ಭಾರತೀಯ ಸೇನೆ 
ದೇಶ

ಜಮ್ಮು-ಕಾಶ್ಮೀರ ಪೊಲೀಸರ ಭರ್ಬರಿ ಬೇಟೆ: ರಾಜೌರಿಯಲ್ಲಿ 4 ಲಷ್ಕರ್ ಉಗ್ರರ ಬಂಧನ; ಶಸ್ತ್ರಾಸ್ತ್ರ, ಮದ್ದುಗುಂಡು ವಶ!

ರಜೌರಿ ಜಿಲ್ಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಲಷ್ಕರ್-ಎ-ತೊಯ್ಬಾ(ಎಲ್‌ಇಟಿ) ಜಾಲವನ್ನು ಬೇಧಿಸಿ ನಾಲ್ವರನ್ನು ಬಂಧಿಸಿದ್ದು ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಜೌರಿ(ಜಮ್ಮು ಮತ್ತು ಕಾಶ್ಮೀರ): ರಜೌರಿ ಜಿಲ್ಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಲಷ್ಕರ್-ಎ-ತೊಯ್ಬಾ(ಎಲ್‌ಇಟಿ) ಜಾಲವನ್ನು ಬೇಧಿಸಿ ನಾಲ್ವರನ್ನು ಬಂಧಿಸಿದ್ದು ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಯಾಚರಣೆ ವೇಳೆ ಲಷ್ಕರ್ ಕಮಾಂಡರ್, ರಾಜೌರಿಯ ದರ್ಜ್ ನಿವಾಸಿ ತಾಲಿಬ್ ಹುಸೇನ್ ಶಾ ಅಲಿಯಾಸ್ ಅಬು ಅಹ್ಮದ್ ಮತ್ತು ಅವನ ಸಹಚರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಪಿರ್ ಪಂಜಾಲ್ ಪ್ರದೇಶದಲ್ಲಿ ನಡೆದ ಎಲ್ಲಾ ಪ್ರಮುಖ ಭಯೋತ್ಪಾದಕ ಚಟುವಟಿಕೆಗಳಲ್ಲಿ ಶಾ ಪ್ರಮುಖ ಪಾತ್ರ ವಹಿಸಿದ್ದಾನೆ.

'ಭದ್ರತಾ ಪಡೆಗಳು, ಅಲ್ಪಸಂಖ್ಯಾತ ಸಮುದಾಯ ಮತ್ತು ಕಾಶ್ಮೀರದ ಪ್ರಮುಖ ರಾಜಕೀಯ ವ್ಯಕ್ತಿಗಳ ಮೇಲೆ ಭಯೋತ್ಪಾದಕ ದಾಳಿಗಳನ್ನು ನಡೆಸುವ ಕಾರ್ಯವನ್ನು ಅವನಿಗೆ ವಹಿಸಲಾಗಿತ್ತು ಎಂದು ಪೊಲೀಸರು ಹೇಳಿದರು.

ತಾಲಿಬ್ ಹುಸೇನ್ ಶಾ ಮತ್ತು ಆತನ ಸಹಚರರು ಐದು ಕ್ರಿಮಿನಲ್ ಮತ್ತು ಭಯೋತ್ಪಾದನೆ ಸಂಬಂಧಿತ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಂಡರ್ ಬ್ಯಾರೆಲ್ ಗ್ರೆನೇಡ್ ಲಾಂಚರ್ ಗ್ರೆನೇಡ್‌ಗಳು, ಎರಡು ಎಕೆ 47 ರೈಫಲ್‌ಗಳು, ಮೂರು ಎಕೆ 47 ಮ್ಯಾಗಜೀನ್‌ಗಳು, ಎರಡು ಪಿಸ್ತೂಲ್‌ಗಳು, ಪಿಸ್ತೂಲ್ ಮ್ಯಾಗಜೀನ್‌ಗಳು ಮತ್ತು 5 ಕೆಜಿ ಐಇಡಿ ಸೇರಿದಂತೆ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪಾಕಿಸ್ತಾನದಿಂದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು, ಸ್ಫೋಟಕಗಳು ಮತ್ತು ಭಾರತೀಯ ಕರೆನ್ಸಿಗಳನ್ನು ಪಡೆದ ಐದು ಪ್ರಮುಖ ಡ್ರೋನ್ ಶೂಟಿಂಗ್ ಘಟನೆಗಳಲ್ಲಿ ತಾಲಿಬ್ ಭಾಗಿಯಾಗಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT