ಸಿಧು ಮೂಸೆವಾಲಾ 
ದೇಶ

ಮೂಸೆವಾಲಾ ಹತ್ಯೆ ಪ್ರಕರಣ: ಶಂಕಿತ ಶೂಟರ್ ಎನ್ ಕೌಂಟರ್, ಮುಂದುವರೆದ ಗುಂಡಿನ ಕಾಳಗ

ಗಾಯಕ ಸಿಧು ಮೂಸೆ ವಾಲಾ ಹತ್ಯೆಯ ಶಂಕಿತ ಆರೋಪಿ ಜಗ್ರೂಪ್ ಸಿಂಗ್ ರೂಪ ಎಂಬ ದರೋಡೆಕೋರ ಬುಧವಾರ ಅಮೃತಸರ ಬಳಿ ಪಂಜಾಬ್ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ....

ಅಮೃತಸರ: ಗಾಯಕ ಸಿಧು ಮೂಸೆ ವಾಲಾ ಹತ್ಯೆಯ ಶಂಕಿತ ಆರೋಪಿ ಜಗ್ರೂಪ್ ಸಿಂಗ್ ರೂಪ ಎಂಬ ದರೋಡೆಕೋರ ಬುಧವಾರ ಅಮೃತಸರ ಬಳಿ ಪಂಜಾಬ್ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಕಾರ್ಯಾಚರಣೆ ವೇಳೆ ಮೂವರು ಪೊಲೀಸರು ಗಾಯಗೊಂಡಿದ್ದಾರೆ.

ಅಮೃತಸರದಿಂದ 20 ಕಿಮೀ ದೂರದಲ್ಲಿರುವ ಭಕ್ನಾ ಗ್ರಾಮದಲ್ಲಿ ಪಂಜಾಬ್ ಪೊಲೀಸರ ಆಂಟಿ-ಗ್ಯಾಂಗ್‌ಸ್ಟರ್ ಟಾಸ್ಕ್ ಫೋರ್ಸ್, ಜಗ್ರೂಪ್ ಸಿಂಗ್ ರೂಪ ಮತ್ತು ಮನ್‌ಪ್ರೀತ್ ಸಿಂಗ್ ಅಲಿಯಾಸ್ ಮನ್ನು ಕುಸ್ಸಾ ಎಂಬ ಇಬ್ಬರು ವ್ಯಕ್ತಿಗಳನ್ನು ಹಿಂಬಾಲಿಸುತ್ತಿದ್ದಾಗ ಎನ್‌ಕೌಂಟರ್ ಆರಂಭವಾಗಿದೆ.

ಮೇ 29 ರಂದು ಎಕೆ-47 ರೈಫಲ್‌ನಿಂದ ಮೂಸೆ ವಾಲಾಗೆ ಮೊದಲು ಗುಂಡು ಹಾರಿಸಿದ ಆರೋಪ ಮನ್ನು ಕುಸ್ಸಾ ಮೇಲಿದೆ. ದೀಪಕ್ ಮುಂಡಿ ಎಂಬ ಇನ್ನೊಬ್ಬ ಶೂಟರ್ ಇನ್ನೂ ಪತ್ತೆಯಾಗಿಲ್ಲ. ಪ್ರಕರಣದಲ್ಲಿ ಕನಿಷ್ಠ ಎಂಟು ಶೂಟರ್‌ಗಳಿದ್ದು ಅವರನ್ನು ಬಂಧಿಸಲಾಗಿದೆ.

ಗಾಯಕ-ಗೀತರಚನೆಕಾರ ಮತ್ತು ರ್ಯಾಪರ್ ಆಗಿದ್ದಲ್ಲದೆ ಕಾಂಗ್ರೆಸ್ ನಾಯಕರಾಗಿದ್ದ 28 ವರ್ಷದ ಶುಭದೀಪ್ ಸಿಂಗ್ ಸಿಧು ಅಲಿಯಾಸ್ ಸಿಧು ಮೂಸೆವಾಲಾ ಅವರನ್ನು ಪಂಜಾಬ್‌ನ ಮಾನ್ಸಾ ಜಿಲ್ಲೆಯ ಮೂಸಾ ಗ್ರಾಮದ ಬಳಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

ಪಂಜಾಬ್, ದೆಹಲಿ ಮತ್ತು ಮುಂಬೈ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಈಗಾಗಲೇ ದೆಹಲಿಯ ತಿಹಾರ್ ಜೈಲಿನಲ್ಲಿದ್ದ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ನಿರ್ದೇಶನದಂತೆ ಕೆನಡಾ ಮೂಲದ ಸತೀಂದರ್ಜಿತ್ ಸಿಂಗ್ ಅಲಿಯಾಸ್ ಗೋಲ್ಡಿ ಬ್ರಾರ್ ಈ ಕೊಲೆಯನ್ನು ನಿರ್ದೇಶಿಸಿದ್ದಾರೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

SCROLL FOR NEXT