ಸುರೇಂದ್ರ ಸಿಂಗ್ ಬಿಷ್ಣೋಯ್ 
ದೇಶ

ಹರಿಯಾಣದಲ್ಲಿ ಅಕ್ರಮ ಗಣಿಗಾರಿಕೆ: ಕಾರ್ಯಾಚರಣೆಗಿಳಿದಿದ್ದ ಡಿಎಸ್ ಪಿ ಮೇಲೆ ಟ್ರಕ್ ಹರಿಸಿ ಹತ್ಯೆ

ಹರಿಯಾಣದಲ್ಲಿ ಗಣಿಗಾರಿಕೆ ಮಾಫಿಯಾ ತಂಡವನ್ನು ಸೆರೆಹಿಡಿಯುವ ಕಾರ್ಯಾಚರಣೆ ವೇಳೆ ಹಿರಿಯ ಪೊಲೀಸ್ ಅಧಿಕಾರಿ ಮೇಲೆ ಟ್ರಕ್ ಹರಿಸಿ ಹತ್ಯೆ ಮಾಡಿರುವ ಭಯಾನಕ ಘಟನೆ ವರದಿಯಾಗಿದೆ.

ಚಂಡೀಗಢ: ಹರಿಯಾಣದಲ್ಲಿ ಗಣಿಗಾರಿಕೆ ಮಾಫಿಯಾ ತಂಡವನ್ನು ಸೆರೆಹಿಡಿಯುವ ಕಾರ್ಯಾಚರಣೆ ವೇಳೆ ಹಿರಿಯ ಪೊಲೀಸ್ ಅಧಿಕಾರಿ ಮೇಲೆ ಟ್ರಕ್ ಹರಿಸಿ ಹತ್ಯೆ ಮಾಡಿರುವ ಭಯಾನಕ ಘಟನೆ ವರದಿಯಾಗಿದೆ.

ಅರಾವಳಿ ಪರ್ವತ ಶ್ರೇಣಿಯ ಸಮೀಪದ ಪಚಗಾಂವ್‌ನಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದಿದ್ದ ಡಿಎಸ್‌ಪಿ ಶ್ರೇಣಿಯ ಅಧಿಕಾರಿ ಸುರೇಂದ್ರ ಸಿಂಗ್ ಬಿಷ್ಣೋಯ್ ಅವರು ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಪೊಲೀಸ್ ತಂಡದೊಂದಿಗೆ ಸ್ಥಳಕ್ಕೆ ಬಂದಿದ್ದರು.

ಪೊಲೀಸ್ ಸಿಬ್ಬಂದಿಯನ್ನು ಕಂಡು ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದವರು ಸ್ಥಳದಿಂದ ಪರಾರಿಯಾಗಲು ಆರಂಭಿಸಿದರು. ಹಿರಿಯ ಅಧಿಕಾರಿ ಸುರೇಂದ್ರ ಸಿಂಗ್ ಬಿಷ್ಣೋಯ್ ದಾರಿಯಲ್ಲಿ ನಿಂತು ಕಲ್ಲು ತುಂಬಿದ ವಾಹನಗಳನ್ನು ನಿಲ್ಲಿಸುವಂತೆ ಸೂಚಿಸಿದರು. ಆದರೆ ಟ್ರಕ್‌ನ ಚಾಲಕ ಆತನ ಮೇಲೆ ಟ್ರಕ್ ಹರಿಸಿದ್ದು, ಪೊಲೀಸ್ ಅಧಿಕಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಪೊಲೀಸರು ಪಕ್ಕಕ್ಕೆ ಜಿಗಿದಿದ್ದು, ಸ್ವಲ್ಪದರಲ್ಲೇ ಪಾರಾಗಿದ್ದಾರೆ. ನಂತರ ಆರೋಪಿಗಳು ಪ್ರದೇಶದಿಂದ ಪರಾರಿಯಾಗಿದ್ದಾರೆ.

ಆಘಾತಕಾರಿ ಘಟನೆಯ ನಂತರ, ಹರಿಯಾಣ ಗೃಹ ಸಚಿವ ಅನಿಲ್ ವಿಜ್ ಅವರು ಗಣಿಗಾರಿಕೆ ಮಾಫಿಯಾವನ್ನು ಬಿಡುವುದಿಲ್ಲ. ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ, ಯಾರನ್ನೂ ಬಿಡುವುದಿಲ್ಲ ಎಂದಿದ್ದಾರೆ.

2009 ರ ಹಿಂದಿನ ಸುಪ್ರೀಂ ಕೋರ್ಟ್ ನಿಷೇಧದ ಆದೇಶದ ಹೊರತಾಗಿಯೂ, ಅರಾವಳಿ ಪ್ರದೇಶದ ಹಲವಾರು ಸ್ಥಳಗಳಲ್ಲಿ ಗಣಿಗಾರಿಕೆ ಅವ್ಯಾಹತವಾಗಿ ಮುಂದುವರೆದಿದೆ.

ಅರಾವಳಿ ಬಚಾವೋ ಸಿಟಿಜನ್ಸ್ ಮೂವ್ಮೆಂಟ್ ಹೆಸರಿನ ನಾಗರಿಕರ ಗುಂಪು ಈ ವರ್ಷದ ಆರಂಭದಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯನ್ನು ಸಂಪರ್ಕಿಸಿತು. ಈ ಪ್ರದೇಶದಲ್ಲಿ ಕನಿಷ್ಠ 16 ಸ್ಥಳಗಳಲ್ಲಿ ಅಕ್ರಮ ಗಣಿಗಾರಿಕೆ ವ್ಯಾಪಕವಾಗಿ ನಡೆಯುತ್ತಿದೆ ಎಂದು ಅವರು ಆರೋಪಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT