ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ 
ದೇಶ

ರಾಜ್ಯಸಭೆಯಲ್ಲಿ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭೆಯಲ್ಲಿಂದು ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದರು. ಭಾರತ ಸಂವಿಧಾನದಲ್ಲಿ ನಿಜವಾದ ನಂಬಿಕೆ ಹೊಂದಿ, ತಮ್ಮ ಕರ್ತವ್ಯವನ್ನು ಶ್ರದ್ಧಾ ಪೂರ್ವಕವಾಗಿ ನಿರ್ವಹಿಸುವೆ ಎಂದು ದೇವರ ಹೆಸರಿನಲ್ಲಿ ಪ್ರಮಾಣ ಮಾಡಿದರು.

ನವದೆಹಲಿ: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭೆಯಲ್ಲಿಂದು ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದರು. ಭಾರತ ಸಂವಿಧಾನದಲ್ಲಿ ನಿಜವಾದ ನಂಬಿಕೆ ಹೊಂದಿ, ತಮ್ಮ ಕರ್ತವ್ಯವನ್ನು ಶ್ರದ್ಧಾ ಪೂರ್ವಕವಾಗಿ ನಿರ್ವಹಿಸುವೆ ಎಂದು ದೇವರ ಹೆಸರಿನಲ್ಲಿ ಪ್ರಮಾಣ ಮಾಡಿದರು. ಇದಕ್ಕೂ ಮುನ್ನ ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಿದ ನಂತರ ಸಂಸತ್ ಭವನಕ್ಕೆ ಆಗಮಿಸಿದ ವೀರೇಂದ್ರ ಹೆಗ್ಗಡೆ ಅವರನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಆತ್ಮೀಯವಾಗಿ ಸ್ವಾಗತ ನೀಡಿ ಬರಮಾಡಿಕೊಂಡರು. 

ಈ ವೇಳೆ ಪ್ರತಿಕ್ರಿಯೆ ನೀಡಿದ ಅವರು, ಧರ್ಮಸ್ಥಳದ ಧರ್ಮಾಧಿಕಾರಿಯಾಗಿರುವ ವೀರೇಂದ್ರ ಹೆಗ್ಗಡೆ ಅವರನ್ನು ರಾಜ್ಯಸಭೆಯಲ್ಲಿ ನೋಡಲು ಅವಕಾಶ ಸಿಕ್ಕಿರುವುದು ಸಂತಸವನ್ನುಂಟು ಮಾಡಿದೆ ಎಂದರು. 

ನಂತರ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಅಭಿನಂದಿಸಿದರು. ಇದೇ ಸಂದರ್ಭದಲ್ಲಿ ಡಾ. ವೀರೇಂದ್ರ ಹೆಗಡೆ ಅವರನ್ನು ಆಯ್ಕೆ ಮಾಡಿದ್ದಕ್ಕಾಗಿ ನಳಿನ್ ಕುಮಾರ್ ಕಟೀಲ್ ಅವರು ಪ್ರಧಾನಿ ಮೋದಿಗೆ ಅವರಿಗೆ ಮಾಲಾರ್ಪಣೆ ಮಾಡಿ ಗೌರವಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BiggBoss Kannada: ಜಾಲಿವುಡ್​ ಸ್ಟುಡಿಯೋಸ್​ಗೆ ಬೀಗ, ಮನೆ ಖಾಲಿ ಮಾಡಲು ಬಿಗ್‌ಬಾಸ್‌ ಸ್ಪರ್ಧಿಗಳಿಗೆ 1 ಗಂಟೆ ಗಡುವು!

ತಮ್ಮದೇ ಸರ್ವಿಸ್ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಹರಿಯಾಣ ಎಡಿಜಿಪಿ ಆತ್ಮಹತ್ಯೆ!

CM ಬದಲಾವಣೆ ಹೇಳಿಕೆಗಳಿಗೆ 'ಬ್ರೇಕ್ ಹಾಕಿ': ಕಾಂಗ್ರೆಸ್ ಹೈಕಮಾಂಡ್​​ಗೆ ಹಿರಿಯ ಸಚಿವರ ಆಗ್ರಹ

ಮಾರಣಾಂತಿಕ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ, ಬಿಜೆಪಿ ಸಂಸದನ ಆರೋಗ್ಯ ವಿಚಾರಿಸಿದ ಮಮತಾ

ಇದು 'ಮೋದಾನಿ-ನಿರ್ಭರ್ ಭಾರತ': ಸರ್ಕಾರದ ಹಳದಿ ಬಟಾಣಿ ಆಮದು ನೀತಿ ಟೀಕಿಸಿದ ಕಾಂಗ್ರೆಸ್

SCROLL FOR NEXT