ಹಾಸನದಲ್ಲಿ ಮೃತ ಆನೆಯಿಂದ ತೆಗೆಯಲಾದ ದಂತಗಳು 
ದೇಶ

ಆನೆ ಹಂತಕರ ರಕ್ಷಣೆ: ಮನೇಕಾ ಗಾಂಧಿ ಆರೋಪ ತಳ್ಳಿಹಾಕಿದ ಪ್ರಜ್ವಲ್ ರೇವಣ್ಣ

ಮಾಜಿ ಕೇಂದ್ರ ಸಚಿವೆ ಮನೇಕಾ ಗಾಂಧಿ ಅವರು ತಮ್ಮ ವಿರುದ್ಧ ಮಾಡಿರುವ ಆರೋಪಗಳನ್ನು ಹಾಸನ ಸಂಸದ ರೇವಣ್ಣ ತಳ್ಳಿಹಾಕಿದ್ದಾರೆ. 

ನವದೆಹಲಿ: ಮಾಜಿ ಕೇಂದ್ರ ಸಚಿವೆ ಮನೇಕಾ ಗಾಂಧಿ ಅವರು ತಮ್ಮ ವಿರುದ್ಧ ಮಾಡಿರುವ ಆರೋಪಗಳನ್ನು ಹಾಸನ ಸಂಸದ ರೇವಣ್ಣ ತಳ್ಳಿಹಾಕಿದ್ದಾರೆ. 

ಇತ್ತೀಚೆಗೆ ಹಾಸನ ಜಿಲ್ಲೆಯ ವೀರಾಪುರದಲ್ಲಿ ಆನೆಗೆ ವಿದ್ಯುತ್ ಶಾಕ್ ಕೊಟ್ಟು ಹತ್ಯೆ ಮಾಡಿ ದಂತಗಳನ್ನು ತೆಗೆದ ಪ್ರಕರಣದಲ್ಲಿ ಹಂತಕರನ್ನು ಪ್ರಜ್ವಲ್ ರೇವಣ್ಣ ರಕ್ಷಿಸುತ್ತಿದ್ದಾರೆ ಎಂದು ಮನೇಕಾ ಗಾಂಧಿ ಆರೋಪಿಸಿ ಸಿಎಂ ಬೊಮ್ಮಾಯಿಗೆ ಪತ್ರ ಬರೆದಿದ್ದರು. 

ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಪ್ರಜ್ವಲ್ ರೇವಣ್ಣ, ಕೇಂದ್ರ ಹಾಗೂ ರಾಜ್ಯಗಳಲ್ಲಿ ಬಿಜೆಪಿಯೇ ಅಧಿಕಾರದಲ್ಲಿದೆ. ಅವರೇ ಈ ಬಗ್ಗೆ ಗಂಭೀರವಾದ ತನಿಖೆ ನಡೆಸಲಿ ಎಂದು ಸವಾಲು ಹಾಕಿದ್ದಾರೆ. ಈ ವಿಷಯವನ್ನು ವಿವರವಾಗಿ ಅಧ್ಯಯನ ಮಾಡಿದ ಬಳಿಕ ಮನೇಕಾ ಗಾಂಧಿ ಅವರು ವಿಷಯ ಪ್ರಸ್ತಾಪಿಸಬಹುದಾಗಿತ್ತು ಎಂದು ಹೇಳಿರುವ ಸಂಸದರು, ತಮಗೆ ಆನೆ ಸಾವನ್ನಪ್ಪಿದ್ದ ಮಾಹಿತಿ ತಿಳಿದಿತ್ತು. ಆದರೆ ದಂತ ತೆಗೆದು ಹೂತು ಹಾಕಿರುವ ಮಾಹಿತಿ ತಿಳಿದಿರಲಿಲ್ಲ ಎಂದಿದ್ದಾರೆ. 

ನಾನು ಪ್ರಕರಣವನ್ನು ಹಾಸನ ನಗರಕ್ಕೆ ವರ್ಗಾಯಿಸುವಂತೆ ಪೊಲೀಸರಿಗೆ ಒತ್ತಡ ಹೇರಿರಲಿಲ್ಲ ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದು ಬಿಜೆಪಿ ಈ ಆರೋಪವನ್ನು ಸಾಬೀತುಪಡಿಸಿದಲ್ಲಿ ಯಾವುದೇ ಕ್ರಮ ಎದುರಿಸಲೂ ಸಿದ್ಧ ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!