ಮೊಹಮ್ಮದ್ ಮೊಕ್ವಿಮ್ 
ದೇಶ

'ಈ ಮಣ್ಣಿಗೋಸ್ಕರ': ಕಾಂಗ್ರೆಸ್ ಶಾಸಕನಿಂದ ಅಡ್ಡಮತದಾನ, ಬಿಜೆಪಿ ಅಭ್ಯರ್ಥಿ ದ್ರೌಪತಿ ಮುರ್ಮುಗೆ ಮತ ಚಲಾಯಿಸಿದ ಮೊಕ್ವಿಮ್

ಮಣ್ಣಿಗಾಗಿ ಏನಾದರೂ ಮಾಡುವಂತೆ ಮಾರ್ಗದರ್ಶನ ನೀಡಿದ ನನ್ನ ಮನದಾಳದ ಮಾತನ್ನು ಕೇಳಿದ್ದು ಇದು ನನ್ನ ವೈಯಕ್ತಿಕ ನಿರ್ಧಾರವಾಗಿದ್ದು ಅದಕ್ಕಾಗಿಯೇ ಆಕೆಗೆ ಮತ ಹಾಕಿದ್ದೇನೆ ಎಂದರು.

ಭುವನೇಶ್ವರ: ಒಡಿಶಾದ ಕಾಂಗ್ರೆಸ್ ಶಾಸಕ ಮೊಹಮ್ಮದ್ ಮೊಕ್ವಿಮ್ ಇಂದು ಪಕ್ಷದ ನಿರ್ಧಾರಕ್ಕೆ ವಿರುದ್ಧವಾಗಿ ಒಡಿಶಾದವರಾದ ಎನ್‌ಡಿಎಯ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಮತ ಹಾಕಿದರು. 

ಮಣ್ಣಿಗಾಗಿ ಏನಾದರೂ ಮಾಡುವಂತೆ ಮಾರ್ಗದರ್ಶನ ನೀಡಿದ ನನ್ನ ಮನದಾಳದ ಮಾತನ್ನು ಕೇಳಿದ್ದು ಇದು ನನ್ನ ವೈಯಕ್ತಿಕ ನಿರ್ಧಾರವಾಗಿದ್ದು ಅದಕ್ಕಾಗಿಯೇ ಆಕೆಗೆ ಮತ ಹಾಕಿದ್ದೇನೆ ಎಂದರು.

ಈ ಚುನಾವಣೆಗಳಲ್ಲಿ ಸಂಸದರು ಮತ್ತು ಶಾಸಕರು ಮತದಾರರಾಗಿದ್ದು ಪಕ್ಷಗಳು ಬೈಂಡಿಂಗ್ ವಿಪ್‌ಗಳನ್ನು ನೀಡಲು ಸಾಧ್ಯವಿಲ್ಲ. ಆದ್ದರಿಂದ ಪಕ್ಷಾಂತರ ವಿರೋಧಿ ಕಾನೂನು ಕಾರ್ಯರೂಪಕ್ಕೆ ಬರುವುದಿಲ್ಲ.

ದ್ರೌಪತಿ ಮುರ್ಮು  ಸಂತಾಲ್ ಬುಡಕಟ್ಟಿಗೆ ಸೇರಿದವರು ಮತ್ತು ಬುಡಕಟ್ಟು ಸಮುದಾಯದಿಂದ ಮೊದಲ ರಾಷ್ಟ್ರಪತಿಯಾಗಲು ಸಿದ್ಧರಾಗಿದ್ದಾರೆ.  ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ಅವರೊಂದಿಗೆ ನೇರ ಸ್ಪರ್ಧೆಯಲ್ಲಿ ಆರಾಮವಾಗಿ ಸ್ಥಾನ ಪಡೆದಿದ್ದಾರೆ. ಅವರ ಬುಡಕಟ್ಟು ಗುರುತಿನಿಂದಾಗಿ ಹಲವಾರು ಎನ್‌ಡಿಎ-ಯೇತರ ಪಕ್ಷಗಳಿಂದ ಭಾರೀ ಬೆಂಬಲ ಪಡೆದಿದ್ದಾರೆ. ವಿಶೇಷವಾಗಿ ಬುಡಕಟ್ಟು ಅಥವಾ ಇತರ ಹಿಂದುಳಿದ ಸಮುದಾಯಗಳ ಗಮನಾರ್ಹ ಜನಸಂಖ್ಯೆಯನ್ನು ಹೊಂದಿರುವ ರಾಜ್ಯಗಳಲ್ಲಿ ಬೆಂಬಲ ಸಿಕ್ಕಿದೆ.

ಜುಲೈ 21 ರಂದು ಎಣಿಕೆಯ ನಂತರ ಫಲಿತಾಂಶಗಳನ್ನು ಪ್ರಕಟಿಸಲಾಗುವುದು. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರಾವಧಿ ಜುಲೈ 24 ರಂದು ಕೊನೆಗೊಳ್ಳುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT