ಸಂಜಯ್ ಸಿಂಗ್ 
ದೇಶ

ಕಲಾಪಕ್ಕೆ ಅಡ್ಡಿ: ರಾಜ್ಯಸಭೆ ಎಎಪಿ ಸದಸ್ಯ ಸಂಜಯ್ ಸಿಂಗ್ ಅಮಾನತು

ರಾಜ್ಯಸಭೆಯ ಕಲಾಪಕ್ಕೆ ಅಡ್ಡಿಪಡಿಸಿರುವುದಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ನಾಯಕ ಸಂಜಯ್ ಸಿಂಗ್ ಅವರನ್ನು ಈ ವಾರದ ಕಲಾಪದ ಉಳಿದಿರುವ ಅವಧಿಗೆ ಅಮಾನತುಗೊಳಿಸಲಾಗಿದೆ .

ನವದೆಹಲಿ: ರಾಜ್ಯಸಭೆಯ ಕಲಾಪಕ್ಕೆ ಅಡ್ಡಿಪಡಿಸಿರುವುದಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ನಾಯಕ ಸಂಜಯ್ ಸಿಂಗ್ ಅವರನ್ನು ಈ ವಾರದ ಕಲಾಪದ ಉಳಿದಿರುವ ಅವಧಿಗೆ ಅಮಾನತುಗೊಳಿಸಲಾಗಿದೆ ಎಂದು ರಾಜ್ಯಸಭೆಯ ಉಪ ಸಭಾಪತಿ ಹರಿವಂಶ ಸಿಂಗ್‌ ತಿಳಿಸಿದ್ದಾರೆ.

ಸಂಜಯ್ ಸಿಂಗ್ ಅವರು, ಸಭಾಧ್ಯಕ್ಷರ ಮೇಜಿಗೆ ಕಾಗದ ಎಸೆದು ಘೋಷಣೆ ಕೂಗಿ ಕಲಾಪಕ್ಕೆ ಅಡ್ಡಿಪಡಿಸಿರುವ ಹಿನ್ನೆಲೆಯಲ್ಲಿ ರಾಜ್ಯಸಭೆಯ ಉಪ ಸಭಾಪತಿ ಶಿಸ್ತು ಕ್ರಮ ಕೈಗೊಂಡಿದ್ದಾರೆ. ಮಂಗಳವಾರದಂದು ಸಭಾಧ್ಯಕ್ಷರ ಪೀಠಕ್ಕೆ ಅಗೌರವ ತೋರಿದ ಕಾರಣಕ್ಕೆ ವಿರೋಧ ಪಕ್ಷಗಳ ಒಟ್ಟು 19 ಸಂಸದರನ್ನು ರಾಜ್ಯಸಭೆಯಿಂದ ಒಂದು ವಾರದ ಅವಧಿಗೆ ಅಮಾನತುಗೊಳಿಸಲಾಗಿತ್ತು.

ತೃಣಮೂಲ ಕಾಂಗ್ರೆಸ್‌ನ ಏಳು, ಡಿಎಂಕೆಯ ಆರು, ತೆಲಂಗಾಣ ರಾಷ್ಟ್ರ ಸಮಿತಿಯ (ಟಿಆರ್‌ಎಸ್) ಮೂವರು, ಸಿಪಿಐಎಂನ ಇಬ್ಬರು ಹಾಗೂ ಸಿಪಿಐನ ಒಬ್ಬ ಸಂಸದರನ್ನು ಅಮಾನತುಗೊಳಿಸಲಾಗಿದೆ.

ಪ್ರತಿಪಕ್ಷದ ಸದಸ್ಯರು ಸದನದ ಬಾವಿಯಲ್ಲಿ ಗದ್ದಲ ಎಬ್ಬಿಸುತ್ತಲೇ ಇದ್ದಾಗಲೂ ಧ್ವನಿ ಮತದ ಮೂಲಕ ಪ್ರಸ್ತಾವನೆ ಅಂಗೀಕರಿಸಲಾಯಿತು. ಪ್ರಸ್ತಾವನೆ ಅಂಗೀಕರಿಸಿದ ಕೂಡಲೇ ಸದನ ತೊರೆಯುವಂತೆ ಉಪಸಭಾಪತಿ ಸಿಂಗ್ ಕೇಳಿಕೊಂಡರು. ಪ್ರತಿಪಕ್ಷಗಳ ಸದಸ್ಯರು ಗದ್ದಲ ಮುಂದುವರಿಸಿದ ಹಿನ್ನೆಲೆಯಲ್ಲಿ ಉಪಸಭಾಪತಿ ಸದನವನ್ನು 15 ನಿಮಿಷಗಳ ಕಾಲ ಮುಂದೂಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT