ರಾಜ್ಯ ಸಭಾ 
ದೇಶ

ಕಲಾಪಕ್ಕೆ ಅಡ್ಡಿ: ಎಎಪಿಯ ಇಬ್ಬರು ಸೇರಿ ಮೂವರು ಸದಸ್ಯರು ರಾಜ್ಯಸಭೆಯಿಂದ ಅಮಾನತು

‘ಅಶಿಸ್ತಿನ ನಡವಳಿಕೆಗಾಗಿ’ಗಾಗಿ ಇದುವರೆಗೆ 23 ವಿರೋಧ ಪಕ್ಷದ ಸದಸ್ಯರನ್ನು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ. ಪಕ್ಷೇತರ ಸಂಸದ ಅಜಿತ್‌ ಕುಮಾರ್‌ ಭುಯಾನ್‌ ಸೇರಿದಂತೆ ಆಮ್ ಆದ್ಮಿ ಪಕ್ಷದ ಸುಶೀಲ್‌ ಕುಮಾರ್‌ ಗುಪ್ತಾ ಹಾಗೂ ಸಂದೀಪ್‌ ಕುಮಾರ್‌ ಪಾಠಕ್‌ ಅವರನ್ನು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ.

ನವದೆಹಲಿ: ಸದನದಲ್ಲಿ 'ಅಶಿಸ್ತಿನ ವರ್ತನೆ' ತೋರಿದ್ದಕ್ಕಾಗಿ ಪಕ್ಷೇತರ ಸಂಸದ ಅಜಿತ್‌ ಕುಮಾರ್‌ ಭುಯಾನ್‌ ಸೇರಿದಂತೆ ಆಮ್ ಆದ್ಮಿ ಪಕ್ಷದ ಸುಶೀಲ್‌ ಕುಮಾರ್‌ ಗುಪ್ತಾ ಹಾಗೂ ಸಂದೀಪ್‌ ಕುಮಾರ್‌ ಪಾಠಕ್‌ ಅವರನ್ನು ಈ ವಾರದ ಕಲಾಪದ ಉಳಿದಿರುವ ಅವಧಿಗೆ ಅಮಾನತುಗೊಳಿಸುವ ಪ್ರಸ್ತಾವನೆಯನ್ನು ರಾಜ್ಯಸಭೆ ಗುರುವಾರ ಅಂಗೀಕರಿಸಿದೆ.

ತೀವ್ರ ಗದ್ದಲದ ನಡುವೆ ಮೊದಲ ಬಾರಿಗೆ ಸದನವನ್ನು ಮುಂದೂಡಿದ ನಂತರವೂ, ಪ್ರತಿಪಕ್ಷ ಸದಸ್ಯರು ಸದನದ ಬಾವಿಯಲ್ಲಿ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದರು.

ಫಲಕಗಳನ್ನು ಹಿಡಿದುಕೊಂಡು ಸದನದ ಬಾವಿಯಲ್ಲಿ ಘೋಷಣೆಗಳನ್ನು ಕೂಗಿದ್ದಕ್ಕಾಗಿ ರಾಜ್ಯಸಭೆಯ ಉಪ ಸಭಾಪತಿ ಹರಿವಂಶ್ ಅವರು ಮೂವರು ಸದಸ್ಯರನ್ನು ಹೆಸರಿಸಿದರು.

ಬಳಿಕ, ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ವಿ.ಮುರಳೀಧರನ್ ಅವರು, ಕಲಾಪದ ಉಳಿದ ಅವಧಿಗೆ ಮೂವರು ಸದಸ್ಯರನ್ನು ಸದನದಿಂದ ಅಮಾನತುಗೊಳಿಸುವ ಪ್ರಸ್ತಾಪವನ್ನು ಮಂಡಿಸಿದರು.

ಧ್ವನಿ ಮತದ ಮೂಲಕ ಈ ಅಮಾನತು ಪ್ರಸ್ತಾವವನ್ನು ಅಂಗೀಕರಿಸಲಾಯಿತು. ಕೆಲವು ವಿರೋಧ ಪಕ್ಷದ ಸದಸ್ಯರು ಮತ ವಿಭಜನೆಗೆ ಒತ್ತಾಯಿಸಿದರು. ಹರಿವಂಶ್ ಅವರು ಮತ ವಿಭಜನೆಗೆ ಅವಕಾಶ ನೀಡಲು ಸದಸ್ಯರು ತಮ್ಮ ತಮ್ಮ ಸ್ಥಾನಗಳಿಗೆ ತೆರಳಲು ಸೂಚಿಸಿದರು. ಆದರೆ, ಪ್ರತಿಪಕ್ಷದ ಸದಸ್ಯರು ಗದ್ದಲ ಮುಂದುವರಿಸಿದರು. ನಂತರ ಪ್ರತಿಪಕ್ಷ ಸದಸ್ಯರ ಗದ್ದಲದ ನಡುವೆಯೇ ಅವರು ಸದನವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಿದರು.

‘ಅಶಿಸ್ತಿನ ನಡವಳಿಕೆಗಾಗಿ’ಗಾಗಿ ಇದುವರೆಗೆ 23 ವಿರೋಧ ಪಕ್ಷದ ಸದಸ್ಯರನ್ನು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT