ಪಾರ್ಥ ಚಟರ್ಜಿ 
ದೇಶ

ಎಸ್ ಎಸ್ ಸಿ ನೇಮಕಾತಿ ಹಗರಣ: ಟಿಎಂಸಿ ಮುಖಂಡ ಪಾರ್ಥ ಚಟರ್ಜಿ ನಿವಾಸದಲ್ಲಿ ಇಡಿ ಶೋಧ

ಶಾಲಾ ಸೇವಾ ಆಯೋಗದ (ಎಸ್ ಎಸ್ ಸಿ) ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಸಚಿವ ಹಾಗೂ ಟಿಎಂಸಿ ಮುಖಂಡ ಪಾರ್ಥ ಚಟರ್ಜಿ ಅವರ ಮನೆಯಲ್ಲಿ ಜಾರಿ ನಿರ್ದೇಶನಾಲಯ ಶೋಧ ಕಾರ್ಯ ಕೈಗೊಂಡಿದೆ.

ಕೋಲ್ಕತ್ತಾ: ಶಾಲಾ ಸೇವಾ ಆಯೋಗದ (ಎಸ್ ಎಸ್ ಸಿ) ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಸಚಿವ ಹಾಗೂ ಟಿಎಂಸಿ ಮುಖಂಡ ಪಾರ್ಥ ಚಟರ್ಜಿ ಅವರ ಮನೆಯಲ್ಲಿ ಜಾರಿ ನಿರ್ದೇಶನಾಲಯ ಶೋಧ ಕಾರ್ಯ ಕೈಗೊಂಡಿದೆ.

ಜೂನ್ 29 ರಂದು ರಾಜ್ಯ ಅನುದಾನಿತ ಶಾಲೆಗಳಿಗೆ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿ ನೇಮಕಾತಿಯಲ್ಲಿ ಅಕ್ರಮ ಹಣ ವರ್ಗಾವಣೆ ಕುರಿತು ಇಡಿ ತನಿಖೆ ಪ್ರಾರಂಭಿಸಿತ್ತು. ಫೆಡರಲ್ ತನಿಖಾ ಸಂಸ್ಥೆಯು ಎರಡು ಎಫ್ ಐಆರ್ ಗಳನ್ನು ದಾಖಲಿಸಿದೆ.

ಎಸ್ ಎಸ್ ಎಲ್ ಸಿ ಮೂಲಕ ನೇಮಕಗೊಂಡ ಶಿಕ್ಷಕರ ನೇಮಕಾತಿಯಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಈ ಪ್ರಕರಣದಲ್ಲಿ ಹಲವು ಪ್ರಭಾವಿ ವ್ಯಕ್ತಿಗಳ ಹೆಸರು ಕೇಳಿಬಂದಿದೆ.ಪಾರ್ಥ ಚಟರ್ಜಿ ಅವರು ಅನುಮೋದಿಸಿದ ಉನ್ನತ ಅಧಿಕಾರದ ಮೇಲ್ವಿಚಾರಣಾ ಸಮಿತಿಯು ಆಪಾದಿತ ಹಗರಣದ ಮೂಲ ಎಂದು ಕೋಲ್ಕತ್ತಾ ಹೈಕೋರ್ಟ್ ಈ ಹಿಂದೆ ಹೇಳಿತ್ತು.

2019ರ ಜನವರಿಯಿಂದ ಪ್ರಕ್ರಿಯೆಯನ್ನು ಮೇಲ್ವಿಚಾರಣೆ ಮಾಡುವ ಸಮಿತಿಯ ಸದಸ್ಯರು ನ್ಯಾಯಾಲಯದ ಮುಂದೆ ವ್ಯತಿರಿಕ್ತವಾದ ಹೇಳಿಕೆ ಸಲ್ಲಿಸಿದ ನಂತರ ಪೀಠವು, ರಾಜ್ಯ ಅನುದಾನಿತ ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT