ಎನ್ ಕೌಂಟರ್ ನಡೆದ ಸ್ಥಳದಲ್ಲಿ ಪೊಲೀಸರು 
ದೇಶ

ಮೂಸೆವಾಲಾ ಹತ್ಯೆಯಲ್ಲಿ ಭಾಗಿಯಾಗಿದ್ದ ಇಬ್ಬರು ಗ್ಯಾಂಗ್‌ಸ್ಟರ್ ಗಳನ್ನು ಎನ್ ಕೌಂಟರ್ ಮಾಡಲಾಗಿದೆ: ಪೊಲೀಸ್

ಪಂಜಾಬಿ ಗಾಯಕ ಸಿಧು ಮೂಸೆ ವಾಲಾ ಹತ್ಯೆಯಲ್ಲಿ ಭಾಗಿಯಾಗಿದ್ದ ಇಬ್ಬರು ಗ್ಯಾಂಗ್‌ಸ್ಟರ್ ಗಳನ್ನು ಬುಧವಾರ ಅಮೃತಸರ ಬಳಿ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಮೃತಸರ: ಪಂಜಾಬಿ ಗಾಯಕ ಸಿಧು ಮೂಸೆ ವಾಲಾ ಹತ್ಯೆಯಲ್ಲಿ ಭಾಗಿಯಾಗಿದ್ದ ಇಬ್ಬರು ಗ್ಯಾಂಗ್‌ಸ್ಟರ್ ಗಳನ್ನು ಬುಧವಾರ ಅಮೃತಸರ ಬಳಿ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾರ್ಯಾಚರಣೆ ವೇಳೆ ಮೂವರು ಪೊಲೀಸರು ಸಹ ಗಾಯಗೊಂಡಿದ್ದಾರೆ.

ಅಮೃತಸರದಿಂದ 20 ಕಿಮೀ ದೂರದಲ್ಲಿರುವ ಭಕ್ನಾ ಗ್ರಾಮದಲ್ಲಿ ಪಂಜಾಬ್ ಪೊಲೀಸರ ಆಂಟಿ-ಗ್ಯಾಂಗ್‌ಸ್ಟರ್ ಟಾಸ್ಕ್ ಫೋರ್ಸ್, ಜಗ್ರೂಪ್ ಸಿಂಗ್ ರೂಪ ಮತ್ತು ಮನ್‌ಪ್ರೀತ್ ಸಿಂಗ್ ಅಲಿಯಾಸ್ ಮನ್ನು ಕುಸ್ಸಾ ಎಂಬ ಇಬ್ಬರು ಗ್ಯಾಂಗ್‌ಸ್ಟರ್ ಗಳನ್ನು ಎನ್‌ಕೌಂಟರ್ ಮಾಡಲಾಗಿದೆ.

ಗುಂಡಿನ ಚಕಮಕಿಯಲ್ಲಿ ಇಬ್ಬರೂ  ಗ್ಯಾಂಗ್‌ಸ್ಟರ್ ಗಳು ಸಾವನ್ನಪ್ಪಿದ್ದಾರೆ. ಹತ್ಯೆಯಾದ ದರೋಡೆಕೋರರಿಂದ ಎಕೆ-47 ಮತ್ತು ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ. ಒಂದು ಚೀಲವನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಆದರೆ ಅದನ್ನು ವಿಧಿವಿಜ್ಞಾನ ತಂಡ ಪರಿಶೀಲಿಸುತ್ತದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪ್ರಮೋದ್ ಬಾನ್ ಅವರು ಅಮೃತಸರದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಮೇ 29 ರಂದು ಎಕೆ-47 ರೈಫಲ್‌ನಿಂದ ಮೂಸೆ ವಾಲಾಗೆ ಮೊದಲು ಗುಂಡು ಹಾರಿಸಿದ ಆರೋಪ ಮನ್ನು ಕುಸ್ಸಾ ಮೇಲಿದೆ. ದೀಪಕ್ ಮುಂಡಿ ಎಂಬ ಇನ್ನೊಬ್ಬ ಶೂಟರ್ ಇನ್ನೂ ಪತ್ತೆಯಾಗಿಲ್ಲ. ಪ್ರಕರಣದಲ್ಲಿ ಕನಿಷ್ಠ ಎಂಟು ಶೂಟರ್‌ಗಳಿದ್ದು ಅವರನ್ನು ಬಂಧಿಸಲಾಗಿದೆ.

ಗಾಯಕ-ಗೀತರಚನೆಕಾರ ಮತ್ತು ರ್ಯಾಪರ್ ಆಗಿದ್ದಲ್ಲದೆ ಕಾಂಗ್ರೆಸ್ ನಾಯಕರಾಗಿದ್ದ 28 ವರ್ಷದ ಶುಭದೀಪ್ ಸಿಂಗ್ ಸಿಧು ಅಲಿಯಾಸ್ ಸಿಧು ಮೂಸೆವಾಲಾ ಅವರನ್ನು ಪಂಜಾಬ್‌ನ ಮಾನ್ಸಾ ಜಿಲ್ಲೆಯ ಮೂಸಾ ಗ್ರಾಮದ ಬಳಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

ಪಂಜಾಬ್, ದೆಹಲಿ ಮತ್ತು ಮುಂಬೈ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಈಗಾಗಲೇ ದೆಹಲಿಯ ತಿಹಾರ್ ಜೈಲಿನಲ್ಲಿದ್ದ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ನಿರ್ದೇಶನದಂತೆ ಕೆನಡಾ ಮೂಲದ ಸತೀಂದರ್ಜಿತ್ ಸಿಂಗ್ ಅಲಿಯಾಸ್ ಗೋಲ್ಡಿ ಬ್ರಾರ್ ಈ ಕೊಲೆಯನ್ನು ನಿರ್ದೇಶಿಸಿದ್ದಾರೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT