ರಾಜ್ಯಸಭೆ 
ದೇಶ

ಹಣದುಬ್ಬರ, ಬೆಲೆಯೇರಿಕೆ ಗದ್ದಲ: ರಾಜ್ಯಸಭೆ ಕಲಾಪ ನಾಳೆಗೆ ಮುಂದೂಡಿಕೆ

ಹೆಚ್ಚುತ್ತಿರುವ ಹಣದುಬ್ಬರ, ಕೆಲವು ಅಗತ್ಯ ವಸ್ತುಗಳ ಮೇಲೆ ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಹೇರಿಕೆ ಮತ್ತು ಅಗ್ನಿಪಥ್ ಯೋಜನೆ ವಿರುದ್ಧ ಭೋಜನ ವಿರಾಮದ ನಂತರವೂ ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಮತ್ತು ಇತರ ಪಕ್ಷಗಳು ಭಾರಿ...

ನವದೆಹಲಿ: ಹೆಚ್ಚುತ್ತಿರುವ ಹಣದುಬ್ಬರ, ಕೆಲವು ಅಗತ್ಯ ವಸ್ತುಗಳ ಮೇಲೆ ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಹೇರಿಕೆ ಮತ್ತು ಅಗ್ನಿಪಥ್ ಯೋಜನೆ ವಿರುದ್ಧ ಭೋಜನ ವಿರಾಮದ ನಂತರವೂ ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಮತ್ತು ಇತರ ಪಕ್ಷಗಳು ಭಾರಿ ಕೋಲಾಹಲ ಸೃಷ್ಟಿಸಿದವು. ಉಪ ಸಭಾಪತಿ ಹರಿವಂಶ್ ಅವರು ಭೋಜನ ವಿರಾಮದ ನಂತರ ಕಲಾಪ ಆರಂಭಿಸಲು ಮುಂದಾದರು. ಈ ವೇಳೆ ಪ್ರತಿಪಕ್ಷ ಸದಸ್ಯರು ತೀವ್ರ ಗದ್ದಲ ಎಬ್ಬಿಸಿದಾಗ ಹರಿವಂಶ್ ಸದನವನ್ನು ನಾಳೆಗೆ ಮುಂದೂಡಿದರು.

ಇದಕ್ಕೂ ಮುನ್ನ ಬೆಳಗ್ಗೆ ರಾಜ್ಯಸಭೆಯಲ್ಲಿ ನಿಯಮ 267ರ ಅಡಿಯಲ್ಲಿ ಚರ್ಚೆಗೆ ಅವಕಾಶ ನೀಡಬೇಕೆಂದು ಪ್ರತಿಪಕ್ಷಗಳು ಬೇಡಿಕೆ ಇಟ್ಟವು. ಆದರೆ, ಸಭಾಪತಿ ಎಂ.ವೆಂಕಯ್ಯ ನಾಯ್ಡು ಅದನ್ನು ತಿರಸ್ಕರಿಸಿದರು. ಇದನ್ನು ವಿರೋಧಿಸಿ ಪ್ರತಿಪಕ್ಷ ಸದಸ್ಯರು ಗದ್ದಲ ಎಬ್ಬಿಸಿದ್ದರಿಂದ ಸದನವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಬೇಕಾಯಿತು.

ನಿಯಮ 267 ರ ಅಡಿಯಲ್ಲಿ ಹಣದುಬ್ಬರ ಸಮಸ್ಯೆಯನ್ನು ಚರ್ಚಿಸಲು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಇತರ ಕೆಲವು ನಾಯಕರಿಂದ ನೋಟಿಸ್ ಸ್ವೀಕರಿಸಲಾಗಿದೆ. ಆದರೆ, ಈ ನೋಟಿಸ್‌ಗಳನ್ನು ತಿರಸ್ಕರಿಸಿರುವುದಾಗಿ ಸಭಾಪತಿ ತಿಳಿಸಿದರು.

ಇತರ ವಿಷಯಗಳ ಚರ್ಚೆಯ ಸಮಯದಲ್ಲಿ ಬೇಡಿಕೆ ಇಟ್ಟ ವಿಷಯಗಳನ್ನು ಚರ್ಚಿಸಬಹುದು ಎಂದು ನಾಯ್ಡು ಹೇಳಿದರು. ಹಣದುಬ್ಬರದ ವಿಷಯವನ್ನೂ ಆಗ ಚರ್ಚಿಸಬಹುದು. ಆದರೆ ಈಗ ನಿಗದಿಪಡಿಸಿದ ಅಜೆಂಡಾವನ್ನು ಇತ್ಯರ್ಥಪಡಿಸಬೇಕಾಗಿದೆ ಎಂದು ಸಭಾಪತಿ ಹೇಳಿದರು. ಇದಕ್ಕೆ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು. ಸದಸ್ಯರ ಬಿರುಸಿನ ವರ್ತನೆ ಕಂಡು ಸಭಾಪತಿಯವರು ಸದನದ ಕಲಾಪವನ್ನು 2 ಗಂಟೆಗೆ ಮುಂದೂಡಿದರು.

ಹೀಗಾಗಿ ಮುಂಗಾರು ಅಧಿವೇಶನದಲ್ಲಿ ಸತತ ಎರಡನೇ ದಿನವೂ ಹಣದುಬ್ಬರ ಮತ್ತಿತರ ವಿಷಯಗಳ ಕುರಿತು ಚರ್ಚೆಗೆ ಆಗ್ರಹಿಸಿ ಕೋಲಾಹಲ ಉಂಟಾಗಿ ಕಲಾಪಕ್ಕೆ ಅಡ್ಡಿಯಾಗಿದೆ. ಇದೇ ವಿಚಾರವಾಗಿ ಸಂಸತ್ ಅಧಿವೇಶನದ ಮೊದಲ ದಿನದ ಕಲಾಪವೂ ಮುಂದೂಡಲ್ಪಟ್ಟಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT