ದೇವೇಂದ್ರ ಫಡ್ನವೀಸ್, ಏಕನಾಥ್ ಶಿಂಧೆ 
ದೇಶ

ಔರಂಗಬಾದ್, ಉಸ್ಮಾನಾಬಾದ್ ನಗರಗಳಿಗೆ ಮತ್ತೆ ಹೆಸರು ಬದಲಾಯಿಸಿದ ಶಿಂಧೆ ಸರ್ಕಾರ

ಮಹಾರಾಷ್ಟ್ರದಲ್ಲಿನ ಔರಂಗಬಾದ್ ಮತ್ತು ಉಸ್ಮಾನಾಬಾದ್ ನಗರಗಳ ಹೆಸರನ್ನು ಕ್ರಮವಾಗಿ ಛತ್ರಪತಿ ಸಾಂಬಾಜಿನಗರ ಮತ್ತು ಧಾರಶಿವ್ ಎಂದು ಮರು ನಾಮಕರಣ ಮಾಡಲು ಏಕನಾಥ್ ಶಿಂಧೆ ನೇತೃತ್ವದ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಮುಂಬೈ: ಮಹಾರಾಷ್ಟ್ರದಲ್ಲಿನ ಔರಂಗಬಾದ್ ಮತ್ತು ಉಸ್ಮಾನಾಬಾದ್ ನಗರಗಳ ಹೆಸರನ್ನು ಕ್ರಮವಾಗಿ ಛತ್ರಪತಿ ಸಾಂಬಾಜಿನಗರ ಮತ್ತು ಧಾರಶಿವ್ ಎಂದು ಮರು ನಾಮಕರಣ ಮಾಡಲು ಏಕನಾಥ್ ಶಿಂಧೆ ನೇತೃತ್ವದ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಕಳೆದ ತಿಂಗಳು ಉದ್ಧವ್ ಠಾಕ್ರೆ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಔರಂಗಬಾದ್ ಗೆ ಸಾಂಬಾಜಿನಗರ ಎಂದು ಹೆಸರಿಡಲು ತೀರ್ಮಾನಿಸಲಾಗಿತ್ತು. ಆದರೆ, ಶಿಂಧೆ ಸರ್ಕಾರ ಇಂದು ಮತ್ತೆ ಛತ್ರಪತಿ ಎಂಬ ಹೆಸರನ್ನು ಅದರಲ್ಲಿ ಸೇರಿಸಿದೆ. 

ಈ ನಗರಗಳಿಗೆ ಉದ್ದವ್ ಠಾಕ್ರೆ ನೇತೃತ್ವದ ಸರ್ಕಾರ ಹೆಸರು ಮರು ನಾಮಕರಣ ಮಾಡಲು ತೆಗೆದುಕೊಂಡಿರುವ ತೀರ್ಮಾನ ಅಕ್ರಮವಾಗಿದೆ ಎಂದು ಜೂನ್ 30 ರಂದು ಏಕನಾಥ್ ಶಿಂಧೆ ಮತ್ತು ದೇವೇಂದ್ರ ಫಡ್ನವೀಸ್ ಅಧಿಕಾರ ವಹಿಸಿಕೊಂಡಾಗ ಹೇಳಿದ್ದರು.

ಆದಾಗ್ಯೂ, ಈಗ ಮತ್ತೆ ಹೆಸರನ್ನು ಬದಲಾಯಿಸಲಾಗಿದೆ. ಪ್ರಸ್ತುತ ಏಕನಾಥ್ ಸಿಂಧೆ ಮತ್ತು ಫಡ್ನವೀಸ್ ಮಾತ್ರ ಸಂಪುಟದಲ್ಲಿದ್ದು, ಅದು ಇನ್ನೂ ವಿಸ್ತರಣೆಯಾಗಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ