ಪಾರ್ಥ ಚಟರ್ಜಿ 
ದೇಶ

ಶಿಕ್ಷಕರ ನೇಮಕಾತಿ ಹಗರಣ: ಪಕ್ಷದ ಎಲ್ಲಾ ಹುದ್ದೆಗಳಿಂದಲೂ ಪಾರ್ಥ ಚಟರ್ಜಿ ವಜಾ

ಶಿಕ್ಷಕರ ನೇಮಕಾತಿ ಹಗರಣದಲ್ಲಿ ಬಂಧಿತರಾಗಿರುವ ಪಶ್ಚಿಮ ಬಂಗಾಳ ಮಾಜಿ ಸಚಿವ ಪಾರ್ಥ ಚಟರ್ಜಿ ಅವರನ್ನು ಪಕ್ಷದ ಎಲ್ಲಾ ಹುದ್ದೆಗಳಿಂದಲೂ ವಜಾಗೊಳಿಸಲಾಗಿದೆ ಮತ್ತು ಪಕ್ಷದಿಂದ ಅಮಾನತುಗೊಳಿಸಲಾಗಿದೆ

ಕೋಲ್ಕತ್ತಾ: ಶಿಕ್ಷಕರ ನೇಮಕಾತಿ ಹಗರಣದಲ್ಲಿ ಬಂಧಿತರಾಗಿರುವ ಪಶ್ಚಿಮ ಬಂಗಾಳ ಮಾಜಿ ಸಚಿವ ಪಾರ್ಥ ಚಟರ್ಜಿ ಅವರನ್ನು ಪಕ್ಷದ ಎಲ್ಲಾ ಹುದ್ದೆಗಳಿಂದಲೂ ವಜಾಗೊಳಿಸಲಾಗಿದೆ ಮತ್ತು ಪಕ್ಷದಿಂದ ಅಮಾನತುಗೊಳಿಸಲಾಗಿದೆ ಎಂದು ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರು ಗುರುವಾರ ಹೇಳಿದ್ದಾರೆ.

ಪ್ರಕರಣದ ತನಿಖೆ ಮುಗಿಯುವವರೆಗೆ ಚಟರ್ಜಿ ಅವರನ್ನು ಪಕ್ಷದ ಎಲ್ಲಾ ಹುದ್ದೆಗಳಿಂದ ತೆಗೆದುಹಾಕಲಾಗಿದೆ. ಪಕ್ಷದ ಶಿಸ್ತು ಸಮಿತಿಯ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಚಟರ್ಜಿ ನಿರಪರಾಧಿ ಎಂದು ಸಾಬೀತಾದರೆ ಮಾತ್ರ ಅವರಿಗೆ ಮತ್ತೆ ಟಿಎಂಸಿಯ ಬಾಗಿಲು ತೆರೆಯಲಿದೆ ಎಂದು ಅಭಿಷೇಕ್ ಬ್ಯಾನರ್ಜಿ ತಿಳಿಸಿದ್ದಾರೆ.

ಪಾರ್ಥ ಚಟರ್ಜಿ ಅವರು ಸುಮಾರು ಎರಡು ದಶಕಗಳಿಂದ ಟಿಎಂಸಿಯ ಪ್ರಧಾನ ಕಾರ್ಯದರ್ಶಿಯಾಗಿದ್ದರು ಮತ್ತು ಈ ವರ್ಷದ ಆರಂಭದಲ್ಲಿ ಅವರನ್ನು ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು.

ಇದಕ್ಕು ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು  ಪಾರ್ಥ ಚಟರ್ಜಿ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel