ಎನ್ ಕೌಂಟರ್ ನಡೆದ ಸ್ಥಳದಲ್ಲಿ ಪೊಲೀಸರು 
ದೇಶ

ಮೂಸೆವಾಲಾ ಹತ್ಯೆಯಲ್ಲಿ ಭಾಗಿಯಾಗಿದ್ದ ಇಬ್ಬರು ಗ್ಯಾಂಗ್‌ಸ್ಟರ್ ಗಳನ್ನು ಎನ್ ಕೌಂಟರ್ ಮಾಡಲಾಗಿದೆ: ಪೊಲೀಸ್

ಪಂಜಾಬಿ ಗಾಯಕ ಸಿಧು ಮೂಸೆ ವಾಲಾ ಹತ್ಯೆಯಲ್ಲಿ ಭಾಗಿಯಾಗಿದ್ದ ಇಬ್ಬರು ಗ್ಯಾಂಗ್‌ಸ್ಟರ್ ಗಳನ್ನು ಬುಧವಾರ ಅಮೃತಸರ ಬಳಿ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಮೃತಸರ: ಪಂಜಾಬಿ ಗಾಯಕ ಸಿಧು ಮೂಸೆ ವಾಲಾ ಹತ್ಯೆಯಲ್ಲಿ ಭಾಗಿಯಾಗಿದ್ದ ಇಬ್ಬರು ಗ್ಯಾಂಗ್‌ಸ್ಟರ್ ಗಳನ್ನು ಬುಧವಾರ ಅಮೃತಸರ ಬಳಿ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾರ್ಯಾಚರಣೆ ವೇಳೆ ಮೂವರು ಪೊಲೀಸರು ಸಹ ಗಾಯಗೊಂಡಿದ್ದಾರೆ.

ಅಮೃತಸರದಿಂದ 20 ಕಿಮೀ ದೂರದಲ್ಲಿರುವ ಭಕ್ನಾ ಗ್ರಾಮದಲ್ಲಿ ಪಂಜಾಬ್ ಪೊಲೀಸರ ಆಂಟಿ-ಗ್ಯಾಂಗ್‌ಸ್ಟರ್ ಟಾಸ್ಕ್ ಫೋರ್ಸ್, ಜಗ್ರೂಪ್ ಸಿಂಗ್ ರೂಪ ಮತ್ತು ಮನ್‌ಪ್ರೀತ್ ಸಿಂಗ್ ಅಲಿಯಾಸ್ ಮನ್ನು ಕುಸ್ಸಾ ಎಂಬ ಇಬ್ಬರು ಗ್ಯಾಂಗ್‌ಸ್ಟರ್ ಗಳನ್ನು ಎನ್‌ಕೌಂಟರ್ ಮಾಡಲಾಗಿದೆ.

ಗುಂಡಿನ ಚಕಮಕಿಯಲ್ಲಿ ಇಬ್ಬರೂ  ಗ್ಯಾಂಗ್‌ಸ್ಟರ್ ಗಳು ಸಾವನ್ನಪ್ಪಿದ್ದಾರೆ. ಹತ್ಯೆಯಾದ ದರೋಡೆಕೋರರಿಂದ ಎಕೆ-47 ಮತ್ತು ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ. ಒಂದು ಚೀಲವನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಆದರೆ ಅದನ್ನು ವಿಧಿವಿಜ್ಞಾನ ತಂಡ ಪರಿಶೀಲಿಸುತ್ತದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪ್ರಮೋದ್ ಬಾನ್ ಅವರು ಅಮೃತಸರದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಮೇ 29 ರಂದು ಎಕೆ-47 ರೈಫಲ್‌ನಿಂದ ಮೂಸೆ ವಾಲಾಗೆ ಮೊದಲು ಗುಂಡು ಹಾರಿಸಿದ ಆರೋಪ ಮನ್ನು ಕುಸ್ಸಾ ಮೇಲಿದೆ. ದೀಪಕ್ ಮುಂಡಿ ಎಂಬ ಇನ್ನೊಬ್ಬ ಶೂಟರ್ ಇನ್ನೂ ಪತ್ತೆಯಾಗಿಲ್ಲ. ಪ್ರಕರಣದಲ್ಲಿ ಕನಿಷ್ಠ ಎಂಟು ಶೂಟರ್‌ಗಳಿದ್ದು ಅವರನ್ನು ಬಂಧಿಸಲಾಗಿದೆ.

ಗಾಯಕ-ಗೀತರಚನೆಕಾರ ಮತ್ತು ರ್ಯಾಪರ್ ಆಗಿದ್ದಲ್ಲದೆ ಕಾಂಗ್ರೆಸ್ ನಾಯಕರಾಗಿದ್ದ 28 ವರ್ಷದ ಶುಭದೀಪ್ ಸಿಂಗ್ ಸಿಧು ಅಲಿಯಾಸ್ ಸಿಧು ಮೂಸೆವಾಲಾ ಅವರನ್ನು ಪಂಜಾಬ್‌ನ ಮಾನ್ಸಾ ಜಿಲ್ಲೆಯ ಮೂಸಾ ಗ್ರಾಮದ ಬಳಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

ಪಂಜಾಬ್, ದೆಹಲಿ ಮತ್ತು ಮುಂಬೈ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಈಗಾಗಲೇ ದೆಹಲಿಯ ತಿಹಾರ್ ಜೈಲಿನಲ್ಲಿದ್ದ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ನಿರ್ದೇಶನದಂತೆ ಕೆನಡಾ ಮೂಲದ ಸತೀಂದರ್ಜಿತ್ ಸಿಂಗ್ ಅಲಿಯಾಸ್ ಗೋಲ್ಡಿ ಬ್ರಾರ್ ಈ ಕೊಲೆಯನ್ನು ನಿರ್ದೇಶಿಸಿದ್ದಾರೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ- ಡಾ. ಎಲ್ ಮುರುಗನ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

SCROLL FOR NEXT