ಮೊಹಮ್ಮದ್ ಜುಬೈರ್ 
ದೇಶ

ಮೊಹಮ್ಮದ್ ಜುಬೈರ್ ಕ್ರಿಮಿನಲ್ ಪ್ರಕರಣದ ಪ್ರಕ್ರಿಯೆಯ ವಿಷವರ್ತುಲದಲ್ಲಿ ಸಿಲುಕಿದ್ದರು: ಸುಪ್ರೀಂ ಕೋರ್ಟ್

ಮೊಹಮ್ಮದ್ ಜುಬೈರ್ ವಿರುದ್ಧ ಇರುವ ದ್ವೇಷ ಭಾಷಣಕ್ಕೆ ಸಂಬಂಧಿಸಿದ ಆರೋಪವನ್ನು ಮುಂದಿಟ್ಟುಕೊಂಡು ಸುಪ್ರೀಂ ಕೋರ್ಟ್ ಮಹತ್ವದ ಹೇಳಿಕೆಗಳನ್ನು ನೀಡಿದೆ. 

ನವದೆಹಲಿ: ಮೊಹಮ್ಮದ್ ಜುಬೈರ್ ವಿರುದ್ಧ ಇರುವ ದ್ವೇಷ ಭಾಷಣಕ್ಕೆ ಸಂಬಂಧಿಸಿದ ಆರೋಪವನ್ನು ಮುಂದಿಟ್ಟುಕೊಂಡು ಸುಪ್ರೀಂ ಕೋರ್ಟ್ ಮಹತ್ವದ ಹೇಳಿಕೆಗಳನ್ನು ನೀಡಿದೆ. 

ಆರೋಪಿಯ ವಿರುದ್ಧದ ಒಂದೇ ಆರೋಪಕ್ಕೆ ಹಲವು ಸ್ಥಳಗಳಲ್ಲಿ ಎಫ್ಐಆರ್ ಗಳನ್ನು ದಾಖಲಿಸುವುದು ಸಮಂಜಸವಲ್ಲ ಎಂಬುದು ಜುಬೈರ್ ಗೆ ಜಾಮೀನು ಮಂಜೂರು ಮಾಡಿರುವ ಸುಪ್ರೀಂ ಕೋರ್ಟ್ ನ ಹೇಳಿಕೆಯ ಒಟ್ಟಾರೆಯ ಸಾರಾಂಶ. 

ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ವಿರುದ್ಧವಿರುವ ದ್ವೇಷ ಭಾಷಣ ಅಥವಾ ಸಾಮಾಜಿಕ ಜಾಲತಾಣದಲ್ಲಿನ ಪೋಸ್ಟ್ ಪ್ರಕರಣದಲ್ಲಿ ಉತ್ತರ ಪ್ರದೇಶವೂ ಸೇರಿದಂತೆ ಹಲವೆಡೆ ಒಂದಕ್ಕಿಂತ ಹೆಚ್ಚು ಎಫ್ಐಆರ್ ಗಳು ದಾಖಲಾಗಿದ್ದವು. ಉತ್ತರ ಪ್ರದೇಶದಲ್ಲಿ ದಾಖಲಾಗಿದ್ದ ಎಫ್ಐಆರ್ ಗಳಿಗೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನನ್ನು ಸುಪ್ರೀಂ ಕೋರ್ಟ್ ಮಂಜೂರು ಮಾಡಿದೆ. 

"ಕ್ರಿಮಿನಲ್ ಪ್ರಕರಣಗಳ ಪ್ರಕ್ರಿಯೆ ಜುಬೈರ್ ವಿರುದ್ಧ ನಿರಂತರವಾಗಿ ಕೆಲಸ ಮಾಡಿದೆ. ಬಂಧನ ಎಂಬುದು ಶಿಕ್ಷೆಯ ಸಾಧನವಾಗಬಾರದು. ಮೊಹಮ್ಮದ್ ಜುಬೈರ್ ಕ್ರಿಮಿನಲ್ ಪ್ರಕರಣದ ಪ್ರಕ್ರಿಯೆಯ ವಿಷವರ್ತುಲದಲ್ಲಿ ಸಿಲುಕಿದ್ದರು, ಈ ಪ್ರಕರಣದಲ್ಲಿ ಪ್ರಕ್ರಿಯೆಗಳೇ ಶಿಕ್ಷೆಯಾಗಿತ್ತು. ಪೊಲೀಸ್ ಅಧಿಕಾರಿಗಳಿಗೆ ವಿಚಾರಣೆಯೂ ಸೇರಿದಂತೆ  ಕ್ರಿಮಿನಲ್ ನ್ಯಾಯ ಪ್ರಕ್ರಿಯೆಯ ವಿವಿಧ ಹಂತಗಳಲ್ಲಿ ವ್ಯಕ್ತಿಯೋರ್ವನನ್ನು ಬಂಧಿಸಲು ಅಧಿಕಾರವಿದೆ. ಆದರೆ ಈ ಅಧಿಕಾರ ಅನಿಯಂತ್ರಿತವಾಗಿರಬಾರದು. ವ್ಯಕ್ತಿಗಳನ್ನು ಕೇವಲ ಆರೋಪಗಳ ಆಧಾರದಲ್ಲಿಯಷ್ಟೇ ಅಥವಾ ನ್ಯಾಯಯುತ ವಿಚಾರಣೆ ಇಲ್ಲದೇ ಶಿಕ್ಷಿಸಲು ಸಾಧ್ಯವಿಲ್ಲ. ಬಂಧನ ಎಂಬುದು ಶಿಕ್ಷೆಯ ಸಾಧನವಾಗಬಾರದು, ಆ ರೀತಿಯಾದಲ್ಲಿ ವೈಯಕ್ತಿಕ ಸ್ವಾತಂತ್ರ್ಯ ಹರಣವಾಗುವಂತಹ ಗಂಭೀರ ಸಂಭವನೀಯ ಪರಿಣಾಮಗಳಿರುತ್ತವೆ" ಎಂದು ನ್ಯಾ. ಡಿವೈ ಚಂದ್ರಚೂಡ್, ನ್ಯಾ. ಸೂರ್ಯಕಾಂತ್ ಹಾಗೂ ಎಎಸ್ ಬೋಪಣ್ಣ ಅವರಿದ್ದ ಪೀಠ ತನ್ನ 21 ಪುಟಗಳ ಆದೇಶದಲ್ಲಿ ಹೇಳಿದೆ. 

ಇದೇ ವೇಳೆ ಜುಬೈರ್ ಜಾಮೀನಿನ ಮೇಲೆ ಇದ್ದಾಗ ಆತನನ್ನು ಟ್ವೀಟ್ ಮಾಡದಂತೆ ನಿರ್ಬಂಧಿಸಬೇಕೆಂಬ ಉತ್ತರ ಪ್ರದೇಶದ ಪರ ವಕೀಲರ ಮನವಿಯನ್ನೂ ನ್ಯಾಯಾಲಯ ತಿರಸ್ಕರಿಸಿದ್ದು, ಈ ರೀತಿಯ ಆದೇಶಗಳು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ಪರಿಣಾಮ ಬೀರಲಿದೆ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT