ಸಂಗ್ರಹ ಚಿತ್ರ 
ದೇಶ

ಅಸ್ಸಾಂ: ಅಂತಾರಾಷ್ಟ್ರೀಯ ಉಗ್ರ ಸಂಘಟನೆ ಜೊತೆ ಇಸ್ಲಾಮಿಕ್ ಭಯೋತ್ಪಾದಕ ಘಟಕದ ನಂಟು; 11 ಮಂದಿ ಬಂಧನ!

ಇಸ್ಲಾಮಿಕ್ ಮೂಲಭೂತವಾದಕ್ಕೆ ಸಂಬಂಧಿಸಿದಂತೆ ಅಸ್ಸಾಂ ಪೊಲೀಸರು ಮತ್ತು ಕೇಂದ್ರೀಯ ಏಜೆನ್ಸಿಗಳು ಇಂದು 11 ಜನರನ್ನು ಬಂಧಿಸಿದ್ದಾರೆ.

ಗುವಾಹಟಿ: ಇಸ್ಲಾಮಿಕ್ ಮೂಲಭೂತವಾದಕ್ಕೆ ಸಂಬಂಧಿಸಿದಂತೆ ಅಸ್ಸಾಂ ಪೊಲೀಸರು ಮತ್ತು ಕೇಂದ್ರೀಯ ಏಜೆನ್ಸಿಗಳು ಇಂದು 11 ಜನರನ್ನು ಬಂಧಿಸಿದ್ದಾರೆ.

ಬಾಂಗ್ಲಾದೇಶ ಮೂಲದ ಮೂಲಭೂತವಾದಿ ಸಂಘಟನೆಯಾದ ಅನ್ಸರುಲ್ಲಾ ಬಾಂಗ್ಲಾ ತಂಡ (ಎಬಿಟಿ) ಮತ್ತು ಭಾರತೀಯ ಉಪಖಂಡದ ಅಲ್-ಖೈದಾ (ಎಕ್ಯೂಐಎಸ್) ನೊಂದಿಗೆ ಸಂಪರ್ಕ ಹೊಂದಿದೆ.

'ಅಸ್ಸಾಂ ಪೊಲೀಸರು ಮೊರಿಗಾಂವ್, ಬಾರ್ಪೇಟಾ, ಗುವಾಹಟಿ ಮತ್ತು ಗೋಲ್ಪಾರಾ ಜಿಲ್ಲೆಗಳಿಂದ 11 ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಬಂಧಿತರು ಜಾಗತಿಕ ಭಯೋತ್ಪಾದಕ ಸಂಘಟನೆಗಳಾದ AQIS ಮತ್ತು ABT ನೊಂದಿಗೆ ಸಂಪರ್ಕ ಹೊಂದಿರುವ ಇಸ್ಲಾಮಿಕ್ ಮೂಲಭೂತವಾದದೊಂದಿಗೆ ಸಂಪರ್ಕ ಹೊಂದಿದ್ದಾರೆ. ಕಾನೂನಿನ ಪ್ರಕಾರ ಮುಂದಿನ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ವಿಶೇಷ DGP ಜಿಪಿ ಸಿಂಗ್ ಹೇಳಿದ್ದಾರೆ.

ಮೋರಿಗಾಂವ್‌ನ ಸಹರಿಯಾಗಾಂವ್‌ನಲ್ಲಿರುವ ಜಮೀವುಲ್ ಹುದಾ ಮದರಸಾ ಕಟ್ಟಡಕ್ಕೆ ಸೀಲ್ ಮಾಡಲಾಗಿದೆ. ಇದು ಬಂಧಿತ ವ್ಯಕ್ತಿಗಳ ಅಡಗುತಾಣವಾಗಿರಬಹುದು ಎಂದು ಶಂಕಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

'ದೇಶವಿರೋಧಿ ಚಟುವಟಿಕೆಗಳಿಗೆ ಸಂಬಂಧಿಸಿದ ಮೋರಿಯಾಬರಿಯಲ್ಲಿ ಮದರಸಾ ನಡೆಸುತ್ತಿರುವ ಮುಸ್ತಫಾ ಎಂಬ ವ್ಯಕ್ತಿಯ ಬಗ್ಗೆ ನಮಗೆ ಮಾಹಿತಿ ಸಿಕ್ಕಿತ್ತು. ಉಪಖಂಡದಲ್ಲಿ ಅಲ್-ಖೈದಾಗೆ ಸಂಬಂಧಿಸಿದ ಅನ್ಸರುಲ್ಲಾ ಬಾಂಗ್ಲಾ ತಂಡಕ್ಕೆ ಹಣಕಾಸು ಒದಗಿಸುವ ಮೂಲಕ ಆತ ಸಂಪರ್ಕ ಹೊಂದಿದ್ದಾನೆ. UAPA ಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮೋರಿಗಾಂವ್ ಎಸ್ಪಿ ಅಪರ್ಣಾ ಎನ್ ಹೇಳಿದ್ದಾರೆ.

ಬಂಧಿತ ವ್ಯಕ್ತಿಗಳಿಂದ ಪೊಲೀಸರು ಹಲವಾರು ಎಲೆಕ್ಟ್ರಾನಿಕ್ ಉಪಕರಣಗಳು ಮತ್ತು ದೋಷಾರೋಪಣೆಯ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಸಂಪರ್ಕಗಳು ಮತ್ತು ಜಾಲವನ್ನು ಪತ್ತೆಹಚ್ಚಲು ಹೆಚ್ಚಿನ ತನಿಖೆ ಮತ್ತು ಕಾರ್ಯಾಚರಣೆಗಳನ್ನು ಕೈಗೊಳ್ಳಲಾಗುತ್ತಿದೆ.

ಇದು ಅಸ್ಸಾಂ ಪೊಲೀಸರು ಮತ್ತು ಕೇಂದ್ರ ಏಜೆನ್ಸಿಗಳ ಸುದೀರ್ಘ ಕಣ್ಗಾವಲು ಕಾರ್ಯಾಚರಣೆಯ ಫಲಿತಾಂಶವಾಗಿದೆ ಎಂದು ವಿಶೇಷ ಡಿಜಿಪಿ ಜಿಪಿ ಸಿಂಗ್ ಸೇರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT