ಸಾಂದರ್ಭಿಕ ಚಿತ್ರ 
ದೇಶ

ಎನ್ಇಇಟಿ ದಂಧೆ ಬಯಲಿಗೆಳೆದ ಸಿಬಿಐ; 7 ಮಂದಿ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಎನ್ಇಇಟಿ ಅಕ್ರಮ ದಂಧೆಯನ್ನು ಬಯಲಿಗೆಳೆದಿದ್ದು 7 ಮಂದಿಯನ್ನು ಬಂಧಿಸಿದೆ. 

ನವದೆಹಲಿ: ಕೇಂದ್ರ ತನಿಖಾ ದಳ (ಸಿಬಿಐ) ಎನ್ಇಇಟಿ ಅಕ್ರಮ ದಂಧೆಯನ್ನು ಬಯಲಿಗೆಳೆದಿದ್ದು 7 ಮಂದಿಯನ್ನು ಬಂಧಿಸಿದೆ. 

ಪದವಿಪೂರ್ವ ವೈದ್ಯಕೀಯ ಕೋರ್ಸ್‌ಗಳಲ್ಲಿ ನೈಜ ಅಭ್ಯರ್ಥಿಗಳಿಗೆ ಸಹಾಯ ಮಾಡಲು ಅವರಂತೆಯೇ ಸೋಗು ಹಾಕುತ್ತಿದ್ದ ದಂಧೆ ಇದಾಗಿದೆ. ಎನ್ ಟಿಎಯಿಂದ ನಡೆಸುತ್ತಿದ್ದ ಪರೀಕ್ಷೆಗಳಲ್ಲಿ ನೈಜ ಅಭ್ಯರ್ಥಿಗಳ ಸೋಗಿನಲ್ಲಿ ಪೇಪರ್ ಸಾಲ್ವರ್(solvers) ಗಳನ್ನು ವ್ಯವಸ್ಥೆ ಮಾಡುವುದಕ್ಕೆ ಕ್ರಿಮಿನಲ್ ಪಿತೂರಿ ನಡೆಯುತ್ತಿದ್ದ ಬಗ್ಗೆ ತನಿಖಾ ಸಂಸ್ಥೆಗೆ ಮಾಹಿತಿ ಲಭ್ಯವಾಗಿತ್ತು. ದೆಹಲಿ ಹಾಗೂ ಹರ್ಯಾಣಗಳ ಹಲವು ಕೇಂದ್ರಗಳಲ್ಲಿ ಈ ಅಕ್ರಮ ನಡೆದಿತ್ತು ಎಂದು ಎಫ್ಐಆರ್ ಆರೋಪಿಸಿದೆ. 

2022  ಯುಜಿ ಎನ್ಇಇಟಿ ಪರೀಕ್ಷೆಯಲ್ಲಿ ವಾಸ್ತವದಲ್ಲಿ ಪರೀಕ್ಷೆ ಬರೆಯಬೇಕಿದ್ದ ಅಭ್ಯರ್ಥಿಗಳ ಪರವಾಗಿ ಮತ್ತೆ ಇನ್ಯಾರೋ ಪರೀಕ್ಷೆ ಬರೆಯುತ್ತಿದ್ದರು. ಇದಕ್ಕಾಗಿ ಬೃಹತ್ ಮೊತ್ತದ ಹಣವನ್ನು ಪಡೆಯುತ್ತಿದ್ದರು. 

ಅಭ್ಯರ್ಥಿಗಳ ಯೂಸರ್ ಐಡಿ ಹಾಗೂ ಪಾಸ್ವರ್ಡ್ ಗಳನ್ನು ಆರೋಪಿಗಳಿಂದ ವಶಕ್ಕೆ ಪಡೆಯಲಾಗಿದೆ, ಈ ಆರೋಪಿಗಳು ತಮಗೆ ಬೇಕಾದ ಪರೀಕ್ಷಾ ಕೇಂದ್ರಗಳನ್ನು ಬದಲಾವಣೆ ಮಾಡಿಕೊಳ್ಳುತ್ತಿದ್ದರು. 

ಸುಶೀಲ್ ರಂಜನ್, ಬ್ರಿಜ್ ಮೋಹನ್ ಸಿಂಗ್, ಪಪ್ಪು, ಉಮಾ ಶಂಕರ್ ಗುಪ್ತಾ, ನಿಧಿ, ಕೃಷ್ಣ ಶಂಕರ್, ಯೋಗಿ, ಸನ್ನಿ ರಂಜನ್, ರಘುನಂದನ್, ಜೀಪು ಲಾಲ್, ಹಿಮೇಂದ್ರ ಹಾಗೂ ಭರತ್ ಸಿಂಗ್ ಆರೋಪಿಗಳು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT