ದ್ರೌಪದಿ ಮುರ್ಮು 
ದೇಶ

ನಾಳೆ ರಾಷ್ಟ್ರಪತಿ ಚುನಾವಣೆ: ಮುರ್ಮು ಬಹುತೇಕ ಗೆಲುವು ಸಾಧ್ಯತೆ

ನಾಳೆ ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ದೇಶದ ಸುಮಾರು 4,800 ಚುನಾಯಿತ ಜನ ಪ್ರತಿನಿಧಿಗಳು 15ನೇ ರಾಷ್ಟ್ರಪತಿ ಆಯ್ಕೆ ಮಾಡಲು ಸೋಮವಾರ ಮತದಾನ ಮಾಡಲಿದ್ದಾರೆ.

ನವದೆಹಲಿ: ನಾಳೆ ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ದೇಶದ ಸುಮಾರು 4,800 ಚುನಾಯಿತ ಜನ ಪ್ರತಿನಿಧಿಗಳು 15ನೇ ರಾಷ್ಟ್ರಪತಿ ಆಯ್ಕೆ ಮಾಡಲು ಸೋಮವಾರ ಮತದಾನ ಮಾಡಲಿದ್ದಾರೆ. ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಶೇಕಡಾ 60 ರಷ್ಟು ಮತಗಳನ್ನು ಪಡೆದು ವಿರೋಧ ಪಕ್ಷಗಳ ಅಭ್ಯರ್ಥಿ ಯಶವಂತ ಸಿನ್ಹಾ ಅವರನ್ನು ಸೋಲಿಸುವ ಸಾಧ್ಯತೆ ಹೆಚ್ಚಾಗಿದೆ.

ಸಂಸತ್ ಭವನ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಮತದಾನ ನಡೆಯಲಿದ್ದು, ಬ್ಯಾಲೆಟ್ ಬಾಕ್ಸ್ ಗಳು ಈಗಾಗಲೇ ಅಲ್ಲಿಗೆ ತಲುಪಿವೆ. ಜುಲೈ 21 ರಂದು ಸಂಸತ್ ಭವನದಲ್ಲಿ ಮತ ಎಣಿಕೆ ನಡೆಯಲಿದ್ದು, ಜುಲೈ 25 ರಂದು ಮುಂದಿನ ರಾಷ್ಟ್ರಪತಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಪ್ರಾದೇಶಿಕ ಪಕ್ಷಗಳಾದ ಬಿಜು ಜನತಾ ದಳ, ವೈಎಸ್‌ಆರ್ ಕಾಂಗ್ರೆಸ್ , ಬಹುಜನ ಸಮಾಜ ಪಕ್ಷ, ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ, ತೆಲುಗು ದೇಶಂ ಪಕ್ಷ, ಜನತಾ ದಳ-ಜಾತ್ಯತೀತ, ಶಿರೋಮಣಿ ಅಕಾಲಿದಳ, ಶಿವಸೇನೆ ಮುಂತಾದವುಗಳ ಬೆಂಬಲದೊಂದಿಗೆ ಮುರ್ಮು ಅವರ ಮತ ಹಂಚಿಕೆಯು ಸುಮಾರು ಮೂರನೇ ಎರಡರಷ್ಟು ತಲುಪುವ ಸಾಧ್ಯತೆಯಿದೆ ಮತ್ತು ಅವರು ಬುಡಕಟ್ಟು ಸಮುದಾಯದಿಂದ ಉನ್ನತ ಸಾಂವಿಧಾನಿಕ ಹುದ್ದೆಯನ್ನು ಅಲಂಕರಿಸುತ್ತಿರುವ ಮೊದಲ ಮಹಿಳೆಯಾಗಲಿದ್ದಾರೆ.

ಒಟ್ಟು 10,86,431 ಮತಗಳ ಪೈಕಿ ವಿವಿಧ ಪ್ರಾದೇಶಿಕ ಪಕ್ಷಗಳ ಬೆಂಬಲದ ನಂತರ ಎನ್ ಡಿಎ ಅಭ್ಯರ್ಥಿ ಈಗ 6.67 ಲಕ್ಷಕ್ಕೂ ಹೆಚ್ಚು ಮತಗಳನ್ನು ಹೊಂದಿದ್ದಾರೆ. ಪ್ರಾತಿನಿಧ್ಯ ವ್ಯವಸ್ಥೆಯ ಮೂಲಕ ರಾಷ್ಟ್ರಪತಿ ಆಯ್ಕೆ ನಡೆಯಲಿದ್ದು, ಚುನಾಯಿತ ಸಂಸದರು ಮತ್ತು ರಾಜ್ಯ ಶಾಸಕಾಂಗ ಸಭೆಗಳ ಸದಸ್ಯರು ಮತದಾನ ಮಾಡಲು ಅರ್ಹರಾಗಿದ್ದಾರೆ.  ನಾಮನಿರ್ದೇಶಿತ ಸಂಸದರು ಮತ್ತು ಶಾಸಕರು ಮತ್ತು ವಿಧಾನ ಪರಿಷತ್ತಿನ ಸದಸ್ಯರು ಈ ಚುನಾವಣೆಯಲ್ಲಿ ಮತ ಚಲಾಯಿಸಲು ಅರ್ಹರಾಗಿರುವುದಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel