ಗೋ ಏರ್ ವಿಮಾನ 
ದೇಶ

ದೇಶದಲ್ಲಿ ಮತ್ತೊಂದು ವಿಮಾನ ತುರ್ತು ಭೂಸ್ಪರ್ಶ; ಆಗಸದಲ್ಲೇ ಬಿರುಕು ಬಿಟ್ಟ ಗೋ ಏರ್ ವಿಮಾನದ ಕಿಟಕಿ ಗಾಜು!

ದೇಶದಲ್ಲಿ ಮತ್ತೊಂದು ಪ್ರಯಾಣಿಕ ವಿಮಾನ ತುರ್ತು ಭೂಸ್ಪರ್ಶ ಮಾಡಿದ್ದು, ಗೋ ಏರ್ ಸಂಸ್ಥೆಯ ವಿಮಾನದ ಕಿಟಕಿ ಗಾಜು ಆಗಸದಲ್ಲೇ ಬಿರುಕು ಬಿಟ್ಟ ಪರಿಣಾಮ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿದೆ ಎಂದು ತಿಳಿದುಬಂದಿದೆ.

ನವದೆಹಲಿ: ದೇಶದಲ್ಲಿ ಮತ್ತೊಂದು ಪ್ರಯಾಣಿಕ ವಿಮಾನ ತುರ್ತು ಭೂಸ್ಪರ್ಶ ಮಾಡಿದ್ದು, ಗೋ ಏರ್ ಸಂಸ್ಥೆಯ ವಿಮಾನದ ಕಿಟಕಿ ಗಾಜು ಆಗಸದಲ್ಲೇ ಬಿರುಕು ಬಿಟ್ಟ ಪರಿಣಾಮ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿದೆ ಎಂದು ತಿಳಿದುಬಂದಿದೆ.

ದೆಹಲಿ-ಗುವಾಹತಿ ನಡುವೆ ಸಂಚರಿಸುತ್ತಿದ್ದ ಗೋ ಏರ್ ಸಂಸ್ಥೆಯ ವಿಮಾನ ಸಂಖ್ಯೆ A320neo ವಿಮಾನದ ವಿಂಡ್‌ಶೀಲ್ಡ್ ಆಗಸದಲ್ಲಿರುವಾಗಲೇ ಬಿರುಕು ಬಿಟ್ಟಿದ್ದು, ಕೂಡಲೇ ಎಚ್ಚೆತ್ತ ಸಿಬ್ಬಂದಿ ವಿಮಾನವನ್ನು ಜೈಪುರಕ್ಕೆ ತಿರುಗಿಸಿ ತುರ್ತು ಭೂಸ್ಪರ್ಶ ಮಾಡಿದ್ದಾರೆ ಎಂದು ವಿಮಾನಯಾನ ನಿಯಂತ್ರಕ ಡಿಜಿಸಿಎ ಅಧಿಕಾರಿಗಳು ತಿಳಿಸಿದ್ದಾರೆ.

ಅಂತೆಯೇ ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದು, ಪರ್ಯಾಯ ವ್ಯವಸ್ಥೆ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಎರಡು ದಿನಗಳಲ್ಲಿ ಗೋ ಏರ್ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಮೂರನೇ ಘಟನೆ ಇದಾಗಿದ್ದು, ಮಂಗಳವಾರ, ಗೋ ಏರ್ ನ ಮುಂಬೈ-ಲೇಹ್ ಮತ್ತು ಶ್ರೀನಗರ-ದೆಹಲಿ ವಿಮಾನಗಳು ತಾಂತ್ರಿಕ ದೋಷ ಎದುರಿಸಿದ್ದವು.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT