ಪ್ರಲ್ಹಾದ್ ಜೋಶಿ 
ದೇಶ

ಪಿಎಫ್ಐ ಬ್ಯಾನ್ ಕುರಿತು ಕೇಂದ್ರ ಗೃಹ ಇಲಾಖೆ ಜೊತೆ ಚರ್ಚೆ: ಪ್ರಲ್ಹಾದ್ ಜೋಶಿ

ರಾಜ್ಯದಲ್ಲಿ ಪ್ರವೀಣ್ ನೆಟ್ಟಾರ್ ಹತ್ಯೆಯಿಂದಾಗಿ ಜಾನಾಕ್ರೋಶ ಉಂಟಾಗಿದೆ. ಹೀಗಾಗಿ ಪಿಎಫ್ಐ ಸಂಘಟನೆ ಬ್ಯಾನ್ ಮಾಡುವ ಕುರಿತಂತೆ ಕೇಂದ್ರ ಗೃಹ ಇಲಾಖೆ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚರ್ಚಿಸಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ತಲ್ಹಾದ್ ಜೋಶಿ ಹೇಳಿದ್ದಾರೆ.

ನವದೆಹಲಿ: ಪಿಎಫ್ಐ ಸಂಘಟನೆ ಬ್ಯಾನ್ ಮಾಡುವ ಕುರಿತಂತೆ ಕೇಂದ್ರ ಗೃಹ ಇಲಾಖೆ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚರ್ಚಿಸಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ತಲ್ಹಾದ್ ಜೋಶಿ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ನನ್ನೊಂದಿಗೆ ಚರ್ಚೆ ನಡೆಸಿದ್ದಾರೆ. ಪ್ರವೀಣ್ ನೆಟ್ಟಾರ್ ಅವರ ಹತ್ಯೆ ಹಿಂದೆ ಪಿಎಫ್‌ಐ ಸಂಘಟನೆಗಳ ಕೈವಾಡ ಇರುವ ಬಗ್ಗೆ ಸಿಎಂ ಶಂಕೆ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.

ಪಿಎಫ್ಐ ಚಟುವಟಿಕೆಗಳ ಮೇಲೆ ರಾಷ್ಟ್ರಮಟ್ಟದಲ್ಲಿ ನಿಗಾ ಇಡಬೇಕಾಗಿದೆ. ಇಂತಹ ಸಂಘಟನೆಗಳನ್ನ ರಾಷ್ಟ್ರಮಟ್ಟದಲ್ಲಿಯೇ ಬ್ಯಾನ್ ಮಾಡಬೇಕು ಎಂಬ ಅಭಿಪ್ರಾಯ ಬೊಮ್ಮಾಯಿ ಅವರದ್ದಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಗೃಹ ಇಲಾಖೆ ಜೊತೆ ಚರ್ಚಿಸುವುದಾಗಿ ತಿಳಿಸಿದ್ದಾರೆ ಎಂದರು.

ಈ ಹಿಂದೆ, ಪ್ರವೀಣ್ ನೆಟ್ಟಾರ್ ಹತ್ಯೆ ಹಿಂದೆ ಪಿಎಫ್ಐ, ಎಸ್‌ಡಿಪಿಐ ಸಂಘಟನೆಯವರು ಇಂತಹ ಕೃತ್ಯದ ಹಿಂದಿದ್ದಾರೆ. ಈ ಸಂಘಟನೆಗಳ ಕೈವಾಡ ಇರುವ ಬಗ್ಗೆ ಹಲವು ಪ್ರಾಥಮಿಕ ಮತ್ತು ಮಾಧ್ಯಮ ವರದಿಗಳಿವೆ. ಇಂತಹ ಕೃತ್ಯ ನಡೆಸುವವರಿಗೆ ಕೇರಳದಲ್ಲಿ ರಕ್ಷಣೆ ನೀಡಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಗಂಭೀರ ಆರೋಪ ಮಾಡಿದ್ದರು.

ಪ್ರವೀಣ್ ಹತ್ಯೆಯಿಂದಾಗಿ ರಾಜ್ಯದಲ್ಲಿ ಜನಾಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರೊಂದಿಗೆ ಚರ್ಚಿಸಿದ್ದಾರೆ. ಪಿಎಫ್ಐ ಬ್ಯಾನ್ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಗೃಹ ಇಲಾಖೆ ಜೊತೆ ಚರ್ಚಿಸುವ ಬಗ್ಗೆ ಜೋಶಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT