ಸಾಂದರ್ಭಿಕ ಚಿತ್ರ 
ದೇಶ

ಅರುಣಾಚಲ: ತಲೆಮರೆಸಿಕೊಂಡಿರುವ ಅತ್ಯಾಚಾರ ಆರೋಪಿ, ಬಿಜೆಪಿ ಶಾಸಕನ ಜಾಮೀನು ಅರ್ಜಿ ವಜಾ

ಗರ್ಭಿಣಿ ಮಹಿಳೆಯೊಬ್ಬರು ಬಿಜೆಪಿ ಶಾಸಕ ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿದ ನಂತರ ತಲೆಮರೆಸಿಕೊಂಡಿರುವ ಅರುಣಾಚಲ ಪ್ರದೇಶದ ಬಿಜೆಪಿ ಶಾಸಕ ಲೋಕಮ್ ತಸ್ಸಾರ್ ಅವರ ಜಾಮೀನು ಅರ್ಜಿಯನ್ನು ಸ್ಥಳೀಯ...

ಗುವಾಹಟಿ: ಗರ್ಭಿಣಿ ಮಹಿಳೆಯೊಬ್ಬರು ಬಿಜೆಪಿ ಶಾಸಕ ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿದ ನಂತರ ತಲೆಮರೆಸಿಕೊಂಡಿರುವ ಅರುಣಾಚಲ ಪ್ರದೇಶದ ಬಿಜೆಪಿ ಶಾಸಕ ಲೋಕಮ್ ತಸ್ಸಾರ್ ಅವರ ಜಾಮೀನು ಅರ್ಜಿಯನ್ನು ಸ್ಥಳೀಯ ನ್ಯಾಯಾಲಯ ವಜಾಗೊಳಿಸಿದೆ.

ಕೊಲೊರಿಯಾಂಗ್ ಕ್ಷೇತ್ರವನ್ನು ಪ್ರತಿನಿಧಿಸುವ ಲೋಕಮ್ ತಸ್ಸಾರ್ ಅವರು ಜುಲೈ 4 ರಂದು ರಾಜ್ಯ ರಾಜಧಾನಿ ಇಟಾನಗರ ಬಳಿಯ ತಮ್ಮ ನಿವಾಸದಲ್ಲಿ 24 ವರ್ಷದ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ಆರೋಪ ಎದುರಿಸುತ್ತಿದ್ದಾರೆ.

ನಿರೀಕ್ಷಣಾ ಜಾಮೀನು ಕೋರಿ ಶಾಸಕರು ಸಲ್ಲಿಸಿದ್ದ ಅರ್ಜಿಯನ್ನು ಸ್ಥಳೀಯ ನ್ಯಾಯಾಲಯ ವಜಾಗೊಳಿಸಿದೆ. ಆರೋಪಿ ಶಾಸಕ ತಸ್ಸಾರ್ ಅವರು ತಲೆಮರೆಸಿಕೊಂಡಿದ್ದು, ಪತ್ತೆಯಾದ ತಕ್ಷಣ ಅವರನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

"ಪ್ರಕರಣದ ತನಿಖೆ ನಡೆಯುತ್ತಿದೆ. ನಾವು ಅವರ ಮನೆ ಮೇಲೆ ದಾಳಿ ನಡೆಸಿದ್ದೇವೆ. ಆದರೆ ಅವರು ಪತ್ತೆಯಾಗಲಿಲ್ಲ. ಅವರು ತಲೆಮರೆಸಿಕೊಂಡಿದ್ದಾರೆ" ಎಂದು ಪಾಪಮ್ ಪಾರೆ ಪೊಲೀಸ್ ವರಿಷ್ಠಾಧಿಕಾರಿ ನೀಲಂ ರೇಗಾ ಮಂಗಳವಾರ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಸೋಮವಾರ ನಡೆದ ರಾಷ್ಟ್ರಪತಿ ಚುನಾವಣೆಯಲ್ಲೂ ತಾಸ್ಸಾರ್ ಅವರು ಭಾಗವಹಿಸಲಿಲ್ಲ ಎಂದು ಅವರು ಹೇಳಿದರು. ಶಾಸಕರು ಬಂದು ಮತ ಚಲಾಯಿಸುತ್ತಾರೆ ಎಂಬ ನಿರೀಕ್ಷೆಯಲ್ಲಿ ಪೊಲೀಸ್ ತಂಡ ರಾಜ್ಯ ವಿಧಾನಸಭೆಗೆ ಆಗಮಿಸಿತ್ತು. ಆದರೆ ಅವರು ಬರಲಿಲ್ಲ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT