ಸಾಂದರ್ಭಿಕ ಚಿತ್ರ 
ದೇಶ

ನೀಟ್ ಪರೀಕ್ಷೆ: ಒಳಉಡುಪು ತೆಗೆದು ಪರೀಕ್ಷೆ ಬರೆಯುವಂತೆ ಹೇಳಿದ್ದ ಐವರ ಬಂಧನ

ಕೇರಳದ ಕೊಲ್ಲಂನಲ್ಲಿ ನೀಟ್ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಯರಿಗೆ ಬ್ರಾ ತೆಗೆಯುವಂತೆ ಹೇಳಿದ ಮೂವರು ಸೇರಿದಂತೆ ಐವರು ಮಹಿಳೆಯರನ್ನು ಬಂಧಿಸಲಾಗಿದೆ ಎಂದು ಕೇರಳ ಪೊಲೀಸ್ ಮೂಲಗಳು ತಿಳಿಸಿವೆ.

ಕೊಲ್ಲಂ: ಕೇರಳದ ಕೊಲ್ಲಂನಲ್ಲಿ ನೀಟ್ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಯರಿಗೆ ಬ್ರಾ ತೆಗೆಯುವಂತೆ ಹೇಳಿದ ಮೂವರು ಸೇರಿದಂತೆ ಐವರು ಮಹಿಳೆಯರನ್ನು ಬಂಧಿಸಲಾಗಿದೆ ಎಂದು ಕೇರಳ ಪೊಲೀಸ್ ಮೂಲಗಳು ತಿಳಿಸಿವೆ.

ಇದುವರೆಗೂ ಪರೀಕ್ಷೆ ವೇಳೆ ಅವಮಾನಕರ ತಪಾಸಣೆ ಬಗ್ಗೆ ಮೂರು ದೂರು ದಾಖಲಾಗಿವೆ. ತಮ್ಮ ಮಗಳಿಗಾದ ಅವಮಾನ ಮತ್ತು ಮಾನಸಿಕ ಹಿಂಸೆಯಿಂದ ದೂರು ನೀಡಿದ ವಿದ್ಯಾರ್ಥಿನಿ ತಂದೆಯ ದೂರನ್ನು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ನಿರಾಕರಿಸಿದೆ. ದೂರನ್ನು ಕಾಲ್ಪನಿಕ ಮತ್ತು ತಪ್ಪು ಉದ್ದೇಶದಿಂದ ದಾಖಲಿಸಲಾಗಿದೆ ಎಂದು ಕೊಲ್ಲಂನಲ್ಲಿರುವ ನೀಟ್ ಪರೀಕ್ಷಾ ಕೇಂದ್ರದ ಅಧೀಕ್ಷಕರು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಗೆ ತಿಳಿಸಿದ್ದಾರೆ.

ಸೋಮವಾರ 17 ವರ್ಷದ ವಿದ್ಯಾರ್ಥಿನಿಯ ತಂದೆ ಮಾಧ್ಯಮಗಳಿಗೆ ಹೇಳಿಕೆ ನೀಡಿದಾಗ ವಿವಾದವು ಭಾರೀ ಸುದ್ದಿಯಾಯಿತು. ತನ್ನ ಮಗಳು ತನ್ನ ಮೊದಲ ನೀಟ್ ಪರೀಕ್ಷೆಯನ್ನು ತೆಗೆದುಕೊಂಡಿದ್ದಳು.  ಮೂರು ಗಂಟೆಗಳ ಪರೀಕ್ಷೆಗೆ ಕುಳಿತುಕೊಳ್ಳುವ ಆಘಾತಕಾರಿ ಅನುಭವದಿಂದ ಇನ್ನೂ ಚೇತರಿಸಿಕೊಂಡಿಲ್ಲ.

ಪರೀಕ್ಷಾ ಕೇಂದ್ರವಾದ ಮಾರ್ ಥೋಮಾ ಇನ್‌ಸ್ಟಿಟ್ಯೂಟ್ ಆಫ್ ಇನ್‌ಫರ್ಮೇಷನ್ ಟೆಕ್ನಾಲಜಿಯಲ್ಲಿ ಭದ್ರತಾ ತಪಾಸಣೆ ನಡೆಸುತ್ತಿದ್ದಾಗ ಬ್ರಾನ ಲೋಹದ ಕೊಕ್ಕೆಗಳು ಬೀಪ್ ಆದ ನಂತರ ವಿದ್ಯಾರ್ಥಿನಿಗೆ ಬ್ರಾ ತೆಗೆಯುವಂತೆ ಹೇಳಿದ್ದರು ಎಂದು ತಂದೆ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

ಪರೀಕ್ಷಾ ಕೇಂದ್ರವು ಆರೋಪವನ್ನು ನಿರಾಕರಿಸಿದ್ದರೂ, ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಇಂದು NEET ಡ್ರೆಸ್ ಕೋಡ್ ಅಭ್ಯರ್ಥಿಯ ಪೋಷಕರು ಆಪಾದಿಸುವ ಯಾವುದೇ ಚಟುವಟಿಕೆಯನ್ನು ಅನುಮತಿಸುವುದಿಲ್ಲ ಎಂದು ಹೇಳಿದೆ.

ಕೇರಳದ ಉನ್ನತ ಶಿಕ್ಷಣ ಸಚಿವೆ ಆರ್ ಬಿಂದು ಅವರು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದಿದ್ದು, ಪರೀಕ್ಷಾ ಹಾಲ್‌ಗೆ ಪ್ರವೇಶಿಸುವ ಮೊದಲು ಹುಡುಗಿಯರನ್ನು ಅವರ ಬ್ರಾ ತೆಗೆಯುವಂತೆ ಒತ್ತಾಯಿಸಿದ ಏಜೆನ್ಸಿ ವಿರುದ್ಧ ಬಲವಾದ ಕ್ರಮ ಕೋರಿದ್ದಾರೆ. ಭದ್ರತಾ ತಪಾಸಣೆ ನಡೆಸಿ ಒಳ ಉಡುಪನ್ನು ತೆಗೆಯುವಂತೆ ಹೇಳಿದವರ ವಿರುದ್ಧ ಕೇರಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT