ಸಾಂದರ್ಭಿಕ ಚಿತ್ರ 
ದೇಶ

ನೊಯ್ಡಾದಲ್ಲಿ 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಓಡಿಹೋಗಲು ಯತ್ನಿಸುತ್ತಿದ್ದ ಆರೋಪಿಗೆ ಗುಂಡೇಟು

ಬಾಲಕಿಯು ಎಂದಿನಂತೆ ಬೆಳಗ್ಗೆ ಶಾಲೆಗೆ ಹೋಗುತ್ತಿದ್ದಾಗ ಆರೋಪಿ ಆಕೆಯನ್ನು ಭೇಟಿಯಾಗಿ ಆಮಿಷವೊಡ್ಡಿ ಸೆಕ್ಟರ್ 32 ರ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾನೆ. ನಂತರ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.

ನೊಯ್ಡಾ: ನೊಯ್ಡಾದಲ್ಲಿ ಶಾಲೆಗೆ ಹೋಗುತ್ತಿದ್ದ 12 ವರ್ಷದ ಬಾಲಕಿ ಮೇಲೆ 20 ವರ್ಷದ ಯುವಕನೊಬ್ಬ ಬುಧವಾರ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. 

ಪೊಲೀಸರು ಆತನನ್ನು ಬಂಧಿಸಿರುವ ವೇಳೆ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಆಗ ಪೊಲೀಸರು ಆರೋಪಿ ಮೇಲೆ ಗುಂಡು ಹಾರಿಸಿ ಬಂಧಿಸಿದ್ದಾರೆ.

'ಬಾಲಕಿಯು ಎಂದಿನಂತೆ ಬೆಳಗ್ಗೆ ಶಾಲೆಗೆ ಹೋಗುತ್ತಿದ್ದಾಗ ಆರೋಪಿ ಆಕೆಯನ್ನು ಭೇಟಿಯಾಗಿ ಆಮಿಷವೊಡ್ಡಿ ಸೆಕ್ಟರ್ 32 ರ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾನೆ. ನಂತರ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ಸಂಬಂಧ ಸೆಕ್ಟರ್ 24ರ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಆರೋಪಿಯನ್ನು ಶೀಘ್ರವೇ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿಯು ಈ ಹಿಂದೆಯೂ ಒಂದೆರಡು ಬಾರಿ ಬಾಲಕಿಯೊಂದಿಗೆ ಮಾತುಕತೆ ನಡೆಸಿದ್ದ. ಸದ್ಯ ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಮತ್ತು ಪೋಕ್ಸೊ ಕಾಯ್ದೆ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದಿದ್ದಾರೆ.

ಆದಾಗ್ಯೂ, ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ವೈದ್ಯಕೀಯ ಪರೀಕ್ಷೆ ಮುಗಿಸಿ ಪೊಲೀಸ್ ಠಾಣೆಗೆ ಹಿಂತಿರುಗುವಾಗ ಆರೋಪಿ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಎಂದು ಹೆಚ್ಚುವರಿ ಉಪ ಪೊಲೀಸ್ ಆಯುಕ್ತ (ನೋಯ್ಡಾ) ರಣವಿಜಯ್ ಸಿಂಗ್ ತಿಳಿಸಿದ್ದಾರೆ.

'ಸೆಕ್ಟರ್ 25 ರ ಸಮೀಪದಲ್ಲಿರುವ ವೇಳೆ ಆತ ಪೊಲೀಸ್ ವ್ಯಾನ್‌ನಿಂದ ಹಾರಿ ನಿರ್ಜನ ಪ್ರದೇಶದ ಕಡೆಗೆ ಓಡಿದನು. ಪೊಲೀಸ್ ಸಿಬ್ಬಂದಿ ಶೀಘ್ರದಲ್ಲೇ ಆತನನ್ನು ಸುತ್ತುವರೆದರು. ಆದರೆ, ಆತ ಕಲ್ಲುಗಳು ಅಥವಾ ಇಟ್ಟಿಗೆ ಸೇರಿ ಅಲ್ಲಿ ಸಿಕ್ಕ ವಸ್ತುಗಳನ್ನು ಪೊಲೀಸರತ್ತ ಎಸೆದು ಪ್ರತಿದಾಳಿ ಮಾಡಿದನು. ಇದು ಪೊಲೀಸರು ಗುಂಡು ಹಾರಿಸಲು ಕಾರಣವಾಯಿತು. ಈ ವೇಳೆ ಆರೋಪಿಯ ಕಾಲಿಗೆ ಗುಂಡು ತಗುಲಿತು. ಆತನನ್ನು ಮತ್ತೊಮ್ಮೆ ಕಸ್ಟಡಿಗೆ ತೆಗೆದುಕೊಂಡು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಸದ್ಯ ಪ್ರಕರಣದ ಮುಂದಿನ ಕಾನೂನು ಪ್ರಕ್ರಿಯೆಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT