ರದಲ್ಲಿನ ಔರಂಗಬಾದ್ ಮತ್ತು ಉಸ್ಮಾನಾಬಾದ್ ನಗರಗಳ ಹೆಸರನ್ನು ಕ್ರಮವಾಗಿ ಛತ್ರಪತಿ ಸಾಂಬಾಜಿನಗರ ಮತ್ತು ಧಾರಶಿವ್ ಎಂದು ಮರು ನಾಮಕರಣ ಮಾಡಲು ಏಕನಾಥ್ ಶಿಂಧೆ ನೇತೃತ್ವದ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಕಳೆದ ತಿಂಗಳು ಉದ್ಧವ್ ಠಾಕ್ರೆ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಔರಂಗಬಾದ್ ಗೆ ಸಾಂಬಾಜಿನಗರ ಎಂದು ಹೆಸರಿಡಲು ತೀರ್ಮಾನಿಸಲಾಗಿತ್ತು. ಆದರೆ, ಶಿಂಧೆ ಸರ್ಕಾರ ಇಂದು ಮತ್ತೆ ಛತ್ರಪತಿ ಎಂಬ ಹೆಸರನ್ನು ಅದರಲ್ಲಿ ಸೇರಿಸಿದೆ. 

ಈ ನಗರಗಳಿಗೆ ಉದ್ದವ್ ಠಾಕ್ರೆ ನೇತೃತ್ವದ ಸರ್ಕಾರ ಹೆಸರು ಮರು ನಾಮಕರಣ ಮಾಡಲು ತೆಗೆದುಕೊಂಡಿರುವ ತೀರ್ಮಾನ ಅಕ್ರಮವಾಗಿದೆ ಎಂದು ಜೂನ್ 30 ರಂದು ಏಕನಾಥ್ ಶಿಂಧೆ ಮತ್ತು ದೇವೇಂದ್ರ ಫಡ್ನವೀಸ್ ಅಧಿಕಾರ ವಹಿಸಿಕೊಂಡಾಗ ಹೇಳಿದ್ದರು.

ಆದಾಗ್ಯೂ, ಈಗ ಮತ್ತೆ ಹೆಸರನ್ನು ಬದಲಾಯಿಸಲಾಗಿದೆ. ಪ್ರಸ್ತುತ ಏಕನಾಥ್ ಸಿಂಧೆ ಮತ್ತು ಫಡ್ನವೀಸ್ ಮಾತ್ರ ಸಂಪುಟದಲ್ಲಿದ್ದು, ಅದು ಇನ್ನೂ ವಿಸ್ತರಣೆಯಾಗಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT