ಪ್ರತಿಭಟನಾನಿರತ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತಿತರರು 
ದೇಶ

ಸಂಸತ್ ಅಧಿವೇಶನ: ಜಿಎಸ್ ಟಿ, ಬೆಲೆ ಏರಿಕೆ ವಿರುದ್ಧ ಪ್ರತಿಪಕ್ಷಗಳ ಗದ್ದಲ; ಉಭಯ ಸದನಗಳ ಕಲಾಪ ಮಧ್ಯಾಹ್ನಕ್ಕೆ ಮುಂದೂಡಿಕೆ

ಮುಂಗಾರು ಅಧಿವೇಶನದ ಎರಡನೇ ದಿನವಾದ ಇಂದು ಕೂಡಾ ಕೆಲವು ಹೊಸ ಉತ್ಪನ್ನಗಳ ಮೇಲೆ ಜಿಎಸ್ ಟಿ ವಿಧಿಸಿರುವುದನ್ನು ವಿರೋಧಿಸಿ ಪ್ರತಿಪಕ್ಷಗಳಾದ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಡಿಎಂಕೆ ಮತ್ತಿತರ ಪಕ್ಷಗಳ ಸದಸ್ಯರು ಭಿತ್ತಿಪತ್ರ ಹಿಡಿದು, ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.

ನವದೆಹಲಿ: ಮುಂಗಾರು ಅಧಿವೇಶನದ ಎರಡನೇ ದಿನವಾದ ಇಂದು ಕೂಡಾ ಕೆಲವು ಹೊಸ ಉತ್ಪನ್ನಗಳ ಮೇಲೆ ಜಿಎಸ್ ಟಿ ವಿಧಿಸಿರುವುದನ್ನು ವಿರೋಧಿಸಿ ಪ್ರತಿಪಕ್ಷಗಳಾದ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಡಿಎಂಕೆ ಮತ್ತಿತರ ಪಕ್ಷಗಳ ಸದಸ್ಯರು ಭಿತ್ತಿಪತ್ರ ಹಿಡಿದು, ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.

ಬೆಲೆ ಏರಿಕೆ ವಿರುದ್ಧ ಮೋದಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಗದ್ದಲ ಏಬ್ಬಿಸಿದರು. ಕೆಲವು ವಸ್ತುಗಳ ಮೇಲೆ ಮತ್ತೆ 'ಗಬ್ಬರ್ ಸಿಂಗ್ ಟ್ಯಾಕ್ಸ್ ' ಎಂದು ಬರೆಯಲಾದ ಭಿತ್ತಿಪತ್ರ ಪ್ರದರ್ಶಿಸಿ ಗದ್ದಲ ಉಂಟುಮಾಡಿದರು. ಪ್ರತಿಪಕ್ಷಗಳ ಸದಸ್ಯರು ತಮ್ಮ ಆಸನಗಳಿಗೆ ತೆರಳುವಂತೆ ಸ್ಪೀಕರ್ ಓಂ ಬಿರ್ಲಾ ಮನವಿ ಮಾಡಿದರು.

ಸದನದ ಒಳಗಡೆ ಭಿತ್ತಿಪತ್ರ ಹಿಡಿಯುವುದು ಸಂಸದೀಯ ನಿಯಮಗಳಿಗೆ ವಿರುದ್ಧವಾದದ್ದು ಎಂದರು. ಸ್ಪೀಕರ್ ಮನವಿಗೆ ಪ್ರತಿಪಕ್ಷಗಳ ಸದಸ್ಯರು ಕಿವಿಗೂಡದ ಹಿನ್ನೆಲೆಯಲ್ಲಿ 15 ನಿಮಿಷ ಕಲಾಪ ನಡೆಸಿ, ಮಧ್ಯಾಹ್ನ 2 ಗಂಟೆಯವರೆಗೂ ಮುಂದೂಡಲಾಯಿತು.

ಬೆಲೆ ಏರಿಕೆಯಿಂದ ಹಿಡಿದು ಅಗ್ನಿಪಥ ಯೋಜನೆಯವರೆಗಿನ ವಿಷಯಗಳ ಕುರಿತು ತಕ್ಷಣ ಚರ್ಚೆ ನಡೆಸುವಂತೆ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಪಟ್ಟು ಹಿಡಿದಿದ್ದರಿಂದ ರಾಜ್ಯಸಭೆ ಕಲಾಪವನ್ನು ಮಂಗಳವಾರ ಭೋಜನಾ ವಿರಾಮಕ್ಕೂ ಮುನ್ನ ಅಧಿವೇಶನದಲ್ಲಿ ಯಾವುದೇ ವ್ಯವಹಾರ ನಡೆಸದೆ ಮುಂದೂಡಲಾಯಿತು.

ಪ್ರಸ್ತಾಪಿತ ವಿಷಯಗಳ ಮೇಲಿನ ಚರ್ಚೆಗೆ ಕಾಂಗ್ರೆಸ್, ಎಡ ಹಾಗೂ ಎಎಪಿ ಒತ್ತಾಯಿಸಿದ್ದರಿಂದ ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೂ ಮುಂದೂಡಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

SCROLL FOR NEXT