ಮಮತಾ ಬ್ಯಾನರ್ಜಿ-ಪಾರ್ಥ ಚಟರ್ಜಿ 
ದೇಶ

ಬಂಧನದ ಬಳಿಕ ಸಿಎಂ ಮಮತಾ ಬ್ಯಾನರ್ಜಿಗೆ 3 ಬಾರಿ ಕರೆ ಮಾಡಿದ್ದ ಸಚಿವ ಪಾರ್ಥ ಚಟರ್ಜಿ; ಮೌನವಹಿಸಿದ ದೀದಿ!

ಪಶ್ಚಿಮ ಬಂಗಾಳದ ಸಚಿವ ಪಾರ್ಥ ಚಟರ್ಜಿ ಬಂಧನದ ನಂತರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮೂರು ಕರೆಗಳನ್ನು ಮಾಡಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಸಿಎಂ ಮಮತಾ ಬ್ಯಾನರ್ಜಿ ಆ ಮೂರು ಕರೆಗಳಿಗೂ ಉತ್ತರಿಸಿಲ್ಲ ಎಂದು ಅಧಿಕೃತ ದಾಖಲೆ ಬಹಿರಂಗಪಡಿಸಿದೆ.

ನವದೆಹಲಿ: ಪಶ್ಚಿಮ ಬಂಗಾಳದ ಸಚಿವ ಪಾರ್ಥ ಚಟರ್ಜಿ ಬಂಧನದ ನಂತರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮೂರು ಕರೆಗಳನ್ನು ಮಾಡಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಸಿಎಂ ಮಮತಾ ಬ್ಯಾನರ್ಜಿ ಆ ಮೂರು ಕರೆಗಳಿಗೂ ಉತ್ತರಿಸಿಲ್ಲ ಎಂದು ಅಧಿಕೃತ ದಾಖಲೆ ಬಹಿರಂಗಪಡಿಸಿದೆ.

ಪಾರ್ಥ ಚಟರ್ಜಿಯವರ 'ಅರೆಸ್ಟ್ ಮೆಮೊ' ಹೇಳುವಂತೆ 70 ವರ್ಷ ವಯಸ್ಸಿನ ಅವರು ತಮ್ಮ ಬಂಧನದ ಬಳಿಕ ಆ ವಿಚಾರವನ್ನು ತಮ್ಮ ಸ್ನೇಹಿತರು/ ಸಂಬಂಧಿಗಳಿಗೆ ಖಚಿತಪಡಿಸಲು ಬಾಸ್ ಮಮತಾ ಬ್ಯಾನರ್ಜಿಯನ್ನು ಆಯ್ಕೆ ಮಾಡಿದ್ದಾರೆ.

ಬೆಳಗಿನ ಜಾವ 1.55ರ ಸುಮಾರಿಗೆ ಆವರನ್ನು ಬಂಧಿಸಿದ ನಂತರ ಸಿಎಂಗೆ ಪಾರ್ಥ ಚಟರ್ಜಿ ತಮ್ಮ ಮೊದಲ ಕರೆಯನ್ನು 2.33ಕ್ಕೆ ಮಾಡಿದ್ದಾರೆನ್ನಲಾಗಿದೆ.  ಮತ್ತೆ 3.37 ಮತ್ತು 9.35 ಕ್ಕೆ ಮತ್ತೆ ಕರೆ ಮಾಡಿರೋದು ದಾಖಲೆಯಲ್ಲಿ ಗೊತ್ತಾಗಿದೆ.

ಪೋಲೀಸರ ಪ್ರಕಾರ, ಯಾವುದೇ ಆರೋಪಿಗೆ ತಮ್ಮ ಬಂಧನದ ಬಗ್ಗೆ ತಿಳಿಸಲು ಸಂಬಂಧಿಕರು ಅಥವಾ ಸ್ನೇಹಿತರಿಗೆ ಕರೆ ಮಾಡಲು ಅವಕಾಶ ನೀಡಲಾಗುತ್ತದೆ. ಚಟರ್ಜಿಯವರು ಒಂದು ಕಾಲದಲ್ಲಿ ಮಮತಾ ಬ್ಯಾನರ್ಜಿಯವರ ಉನ್ನತ ಸಹಾಯಕರಲ್ಲಿ ಒಬ್ಬರಾಗಿದ್ದರು. ಆದರೆ 20 ಕೋಟಿ ಪತ್ತೆ ಪ್ರಕರಣದ ಬಳಿಕ ಪಾರ್ಥ ಚಟರ್ಜಿ ಬಗ್ಗೆ ಸಿಎಂ ಮಮತಾ ಬ್ಯಾನರ್ಜಿ ಮೌನ ವಹಿಸಿದ್ದಾರೆ.

ಬಂಗಾಳದ ಶಿಕ್ಷಣ ಸಚಿವರಾಗಿದ್ದ ಪಾರ್ಥ ಚಟರ್ಜಿ ಅವರನ್ನು ಶನಿವಾರದಂದು ಶಾಲಾ ಉದ್ಯೋಗ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಆರೋಪದ ಮೇಲೆ ಬಂಧಿಸಲಾಯಿತು. ಸರ್ಕಾರಿ ಪ್ರಾಯೋಜಿತ ಮತ್ತು ಅನುದಾನಿತ ಶಾಲೆಗಳಲ್ಲಿ ಪಶ್ಚಿಮ ಬಂಗಾಳದ ಪ್ರೌಢ ಶಿಕ್ಷಣ ಮಂಡಳಿಯಿಂದ ಶಾಲಾ ಶಿಕ್ಷಕರು ಮತ್ತು ಬೋಧಕ ಸಿಬ್ಬಂದಿಗಳ ಅಕ್ರಮ ನೇಮಕಾತಿಯಲ್ಲಿ ಅವರ ಪಾತ್ರವಿದೆ ಎಂದು ಆರೋಪಿಸಲಾಗಿದೆ.

ನಂತರ ಪಾರ್ಥ ಚಟರ್ಜಿ ಅವರ ಆಪ್ತ ಸಹಾಯಕರಾದ ಅರ್ಪಿತಾ ಮುಖರ್ಜಿ ಅವರ ಮನೆಯಲ್ಲಿ ಸುಮಾರು  20 ಕೋಟಿ ರೂ. ನಗದು ಪತ್ತೆಯಾಗಿದೆ. ಇದು ಸಚಿವರ ಬಂಧನಕ್ಕೆ ಪ್ರಮುಖ ಕಾರಣ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT