ತೀಸ್ತಾ ಸೆಟಲ್ವಾಡ(ಸಂಗ್ರಹ ಚಿತ್ರ) 
ದೇಶ

ತೀಸ್ತಾ ಸೆಟಲ್ವಾಡ್, ಶ್ರೀಕುಮಾರ್ ಗೆ ಜಾಮೀನು ನಿರಾಕರಿಸಿದ ಗುಜರಾತ್ ಕೋರ್ಟ್ 

ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಹಾಗೂ ಮಾಜಿ ಪೊಲೀಸ್ ಮಹಾನಿರ್ದೇಶಕ ಶ್ರೀಕುಮಾರ್ ಗೆ ಅಹ್ಮದಾಬಾದ್ ಸೆಷನ್ಸ್ ನ್ಯಾಯಾಲಯ ಜಾಮೀನು ನಿರಾಕರಿಸಿದೆ.

ಅಹ್ಮದಾಬಾದ್: ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಹಾಗೂ ಮಾಜಿ ಪೊಲೀಸ್ ಮಹಾನಿರ್ದೇಶಕ ಶ್ರೀಕುಮಾರ್ ಗೆ ಅಹ್ಮದಾಬಾದ್ ಸೆಷನ್ಸ್ ನ್ಯಾಯಾಲಯ ಜಾಮೀನು ನಿರಾಕರಿಸಿದೆ. 

2022 ರ ದಂಗೆ ಪ್ರಕರಣಗಳಲ್ಲಿ ಮುಗ್ಧರನ್ನು ಸಿಲುಕಿಸಲು ದಾಖಲೆಗಳನ್ನು "ಸೃಷ್ಟಿಸಿ"ದ ಆರೋಪದಡಿ ತೀಸ್ತಾ ಸೆಟಲ್ವಾಡ್ ಹಾಗೂ ಶ್ರೀಕುಮಾರ್ ಬಂಧನಕ್ಕೊಳಗಾಗಿದ್ದಾರೆ. 

ಎರಡೂ ಆದೇಶಗಳನ್ನು ತಿರಸ್ಕರಿಸಲಾಗಿದೆ ಎಂದು ಹೆಚ್ಚುವರಿ ಪ್ರಧಾನ ನ್ಯಾಯಾಧೀಶ ಡಿ ಡಿ ಥಾಕ್ಕರ್ ಹೇಳಿದ್ದಾರೆ. ತೀಸ್ತಾ ಸೆಟಲ್ವಾಡ್ ಹಾಗೂ ಶ್ರೀಕುಮಾರ್ ಅವರನ್ನು ಅಹ್ಮದಾಬಾದ್ ಕ್ರೈಮ್ ಬ್ರಾಂಚ್ ಪೊಲೀಸರು ತಿಂಗಳ ಹಿಂದೆ ಬಂಧಿಸಿದ್ದರು. 

ಗುಜರಾತ್ ನಲ್ಲಿ ಅಂದು ನರೇಂದ್ರ ಮೋದಿ ನೇತೃತ್ವದ  ಸರ್ಕಾರವನ್ನು ಅಸ್ಥಿರಗೊಳಿಸುವುದು ಅಥವ ಉರುಳಿಸುವ ಅರ್ಜಿದಾರರಾದ (ಸೆಟಲ್ವಾಡ್) ನ ರಾಜಕೀಯ ಉದ್ದೇಶವಾಗಿತ್ತು. ಇದಕ್ಕಾಗಿ ಆಕೆ ಎದುರಾಳಿ ರಾಜಕೀಯ ಪಕ್ಷದಿಂದ ಅಕ್ರಮವಾಗಿ ಆರ್ಥಿಕ ಹಾಗೂ ಇನ್ನಿತರ ಪ್ರಯೋಜನ, ಪ್ರತಿಫಲಗಳನ್ನು ಅವರು ಪಡೆದಿದ್ದರು ಎಂದು ಎಸ್ಐಟಿ ಪ್ರಮಾಣಪತ್ರದಲ್ಲಿ ಹೇಳಿದೆ.

ಸಾಕ್ಷಿಗಳ ಹೇಳಿಕೆಗಳನ್ನು ಉಲ್ಲೇಖಿಸಿರುವ ಎಸ್ಐಟಿ, ದಿವಂಗತ ನಾಯಕ ಅಹ್ಮದ್ ಪಟೇಲ್ ಅವರ ಆಣತಿಯಂತೆ ಈ ಕೆಲಸಗಳು ನಡೆದಿತ್ತು, ಅವರ ಆಣತಿಯ ಮೇರೆಗೇ ಸೆಟಲ್ವಾಡ್ ಗೆ 30 ಲಕ್ಷ ರೂಪಾಯಿ ಸಂದಾಯವಾಗಿತ್ತು ಎಂದು ಎಸ್ಐಟಿ ಹೇಳಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT