ಧರ್ಮರಾಜ್ ರಸಾಲಂ 
ದೇಶ

ಕೇರಳ ವೈದ್ಯಕೀಯ ಕಾಲೇಜು ಹಗರಣ: ಬ್ರಿಟನ್ ಗೆ ಪಲಾಯನ ಮಾಡುತ್ತಿದ್ದ ಬಿಷಪ್ ಗೆ ತಡೆ

ಚರ್ಚ್ ನಡೆಸುತ್ತಿರುವ ವೈದ್ಯಕೀಯ ಕಾಲೇಜಿನಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪದ ಬಗ್ಗೆ ತನಿಖೆ ನಡೆಯುತ್ತಿರುವುದರಿಂದ ಕೇರಳದ ಚರ್ಚ್‌ನ ಬಿಷಪ್‌ರನ್ನು ಮಂಗಳವಾರ ಬ್ರಿಟನ್‌ಗೆ ತೆರಳದಂತೆ ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ತಡೆಹಿಡಿಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಿರುವನಂತಪುರ: ಚರ್ಚ್ ನಡೆಸುತ್ತಿರುವ ವೈದ್ಯಕೀಯ ಕಾಲೇಜಿನಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪದ ಬಗ್ಗೆ ತನಿಖೆ ನಡೆಯುತ್ತಿರುವುದರಿಂದ ಕೇರಳದ ಚರ್ಚ್‌ನ ಬಿಷಪ್‌ರನ್ನು ಮಂಗಳವಾರ ಬ್ರಿಟನ್‌ಗೆ ತೆರಳದಂತೆ ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ತಡೆಹಿಡಿಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾರಕೋಣಂ ಮೆಡಿಕಲ್ ಕಾಲೇಜ್ ಹಗರಣ ಎಂದು ಹೆಸರಾದ ಡಾ ಸೋಮರ್‌ವೆಲ್ ಸ್ಮಾರಕ ಸಿಎಸ್‌ಐ ವೈದ್ಯಕೀಯ ಕಾಲೇಜಿನಲ್ಲಿ ಆರ್ಥಿಕ ಅವ್ಯವಹಾರಗಳ ಕುರಿತು ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ ಮನವಿಯ ನಂತರ ಇಮಿಗ್ರೇಷನ್ ಅಧಿಕಾರಿಗಳು ಬಿಷಪ್ ಎ ಧರ್ಮರಾಜ್ ರಸಾಲಂ ಅವರನ್ನು ಕೇರಳದ ರಾಜಧಾನಿ ನಗರದ ವಿಮಾನ ನಿಲ್ದಾಣದಲ್ಲಿ ತಡೆದರು. ನಂತರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ರಾಸಾಲಂ ಅವರನ್ನು ಭೇಟಿ ಮಾಡಿ ನಾಳೆ ವಿಚಾರಣೆಗೆ ಬರುವಂತೆ ತಿಳಿಸಿದ್ದಾರೆ.

ಆಸ್ಪತ್ರೆ, ವೈದ್ಯಕೀಯ ಕಾಲೇಜು ಮತ್ತು ಅದಕ್ಕೆ ಸಂಬಂಧಿಸಿದ ಎಲ್ಲಾ ಇತರ ಸಂಸ್ಥೆಗಳನ್ನು ಚರ್ಚ್ ಆಫ್ ಸೌತ್ ಇಂಡಿಯಾ ಅಥವಾ ಸಿಎಸ್‌ಐ ನಡೆಸುತ್ತದೆ.

ಚರ್ಚ್ ನಡೆಸುತ್ತಿರುವ ಆಸ್ಪತ್ರೆಯಲ್ಲಿ ವೈದ್ಯಕೀಯ ಸೀಟು ಕೊಡಿಸುವುದಾಗಿ ವಿದ್ಯಾರ್ಥಿಗಳಿಂದ ಭಾರಿ ಮೊತ್ತದ ಹಣವನ್ನು ವಸೂಲಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ಸಂಸ್ಥೆಯ ತಂಡವು ನಿನ್ನೆ ಸಿಎಸ್‌ಐ ದಕ್ಷಿಣ ಕೇರಳ ಡಯಾಸಿಸ್ ಪ್ರಧಾನ ಕಚೇರಿ ಮೇಲೆ ದಾಳಿ ನಡೆಸಿದೆ.

ಈ ಬಗ್ಗೆ ಈಗಾಗಲೇ ಅಪರಾಧ ವಿಭಾಗದ ಪೊಲೀಸರು ವಿಚಾರಣೆ ನಡೆಸಿರುವುದಾಗಿ ಕ್ರೈಸ್ತ ಶಿಕ್ಷಣ ಮಂಡಳಿಯ ನಿರ್ದೇಶಕ ಫಾದರ್ ಸಿಆರ್ ಗಾಡ್ವಿನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT