ಸುಪ್ರೀಂ ಕೋರ್ಟ್ 
ದೇಶ

ಸಿಎಂ ಬದಲಾದರೆ ಆಕಾಶ ಕಳಚಿ ಬೀಳುವುದಿಲ್ಲ: ಸುಪ್ರೀಂ ಕೋರ್ಟ್ ನಲ್ಲಿ ಶಿಂಧೆ ಬಣದ ವಾದ

ಕ್ಕೆ ಸಂಬಂಧಿಸಿದಂತೆ ಹಲವು ಸಾಂವಿಧಾನಿಕ ಪ್ರಶ್ನೆಗಳು ಉದ್ಭವವಾಗುವಂತೆ ಮಾಡುತ್ತಿದ್ದು, ಇದನ್ನು ಇತ್ಯರ್ಥಪಡಿಸುವುದಕ್ಕೆ ಉನ್ನತ ಪೀಠದ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಜು.20 ರಂದು ಹೇಳಿದೆ. 

ನವದೆಹಲಿ: ಶಿವಸೇನೆ ಹಾಗೂ ಅದರ ಬಂಡಾಯ ಶಾಸಕರು ಸಲ್ಲಿಸಿರುವ ಅರ್ಜಿಗಳು, ಪಕ್ಷಾಂತರ, ವಿಲೀನ, ಅನರ್ಹಕ್ಕೆ ಸಂಬಂಧಿಸಿದಂತೆ ಹಲವು ಸಾಂವಿಧಾನಿಕ ಪ್ರಶ್ನೆಗಳು ಉದ್ಭವವಾಗುವಂತೆ ಮಾಡುತ್ತಿದ್ದು, ಇದನ್ನು ಇತ್ಯರ್ಥಪಡಿಸುವುದಕ್ಕೆ ಉನ್ನತ ಪೀಠದ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಜು.20 ರಂದು ಹೇಳಿದೆ. 

ನ್ಯಾ.ಕೃಷ್ಣ ಮುರಾರಿ, ಹಿಮಾ ಕೊಹ್ಲಿ, ನ್ಯಾ. ಎನ್ ವಿ ರಮಣ ಅವರಿದ್ದ ಪೀಠ, ಉನ್ನತ ಪೀಠ ಕೈಗೆತ್ತಿಕೊಳ್ಳಬೇಕಿರುವ ವಿಷಯಗಳನ್ನು ಜುಲೈ 27 ವೇಳೆಗೆ  ಸಿದ್ಧಪಡಿಸಿಕೊಳ್ಳುವಂತೆ ಅರ್ಜಿದಾರರಿಗೆ ಸೂಚನೆ ನೀಡಿದ್ದು ಆ.1 ರ ವೇಳೆಗೆ ವಿಚಾರಣೆ ನಡೆಸುವುದಾಗಿ ಹೇಳಿದೆ. ಮಹಾರಾಷ್ಟ್ರದ ಸಮ್ಮಿಶ್ರ ಸರ್ಕಾರದ ಪತನಕ್ಕೆ ಸಂಬಂಧಿಸಿದ ಬಾಕಿ ಇದ್ದ 5 ಬೇರೆ ಬೇರೆ ಅರ್ಜಿಗಳನ್ನು ನ್ಯಾಯ ಪೀಠ ವಿಚಾರಣೆ ನಡೆಸುತ್ತಿತ್ತು. 

ಉದ್ಧವ್ ಪರ ವಾದ ಮಂಡಿಸಿದ ಕಪಿಲ್ ಸಿಬಲ್, ವಿಧಾನಸಭೆಯ ಸ್ಪೀಕರ್ ಪಕ್ಷದಿಂದ ನಿಯೋಜಿಸಿದ್ದ ವಿಪ್ ನ್ನು ಹೊರತುಪಡಿಸಿ ಬೇರೆ ವಿಪ್ ನ್ನು ಪರಿಗಣಿಸಿರುವುದು ಮೂರ್ಖತನ ಎಂದು ನ್ಯಾಯಪೀಠದೆದುರು ಹೇಳಿದ್ದಾರೆ. 

ಜನರ ತೀರ್ಪು ಏನಾಗಬೇಕು? 10 ನೇ ಷೆಡ್ಯೂಲ್ ನ್ನು ಬುಡಮೇಲು ಮಾಡಲಾಗಿದೆ ಹಾಗೂ ಪಕ್ಷಾಂತರವನ್ನು ಪ್ರಚೋದಿಸಲಾಗಿದೆ ಎಂದು ಸಿಬಲ್ ನ್ಯಾಯಪೀಠದ ಎದುರು ವಾದಿಸಿದರು.
 
ಶಿಂಧೆ ಬಣದ ಪರ ವಾದ ಮಂಡಿಸಿದ ಹರೀಶ್ ಸಾಳ್ವೆ, ಓರ್ವ ನಾಯಕ ಪಕ್ಷದಲ್ಲಿ ಹೆಚ್ಚಿನ ಬೆಂಬಲ ಪಡೆದು ಅದೇ ಪಕ್ಷದಲ್ಲಿದ್ದುಕೊಂಡು ಅದರ ನಾಯನನ್ನು ಪ್ರಶ್ನಿಸಿದರೆ, ಅದು ಪಕ್ಷಾಂತರವಲ್ಲ ಎಂದು ವಾದಿಸಿದರು.
 
ಒಂದು ರಾಜಕೀಯ ಪಕ್ಷದಲ್ಲಿರುವ ಮಂದಿ, ಮತ್ತೋರ್ವ ನಮ್ಮನ್ನು ಮುನ್ನಡೆಸಬೇಕು ಎಂದು ಬಯಸಿದರೆ ಅದರಲ್ಲಿ ತಪ್ಪೇನಿದೆ? ಮುಖ್ಯಮಂತ್ರಿ ಬದಲಾದರೆ ಆಕಾಶ ಕಳಚಿ ಬೀಳುವುದಿಲ್ಲ, ಸ್ಪೀಕರ್ ನ್ನು ಕಾನೂನಾತ್ಮಕವಾಗಿ ನೇಮಕ ಮಾಡಲಾಗಿದೆಯೋ ಇಲ್ಲವೋ ಎಂಬುದು ಪ್ರಶ್ನೆ ಎಂದು ಸಾಳ್ವೆ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

27 ವರ್ಷದಲ್ಲಿ 3 ಗಗನ ಯಾತ್ರೆ: 608 ದಿನಗಳ ಬಾಹ್ಯಾಕಾಶ ವಾಸ; ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್​ ನಿವೃತ್ತಿ!

'ಮದರ್ ಆಫ್ ಆಲ್ ಡೀಲ್': ಭಾರತ-ಯುರೋಪಿಯನ್ ಒಕ್ಕೂಟದ FTA ಮಾತುಕತೆ ಅಂತಿಮ ಹಂತಕ್ಕೆ!

ರಾಜ್ಯಗಳ ಮೇಲೆ ಕೇಂದ್ರದ ನಿಯಂತ್ರಣ; ಶೀಘ್ರದಲ್ಲೇ ದಕ್ಷಿಣ ಭಾರತದ ಸಿಎಂಗಳ ಸಮ್ಮೇಳನ: ಸಿದ್ದರಾಮಯ್ಯ

ರಾಯಚೂರು: ಸಿಂಧನೂರು ಬಳಿ ಭೀಕರ ಸರಣಿ ಅಪಘಾತ; ಐವರು ಸ್ಥಳದಲ್ಲೇ ಸಾವು

ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿ ಈಶ್ವರ ಖಂಡ್ರೆ ಅವಿರೋಧ ಆಯ್ಕೆ

SCROLL FOR NEXT