ಮಾರ್ಗರೇಟ್ ಆಳ್ವ ನಾಮಪತ್ರ 
ದೇಶ

ಉಪ ರಾಷ್ಟ್ರಪತಿ ಹುದ್ದೆಗೆ ಮಾರ್ಗರೇಟ್ ಆಳ್ವ ನಾಮಪತ್ರ: ಗಾಂಧಿ ಕುಟುಂಬದ ನಿಷ್ಠಾವಂತೆಯಾದರೂ ಸೋನಿಯಾ ಜೊತೆಗಿತ್ತು ಭಿನ್ನಾಭಿಪ್ರಾಯ!

14ನೇ ಉಪರಾಷ್ಟ್ರಪತಿ ಹುದ್ದೆಗೆ ಆಕಾಂಕ್ಷಿಯಾಗಿ ಮಾರ್ಗರೆಟ್ ಆಳ್ವಾ ಇಂದು ವಿಪಕ್ಷಗಳ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ನವದೆಹಲಿ: 14ನೇ ಉಪರಾಷ್ಟ್ರಪತಿ ಹುದ್ದೆಗೆ ಆಕಾಂಕ್ಷಿಯಾಗಿ ಮಾರ್ಗರೆಟ್ ಆಳ್ವಾ ಇಂದು ವಿಪಕ್ಷಗಳ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ಶಿವಸೇನೆ ನಾಯಕ ಸಂಜಯ್ ರಾವುತ್ ಮತ್ತು ಇತರ ವಿರೋಧ ಪಕ್ಷದ ನಾಯಕರು ಉಪಸ್ಥಿತರಿದ್ದರು.

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಮಾರ್ಗರೇಟ್ ಆಳ್ವ ಅವರನ್ನು ವಿರೋಧ ಪಕ್ಷದ ಜಂಟಿ ಅಭ್ಯರ್ಥಿಯಾಗಿದ್ದು, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಘೋಷಿಸಿದ್ದರು.

ಸೋನಿಯಾ ಗಾಂಧಿಯೊಂದಿಗೆ ಭಿನ್ನಾಭಿಪ್ರಾಯ:
2008 ರಲ್ಲಿ ಮೊದಲ ಬಾರಿಗೆ ಆಗಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾರ್ಗರೇಟ್ ಆಳ್ವ ಮಧ್ಯೆ ಭಿನ್ನಾಭಿಪ್ರಾಯ ಕಾಣಿಸಿಕೊಂಡಿತು. ಬಳಿಕ ಕರ್ನಾಟಕದಲ್ಲಿ ಪಕ್ಷದ ನಾಯಕತ್ವವು ಟಿಕೆಟ್ ಮಾರಾಟ ಮಾಡುತ್ತಿದೆ ಎಂದು ಸಾರ್ವಜನಿಕವಾಗಿ ಆಳ್ವ ಆರೋಪಿಸಿದ್ದರು. ವಾಸ್ತವವಾಗಿ ಅವರ ಪುತ್ರ ನಿವೇದಿತ್ ಆಳ್ವಾಗೆ ಟಿಕೆಟ್ ನೀಡಲು ರಾಜ್ಯ ನಾಯಕತ್ವ ನಿರಾಕರಿಸಿತ್ತು.

ಹಲವು ವಿಚಾರಗಳಲ್ಲಿ ಭಿನ್ನಾಭಿಪ್ರಾಯ ಹೊಂದಿದ ಬಳಿಕ ಆಳ್ವಾ ಅವರು, ಸೋನಿಯಾ ಗಾಂಧಿಯನ್ನು ಭೇಟಿಯಾದರು. ನಂತರ ಅವರು ಎಲ್ಲಾ ಪಕ್ಷದ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದರು. ಆದ್ರೆ, ಸ್ವಲ್ಪ ಸಮಯದ ನಂತರ ಮತ್ತೆ ಪಕ್ಷಕ್ಕೆ ಹಿಂತಿರುಗಿದರು. ಬಳಿಕ ಅವರನ್ನು ಉತ್ತರಾಖಂಡದ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಯಿತು. ಉತ್ತರಾಖಂಡದ ಮೊದಲ ಮಹಿಳಾ ರಾಜ್ಯಪಾಲರಾಗಿದ್ದರು. ಅವರ ಮತ್ತೊಬ್ಬ ಪುತ್ರ ನಿಖಿಲ್ ಆಳ್ವಾ ರಾಹುಲ್ ಗಾಂಧಿಗೆ ಆಪ್ತರಾಗಿದ್ದಾರೆ. ಅವರ ಉಮೇದುವಾರಿಕೆ ದೇಶದ ವೈವಿಧ್ಯತೆಯ ಪ್ರಾತಿನಿಧ್ಯ ಎಂದು ಕಾಂಗ್ರೆಸ್ ಪ್ರಚಾರ ವಿಭಾಗದ ಮುಖ್ಯಸ್ಥ ಜೈರಾಮ್ ರಮೇಶ್ ಹೇಳಿದ್ದಾರೆ.

ಆಳ್ವಾ ಗಾಂಧಿ ಕುಟುಂಬದ ನಿಷ್ಠಾವಂತೆ:
1942, ಏಪ್ರಿಲ್ 14ರಂದು ಮಂಗಳೂರಿನಲ್ಲಿ ಜನಿಸಿರುವ ಮಾರ್ಗರೇಟ್ ಆಳ್ವಾ ಅವರು, ಗಾಂಧಿ ಕುಟುಂಬಕ್ಕೆ ನಿಷ್ಠರಾಗಿರುವ ಕಾಂಗ್ರೆಸ್ ನಾಯಕರ ಪೀಳಿಗೆಯಿಂದ ಬಂದವರು. 1969 ರಲ್ಲಿ ಅವರು ಇಂದಿರಾ ಗಾಂಧಿಯವರ ನಿಷ್ಠೆಯೊಂದಿಗೆ ರಾಜಕೀಯಕ್ಕೆ ಪ್ರವೇಶಿಸಿದರು. ಗಾಂಧಿ ಕುಟುಂಬಕ್ಕೆ ಅವರ ನಿಷ್ಠೆ ನಾಲ್ಕು ದಶಕಗಳ ಕಾಲ ಮುಂದುವರೆಯಿತು. ಅಲ್ಲದೆ, ಕಾಂಗ್ರೆಸ್ ಪಕ್ಷದಲ್ಲಿ ಹಲವು ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದವರು. 1974 ರಿಂದ 1998 ರವರೆಗೆ ಪಕ್ಷವು ಅವರನ್ನು ನಿರಂತರವಾಗಿ ರಾಜ್ಯಸಭೆಗೆ ಕಳುಹಿಸಿತು. ಇದರ ನಂತರ ಅವರು 1999 ರಿಂದ 2004 ರವರೆಗೆ ಲೋಕಸಭೆಯ ಸದಸ್ಯರಾಗಿದ್ದರು. ಒಮ್ಮೆ ಕ್ಯಾಬಿನೆಟ್ ಮಂತ್ರಿ ಹುದ್ದೆಯನ್ನೂ ಅಲಂಕರಿಸಿದ್ದರು. ಆದರೆ, 2004ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಸೋತರು. ನಂತರ ಆಳ್ವಾ ಅವರನ್ನು ಗೋವಾ, ರಾಜಸ್ಥಾನ, ಗುಜರಾತ್, ಉತ್ತರಾಖಂಡ್ ರಾಜ್ಯಗಳ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT