ಜಿಎಸ್‌ಟಿ ಏರಿಕೆ ವಿರೋಧಿಸಿ ಪ್ರತಿಪಕ್ಷಗಳಿಂದ ಸಂಸತ್ ಆವರಣದಲ್ಲಿ ಪ್ರತಿಭಟನೆ 
ದೇಶ

ಜಿಎಸ್‌ಟಿ ಹೇರಿಕೆ ವಿರೋಧಿಸಿ ಪ್ರತಿಪಕ್ಷಗಳಿಂದ ಸಂಸತ್ ಆವರಣದಲ್ಲಿ ಪ್ರತಿಭಟನೆ; ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ

ಹಣದುಬ್ಬರ ಮತ್ತು ದಿನಬಳಕೆಯ ಕೆಲವು ಸರಕುಗಳ ಮೇಲಿನ ಸರಕು ಮತ್ತು ಸೇವಾ ತೆರಿಗೆ ಹೇರಿಕೆ ವಿರುದ್ಧ ಪ್ರತಿಪಕ್ಷಗಳು ಬುಧವಾರ ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ನಡೆಸಿದವು.

ನವದೆಹಲಿ: ಹಣದುಬ್ಬರ ಮತ್ತು ದಿನಬಳಕೆಯ ಕೆಲವು ಸರಕುಗಳ ಮೇಲಿನ ಸರಕು ಮತ್ತು ಸೇವಾ ತೆರಿಗೆ ಹೇರಿಕೆ ವಿರುದ್ಧ ಪ್ರತಿಪಕ್ಷಗಳು ಬುಧವಾರ ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ನಡೆಸಿದವು.

ಕಾಂಗ್ರೆಸ್, ಎನ್‌ಸಿಪಿ, ಡಿಎಂಕೆ ಮತ್ತು ಎಡಪಕ್ಷಗಳು ಸೇರಿದಂತೆ ವಿರೋಧ ಪಕ್ಷಗಳ ನಾಯಕರು ಮೊಸರು, ಬ್ರೆಡ್ ಮತ್ತು ಪನೀರ್‌ನಂತಹ ಸರಕುಗಳ ಮೇಲಿನ ಜಿಎಸ್‌ಟಿ ಏರಿಕೆಯನ್ನು ಹಿಂಪಡೆಯುವಂತೆ ಒತ್ತಾಯಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಸಂಸತ್ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಎದುರು ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಅಧೀರ್ ರಂಜನ್ ಚೌಧರಿ ಮತ್ತಿತರರು ಉಪಸ್ಥಿತರಿದ್ದರು.

ಕಾಂಗ್ರೆಸ್ ಮತ್ತು ಇತರ ಪಕ್ಷಗಳು ಹಣದುಬ್ಬರ ಮತ್ತು ಜಿಎಸ್‌ಟಿ ದರಗಳ ವಿಷಯದ ಬಗ್ಗೆ ಸಂಸತ್ತಿನಲ್ಲಿ ಚರ್ಚೆಗೆ ಪ್ರಯತ್ನಿಸುತ್ತಿವೆ. ಸೋಮವಾರ ಮುಂಗಾರು ಅಧಿವೇಶನ ಆರಂಭವಾದಾಗಿನಿಂದಲೂ ಸಂಸತ್ತು ಈ ವಿಷಯದ ಬಗ್ಗೆ ಅಸ್ತವ್ಯಸ್ತತೆಗೆ ಸಾಕ್ಷಿಯಾಗಿತ್ತು. ಪ್ರತಿಭಟನಾ ನಿರತ ವಿರೋಧ ಪಕ್ಷದ ಸಂಸದರು ಮತ್ತೆ ಗಬ್ಬರ್ ಸಿಂಗ್ ಟ್ಯಾಕ್ಸ್ ಸ್ಟ್ರೈಕ್ ಎಂಬ ಬ್ಯಾನರ್ ಮತ್ತು ಫಲಕಗಳನ್ನು ಹಿಡಿದುಕೊಂಡು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಬಾಲಿವುಡ್ ಬ್ಲಾಕ್‌ಬಸ್ಟರ್ ಶೋಲೆಯ ಖಳನಾಯಕ ಗಬ್ಬರ್ ಸಿಂಗ್ ಚಿತ್ರದಲ್ಲಿ ಗ್ರಾಮಸ್ಥರಿಂದ ಅಕ್ರಮವಾಗಿ ತೆರಿಗೆ ಸಂಗ್ರಹಿಸಿದ್ದನ್ನು ಉಲ್ಲೇಖಿಸಿ ಪ್ರತಿಪಕ್ಷಗಳು ಜಿಎಸ್‌ಟಿಯನ್ನು ಗಬ್ಬರ್ ಸಿಂಗ್ ಟ್ಯಾಕ್ಸ್ ಎಂದು ಬಣ್ಣಿಸುತ್ತಿವೆ. 

ಜುಲೈ 18 ರಿಂದ ಮೊಸರು ಮತ್ತು ಪನೀರ್ ಸೇರಿದಂತೆ ಅಗತ್ಯ ವಸ್ತುಗಳ ಮೇಲೆ ಜಿಎಸ್‌ಟಿಯನ್ನು ಶೂನ್ಯದಿಂದ ಶೇಕಡಾ 5 ಕ್ಕೆ ಏರಿಸಲಾಗಿದೆ. ಸಂಸತ್ತಿನ ಒಳಗೆ ಯಾವುದೇ ಪ್ರತಿಭಟನೆ ಅಥವಾ ಪ್ರತಿಭಟನೆಗೆ ಅವಕಾಶ ನೀಡುವುದಿಲ್ಲ ಎಂದು ರಾಜ್ಯಸಭಾ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ ನಂತರ ಗದ್ದಲದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT