ಉದ್ಧವ್ ಠಾಕ್ರೆ - ಏಕನಾಥ್ ಶಿಂಧೆ 
ದೇಶ

ಮಹಾರಾಷ್ಟ್ರ ರಾಜ್ಯಪಾಲ ಕೋಶ್ಯಾರಿ ಹೊಸ ಸರ್ಕಾರ ರಚನೆಗೆ ಅವಕಾಶ ನೀಡಬಾರದಿತ್ತು: 'ಸುಪ್ರೀಂ'ಗೆ ಉದ್ಧವ್ ಬಣ

ಶಿವಸೇನೆಯ ಉದ್ಧವ್‌ ಠಾಕ್ರೆ ಬಣ ತಮ್ಮ ವಿರುದ್ಧದ ಅನರ್ಹತೆ ಪ್ರಕ್ರಿಯೆಗಳನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಮಹಾರಾಷ್ಟ್ರ ರಾಜ್ಯಪಾಲ ಭಗತ್‌ ಸಿಂಗ್‌ ಕೋಶ್ಯಾರಿ ಅವರು ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವಾಗ....

ನವದೆಹಲಿ: ಶಿವಸೇನೆಯ ಉದ್ಧವ್‌ ಠಾಕ್ರೆ ಬಣ ತಮ್ಮ ವಿರುದ್ಧದ ಅನರ್ಹತೆ ಪ್ರಕ್ರಿಯೆಗಳನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಮಹಾರಾಷ್ಟ್ರ ರಾಜ್ಯಪಾಲ ಭಗತ್‌ ಸಿಂಗ್‌ ಕೋಶ್ಯಾರಿ ಅವರು ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವಾಗ ಹೊಸ ಸರ್ಕಾರ ರಚನೆಗೆ ಅವಕಾಶ ನೀಡಬಾರದಿತ್ತು ಎಂದು ಹೇಳಿದೆ.

ಉದ್ಧವ್ ಠಾಕ್ರೆ ಬಣದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್ ಅವರು, ಪಕ್ಷ ನಾಮನಿರ್ದೇಶನ ಮಾಡಿದ ಅಧಿಕೃತ ವಿಪ್ ಹೊರತುಪಡಿಸಿ ವಿಧಾನಸಭಾಧ್ಯಕ್ಷರು ಬೇರೆ ವಿಪ್ ಅನ್ನು ಪರಿಗಣಿಸಿದ್ದಾರೆ. ಸ್ಪೀಕರ್ ಅವರ ಆಯ್ಕೆ ಸಹ ಸರಿಯಲ್ಲ. ಏಕೆಂದರೆ ಅನರ್ಹಗೊಳಿಸಬೇಕೆಂದು ತಮ್ಮ ಕಕ್ಷಿದಾರರು ಕೋರಿರುವ ಶಾಸಕರಿಂದ ಅವರು ಚುನಾಯಿತರಾಗಿದ್ದಾರೆ. ಶಾಸಕರ ಅನರ್ಹತೆ ಅರ್ಜಿ ಇನ್ನೂ ಬಾಕಿ ಇದೆ ಎಂದು ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ಪೀಠಕ್ಕೆ ತಿಳಿಸಿದರು.

"ಜನರ ತೀರ್ಪಿಗೆ ಬೆಲೆ ಇಲ್ಲವೇ? ಸಂವಿಧಾನದ 10ನೇ ವಿಧಿಯನ್ನು ತಿರುಚಲಾಗಿದೆ ಮತ್ತು ಪಕ್ಷಾಂತರವನ್ನು ಪ್ರಚೋದಿಸಲು ಅದನ್ನು ಬಳಸಲಾಗಿದೆ" ಎಂದು ಕಪಿಲ್ ಸಿಬಲ್ ವಾದಿಸಿದರು.

ಮುಖ್ಯಮಂತ್ರಿ ಏಕನಾಥ್ ಶಿಂಧೆ ಪರ ವಾದ ಮಂಡಿಸಿದ ಹಿರಿಯ ವಕೀಲ ಹರೀಶ್ ಸಾಳ್ವೆ ಅವರು, ಪ್ರಜಾಪ್ರಭುತ್ವದಲ್ಲಿ ಜನರು ಗುಂಪುಗೂಡಿ ಕ್ಷಮಿಸಿ ನೀವು ಅಧಿಕಾರದಲ್ಲಿ ಮುಂದುವರಿಯಲು ಸಾಧ್ಯವಿಲ್ಲ ಎಂದು ಪ್ರಧಾನಿಗೆ ಹೇಳಬಹುದು ಎಂದರು.

ನಾಯಕರೊಬ್ಬರು ಪಕ್ಷದೊಳಗೆ ಶಾಸಕರ ಬೆಂಬಲ ಪಡೆದು ಪಕ್ಷದಲ್ಲೇ ಉಳಿದು ತಮ್ಮ ನಾಯಕರನ್ನು ಪ್ರಶ್ನಿಸಿದರೆ ಅದು ಪಕ್ಷಾಂತರವಲ್ಲ ಎಂದು ಸಾಳ್ವೆ ವಾದಿಸಿದರು.

ವಾದ-ಪ್ರತಿವಾದ ಆಲಿಸಿದ ಕೋರ್ಟ್, ಈ ಬಗ್ಗೆ ಜುಲೈ 27ರೊಳಗೆ ಅಫಿಡವಿಟ್ ಸಲ್ಲಿಸುವಂತೆ ಶಿಂಧೆ ಬಣಕ್ಕೆ ಸೂಚಿಸಿ ಪ್ರಕರಣದ ವಿಚಾರಣೆಯನ್ನು ಆಗಸ್ಚ್ 1ಕ್ಕೆ ಮುಂದೂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮನೆಗಳಿಗೆ ಎಲ್‌ಪಿಜಿ, ವಾಹನಗಳಿಗೆ ಸಿಎನ್‌ಜಿ ಪೂರೈಕೆ 100 ಪರ್ಸೆಂಟ್ ಗ್ಯಾರಂಟಿ: ಕೇಂದ್ರ ಭರವಸೆ

ಗೃಹ ಬಳಕೆ ಎಲ್ ಪಿಜಿಗೆ ಆದ್ಯತೆ, ಕೈಗಾರಿಕಾ ಅನಿಲ ಬಳಕೆ ಶೇ. 50 ರಷ್ಟು ಕಡಿತಗೊಳಿಸಿದ ಗುಜರಾತ್

ಸರ್ಕಾರಿ ವೈದ್ಯರ ಮುಷ್ಕರ: ಶೀಘ್ರ ಸಮಸ್ಯೆ ಪರಿಹರಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭರವಸೆ

ಡಿಕೆಶಿಗೆ ಉಜ್ವಲ ರಾಜಕೀಯ ಭವಿಷ್ಯವಿದೆ ಎನ್ನುತ್ತಾ ಹೊಸ ಟ್ವಿಸ್ಟ್ ನೀಡಿದ ಸಿಎಂ ಸಿದ್ದರಾಮಯ್ಯ!

'ನಾವಿರೋದ್ರಿಂದ ಹಿಂದೂಗಳು ಸುರಕ್ಷಿತ.. ಇಲ್ಲ ಅಂದ್ರೆ ಆ ಸಮುದಾಯದವ್ರು ಮುಗಿಸಿಬಿಡುತ್ತಿದ್ದರು': Mamata Banerjee ವಿವಾದಾತ್ಮಕ ಹೇಳಿಕೆ, ಬಿಜೆಪಿ ಕಿಡಿ

SCROLL FOR NEXT