ರಾಜ್ಯ ಸಭಾ 
ದೇಶ

ಕಲಾಪಕ್ಕೆ ಅಡ್ಡಿ: ಎಎಪಿಯ ಇಬ್ಬರು ಸೇರಿ ಮೂವರು ಸದಸ್ಯರು ರಾಜ್ಯಸಭೆಯಿಂದ ಅಮಾನತು

‘ಅಶಿಸ್ತಿನ ನಡವಳಿಕೆಗಾಗಿ’ಗಾಗಿ ಇದುವರೆಗೆ 23 ವಿರೋಧ ಪಕ್ಷದ ಸದಸ್ಯರನ್ನು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ. ಪಕ್ಷೇತರ ಸಂಸದ ಅಜಿತ್‌ ಕುಮಾರ್‌ ಭುಯಾನ್‌ ಸೇರಿದಂತೆ ಆಮ್ ಆದ್ಮಿ ಪಕ್ಷದ ಸುಶೀಲ್‌ ಕುಮಾರ್‌ ಗುಪ್ತಾ ಹಾಗೂ ಸಂದೀಪ್‌ ಕುಮಾರ್‌ ಪಾಠಕ್‌ ಅವರನ್ನು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ.

ನವದೆಹಲಿ: ಸದನದಲ್ಲಿ 'ಅಶಿಸ್ತಿನ ವರ್ತನೆ' ತೋರಿದ್ದಕ್ಕಾಗಿ ಪಕ್ಷೇತರ ಸಂಸದ ಅಜಿತ್‌ ಕುಮಾರ್‌ ಭುಯಾನ್‌ ಸೇರಿದಂತೆ ಆಮ್ ಆದ್ಮಿ ಪಕ್ಷದ ಸುಶೀಲ್‌ ಕುಮಾರ್‌ ಗುಪ್ತಾ ಹಾಗೂ ಸಂದೀಪ್‌ ಕುಮಾರ್‌ ಪಾಠಕ್‌ ಅವರನ್ನು ಈ ವಾರದ ಕಲಾಪದ ಉಳಿದಿರುವ ಅವಧಿಗೆ ಅಮಾನತುಗೊಳಿಸುವ ಪ್ರಸ್ತಾವನೆಯನ್ನು ರಾಜ್ಯಸಭೆ ಗುರುವಾರ ಅಂಗೀಕರಿಸಿದೆ.

ತೀವ್ರ ಗದ್ದಲದ ನಡುವೆ ಮೊದಲ ಬಾರಿಗೆ ಸದನವನ್ನು ಮುಂದೂಡಿದ ನಂತರವೂ, ಪ್ರತಿಪಕ್ಷ ಸದಸ್ಯರು ಸದನದ ಬಾವಿಯಲ್ಲಿ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದರು.

ಫಲಕಗಳನ್ನು ಹಿಡಿದುಕೊಂಡು ಸದನದ ಬಾವಿಯಲ್ಲಿ ಘೋಷಣೆಗಳನ್ನು ಕೂಗಿದ್ದಕ್ಕಾಗಿ ರಾಜ್ಯಸಭೆಯ ಉಪ ಸಭಾಪತಿ ಹರಿವಂಶ್ ಅವರು ಮೂವರು ಸದಸ್ಯರನ್ನು ಹೆಸರಿಸಿದರು.

ಬಳಿಕ, ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ವಿ.ಮುರಳೀಧರನ್ ಅವರು, ಕಲಾಪದ ಉಳಿದ ಅವಧಿಗೆ ಮೂವರು ಸದಸ್ಯರನ್ನು ಸದನದಿಂದ ಅಮಾನತುಗೊಳಿಸುವ ಪ್ರಸ್ತಾಪವನ್ನು ಮಂಡಿಸಿದರು.

ಧ್ವನಿ ಮತದ ಮೂಲಕ ಈ ಅಮಾನತು ಪ್ರಸ್ತಾವವನ್ನು ಅಂಗೀಕರಿಸಲಾಯಿತು. ಕೆಲವು ವಿರೋಧ ಪಕ್ಷದ ಸದಸ್ಯರು ಮತ ವಿಭಜನೆಗೆ ಒತ್ತಾಯಿಸಿದರು. ಹರಿವಂಶ್ ಅವರು ಮತ ವಿಭಜನೆಗೆ ಅವಕಾಶ ನೀಡಲು ಸದಸ್ಯರು ತಮ್ಮ ತಮ್ಮ ಸ್ಥಾನಗಳಿಗೆ ತೆರಳಲು ಸೂಚಿಸಿದರು. ಆದರೆ, ಪ್ರತಿಪಕ್ಷದ ಸದಸ್ಯರು ಗದ್ದಲ ಮುಂದುವರಿಸಿದರು. ನಂತರ ಪ್ರತಿಪಕ್ಷ ಸದಸ್ಯರ ಗದ್ದಲದ ನಡುವೆಯೇ ಅವರು ಸದನವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಿದರು.

‘ಅಶಿಸ್ತಿನ ನಡವಳಿಕೆಗಾಗಿ’ಗಾಗಿ ಇದುವರೆಗೆ 23 ವಿರೋಧ ಪಕ್ಷದ ಸದಸ್ಯರನ್ನು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT