ಸಂಜಯ್ ರಾವತ್ 
ದೇಶ

ಶಿವಸೇನೆ ಪಕ್ಷಕ್ಕಾಗಿ, ಚಿಹ್ನೆಗಾಗಿ ಹೋರಾಟಕ್ಕೆ ಸಿದ್ಧ: ಸಂಜಯ್ ರಾವತ್

ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ರಾಜಕೀಯದಿಂದಾಗಿ ಎರಡು ಬಣಗಳಾಗಿರುವ ಶಿವಸೇನೆಯಲ್ಲಿ ಇದೀಗ ಪಕ್ಷ ನಿಯಂತ್ರಣ ಹಾಗೂ ಚಿಹ್ನೆ ಯಾವ ಬಣಕ್ಕೆ ಹೋಗಬೇಕು ಎಂಬ ವಿಚಾರ ಕಾನೂನು ಸಮರಕ್ಕೆ ವೇದಿಕೆಯಾಗಿದೆ.

ಮುಂಬೈ: ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ರಾಜಕೀಯದಿಂದಾಗಿ ಎರಡು ಬಣಗಳಾಗಿರುವ ಶಿವಸೇನೆಯಲ್ಲಿ ಇದೀಗ ಪಕ್ಷ ನಿಯಂತ್ರಣ ಹಾಗೂ ಚಿಹ್ನೆ ಯಾವ ಬಣಕ್ಕೆ ಸೇರಬೇಕು ಎಂಬ ವಿಚಾರ ಕಾನೂನು ಸಮರಕ್ಕೆ ವೇದಿಕೆಯಾಗಿದೆ. ಈ ನಡುವೆ ಮಂಗಳವಾರ ಪ್ರತಿಕ್ರಿಯಿಸಿರುವ ಶಿವಸೇನಾ ಹಿರಿಯ ಮುಖಂಡ ಸಂಜಯ್ ರಾವತ್, ಪಕ್ಷ ನಿಯಂತ್ರಣ ಹಾಗೂ ಚಿಹ್ಹೆಗಾಗಿ ಹೋರಾಟ ನಡೆಸಲು ಸಿದ್ದರಾಗಿರುವುದಾಗಿ ತಿಳಿಸಿದ್ದಾರೆ.

ಮಹಾರಾಷ್ಟ್ರವನ್ನು ಮೂರು ತುಂಡಾಗಿ ವಿಭಜಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ಶಿವಸೇನೆಯನ್ನು ವಿಭಜಿಸಿವುದು ಕೇಸರಿ ಪಕ್ಷದ ಪಿತೂರಿ ಎಂದು ಅವರು ಆರೋಪಿಸಿದ್ದಾರೆ. ರಾಜ್ಯದ ಕೆಲವು ಭಾಗಗಳಲ್ಲಿ ಭೀಕರ ಪ್ರವಾಹ ತಲೆದೋರಿ ಸಂಕಷ್ಟ ಅನುಭವಿಸುತ್ತಿರುವಾಗ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಶಿವಸೇನಾ ಸಂಸದಸೀಯ ಪಕ್ಷವನ್ನು ಹೊಡೆಯುವ ಪ್ರಯತ್ನ ಮಾಡುತ್ತಿರುವುದಾಗಿ ಆರೋಪಿಸಿದರು. 

ಕೆಲವು ಸಂಸದರು, ಶಾಸಕರು ಪಕ್ಷ ತೊರೆಯಬಹುದು, ಆದರೆ, ಆದರೆ ಶಾಸಕರು ಮತ್ತು ಸಂಸದರು ಮಾತ್ರ ಶಿವಸೇನೆಯನ್ನು ರೂಪಿಸುವುದಿಲ್ಲ. ಮುಂದಿನ ಯಾವುದೇ ಚುನಾವಣೆಯಲ್ಲಿ ಬಂಡಾಯ ಶಾಸಕರು ಗೆಲ್ಲದಂತೆ ಶಿವ ಸೈನಿಕರು ಮಾಡಲಿದ್ದಾರೆ ಎಂದರು. 

ಶಿವಸೇನಾ ಸಂಸದೀಯ ಪಕ್ಷವೂ ಬಣಗಳಾಗಿ ರೂಪುಗೊಳ್ಳುತ್ತಿದೆ, ಬಂಡಾಯ ಬಣವು ರಾಹುಲ್ ಶೆವಾಲೆ ಅವರನ್ನು ತಮ್ಮ ನಾಯಕನನ್ನಾಗಿ ಪ್ರತ್ಯೇಕ ಗುಂಪಾಗಿ ಗುರುತಿಸಲು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಮನವಿ ಮಾಡಲು   ಸಿದ್ಧವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT