ಹುತಾತ್ಮ ಯೋಧರಿಗೆ ರಾಜನಾಥ್ ಸಿಂಗ್ ಗೌರವ ನಮನ 
ದೇಶ

ಕಾರ್ಗಿಲ್ ವಿಜಯ್ ದಿವಸ್: ಹುತಾತ್ಮ ವೀರ ಯೋಧರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ನಮನ

1999ರಲ್ಲಿ ಪಾಕಿಸ್ತಾನ ವಿರುದ್ಧದ ಯುದ್ಧದಲ್ಲಿ ಕಾರ್ಗಿಲ್ ಪ್ರದೇಶವನ್ನು ಗೆದ್ದ ದಿನವಾದ ಇಂದು ದೇಶಾದ್ಯಂತ ಕಾರ್ಗಿಲ್ ವಿಜಯ್ ದಿವಸ್ ಆಗಿ ಆಚರಿಸಲಾಗುತ್ತಿದ್ದು, ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಹುತಾತ್ಮ ವೀರ ಯೋಧರನ್ನು ಸ್ಮರಿಸಲಾಗುತ್ತಿದೆ. 

ನವದೆಹಲಿ: 1999ರಲ್ಲಿ ಪಾಕಿಸ್ತಾನ ವಿರುದ್ಧದ ಯುದ್ಧದಲ್ಲಿ ಕಾರ್ಗಿಲ್ ಪ್ರದೇಶವನ್ನು ಗೆದ್ದ ದಿನವಾದ ಇಂದು ದೇಶಾದ್ಯಂತ ಕಾರ್ಗಿಲ್ ವಿಜಯ್ ದಿವಸ್ ಆಗಿ ಆಚರಿಸಲಾಗುತ್ತಿದ್ದು, ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಹುತಾತ್ಮ ವೀರ ಯೋಧರನ್ನು ಸ್ಮರಿಸಲಾಗುತ್ತಿದೆ. 

ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ದೆಹಲಿಯ ರಾಷ್ಟ್ರೀಯ ಯುದ್ದ ಸ್ಮಾರಕ ಬಳಿ  ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಮೂರು ಸೇನಾಪಡೆಗಳ ಮುಖ್ಯಸ್ಥರು ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದರು.

ಕಾರ್ಗಿಲ್ ವಿಜಯ್ ದಿವಸ್ ಸಂದರ್ಭದಲ್ಲಿ ತಾಯ್ನಾಡನ್ನು ರಕ್ಷಿಸಿದ ಹುತಾತ್ಮ ವೀರ ಯೋಧರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದ್ದಾರೆ.

ಕಾರ್ಗಿಲ್ ವಿಜಯ್ ದಿವಸ್ ನಮ್ಮ ಸಶಸ್ತ್ರ ಪಡೆಗಳ ಅಸಾಧಾರಣ ಶೌರ್ಯ, ಪರಾಕ್ರಮ ಮತ್ತು ಸಂಕಲ್ಪದ ಸಂಕೇತವಾಗಿದೆ. ಭಾರತ ಮಾತೆಯನ್ನು ರಕ್ಷಿಸಲು ಪ್ರಾಣ ತ್ಯಾಗ ಮಾಡಿದ ಎಲ್ಲ ವೀರ ಯೋಧರಿಗೆ ನಾನು ನಮಿಸುತ್ತೇನೆ. ಅವರಿಗೆ ಮತ್ತು ಅವರ ಕುಟುಂಬದ ಸದಸ್ಯರಿಗೆ ದೇಶವಾಸಿಗಳೆಲ್ಲರೂ ಸದಾ ಋಣಿಗಳಾಗಿರುತ್ತಾರೆ. ಜೈ ಹಿಂದ್ ಎಂದು ರಾಷ್ಟ್ರಪತಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಕಾರ್ಗಿಲ್ ವಿಜಯ್ ದಿವಸ್ ಭಾರತಾಂಬೆಯ ಹೆಮ್ಮೆಯ ಮತ್ತು ವೈಭವದ ಸಂಕೇತವಾಗಿದೆ. ಈ ಸಂದರ್ಭದಲ್ಲಿ ಮಾತೃಭೂಮಿ ರಕ್ಷಣೆಯಲ್ಲಿ ತಮ್ಮ ಶೌರ್ಯವನ್ನು ಸಾಧಿಸಿದ ದೇಶದ ಎಲ್ಲ ಪುತ್ರರಿಗೆ ವಂದನೆಗಳು ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ನಲ್ಲಿ ಗೌರವ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

SCROLL FOR NEXT