ಪ್ರಲ್ಹಾದ್ ಜೋಶಿ 
ದೇಶ

ಪಿಎಫ್ಐ ಬ್ಯಾನ್ ಕುರಿತು ಕೇಂದ್ರ ಗೃಹ ಇಲಾಖೆ ಜೊತೆ ಚರ್ಚೆ: ಪ್ರಲ್ಹಾದ್ ಜೋಶಿ

ರಾಜ್ಯದಲ್ಲಿ ಪ್ರವೀಣ್ ನೆಟ್ಟಾರ್ ಹತ್ಯೆಯಿಂದಾಗಿ ಜಾನಾಕ್ರೋಶ ಉಂಟಾಗಿದೆ. ಹೀಗಾಗಿ ಪಿಎಫ್ಐ ಸಂಘಟನೆ ಬ್ಯಾನ್ ಮಾಡುವ ಕುರಿತಂತೆ ಕೇಂದ್ರ ಗೃಹ ಇಲಾಖೆ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚರ್ಚಿಸಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ತಲ್ಹಾದ್ ಜೋಶಿ ಹೇಳಿದ್ದಾರೆ.

ನವದೆಹಲಿ: ಪಿಎಫ್ಐ ಸಂಘಟನೆ ಬ್ಯಾನ್ ಮಾಡುವ ಕುರಿತಂತೆ ಕೇಂದ್ರ ಗೃಹ ಇಲಾಖೆ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚರ್ಚಿಸಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ತಲ್ಹಾದ್ ಜೋಶಿ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ನನ್ನೊಂದಿಗೆ ಚರ್ಚೆ ನಡೆಸಿದ್ದಾರೆ. ಪ್ರವೀಣ್ ನೆಟ್ಟಾರ್ ಅವರ ಹತ್ಯೆ ಹಿಂದೆ ಪಿಎಫ್‌ಐ ಸಂಘಟನೆಗಳ ಕೈವಾಡ ಇರುವ ಬಗ್ಗೆ ಸಿಎಂ ಶಂಕೆ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.

ಪಿಎಫ್ಐ ಚಟುವಟಿಕೆಗಳ ಮೇಲೆ ರಾಷ್ಟ್ರಮಟ್ಟದಲ್ಲಿ ನಿಗಾ ಇಡಬೇಕಾಗಿದೆ. ಇಂತಹ ಸಂಘಟನೆಗಳನ್ನ ರಾಷ್ಟ್ರಮಟ್ಟದಲ್ಲಿಯೇ ಬ್ಯಾನ್ ಮಾಡಬೇಕು ಎಂಬ ಅಭಿಪ್ರಾಯ ಬೊಮ್ಮಾಯಿ ಅವರದ್ದಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಗೃಹ ಇಲಾಖೆ ಜೊತೆ ಚರ್ಚಿಸುವುದಾಗಿ ತಿಳಿಸಿದ್ದಾರೆ ಎಂದರು.

ಈ ಹಿಂದೆ, ಪ್ರವೀಣ್ ನೆಟ್ಟಾರ್ ಹತ್ಯೆ ಹಿಂದೆ ಪಿಎಫ್ಐ, ಎಸ್‌ಡಿಪಿಐ ಸಂಘಟನೆಯವರು ಇಂತಹ ಕೃತ್ಯದ ಹಿಂದಿದ್ದಾರೆ. ಈ ಸಂಘಟನೆಗಳ ಕೈವಾಡ ಇರುವ ಬಗ್ಗೆ ಹಲವು ಪ್ರಾಥಮಿಕ ಮತ್ತು ಮಾಧ್ಯಮ ವರದಿಗಳಿವೆ. ಇಂತಹ ಕೃತ್ಯ ನಡೆಸುವವರಿಗೆ ಕೇರಳದಲ್ಲಿ ರಕ್ಷಣೆ ನೀಡಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಗಂಭೀರ ಆರೋಪ ಮಾಡಿದ್ದರು.

ಪ್ರವೀಣ್ ಹತ್ಯೆಯಿಂದಾಗಿ ರಾಜ್ಯದಲ್ಲಿ ಜನಾಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರೊಂದಿಗೆ ಚರ್ಚಿಸಿದ್ದಾರೆ. ಪಿಎಫ್ಐ ಬ್ಯಾನ್ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಗೃಹ ಇಲಾಖೆ ಜೊತೆ ಚರ್ಚಿಸುವ ಬಗ್ಗೆ ಜೋಶಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

ಬಿಜೆಪಿ ನಿಯೋಗದಿಂದ ರಾಜ್ಯಪಾಲರ ಭೇಟಿ: 'ದ್ವೇಷ ಭಾಷಣ ತಡೆ' ಮಸೂದೆಗೆ ಅಂಕಿತ ಹಾಕದಂತೆ ಮನವಿ!

SCROLL FOR NEXT