ದೇಶ

ಚೆನ್ನೈ: ಸೈದ್ಧಾಂತಿಕ ನಿಲುವಿಗೆ ಜೊತೆಯಾಗಿ ನಿಂತಿರುವ ಜನರೇ ನನ್ನ ರಾಜಕೀಯ ಶಕ್ತಿ- ಸಿದ್ದರಾಮಯ್ಯ

Nagaraja AB

ಚೆನ್ನೈ: ಡಾ.ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ ಸ್ವೀಕರಿಸಲು ಚನ್ನೈಗೆ ತೆರಳಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ ನೀಡಲಾಯಿತು. ತಮಿಳುನಾಡು ಕಾಂಗ್ರೆಸ್ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ವಿಮಾನ ನಿಲ್ದಾಣದಲ್ಲಿ ಹಾಜರಿದ್ದು, ಆತ್ಮೀಯವಾಗಿ ಬರಮಾಡಿಕೊಂಡರು.

ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಿದ್ದರಾಮಯ್ಯ, ಗಡಿ ರೇಖೆಗಳನ್ನು ಮೀರಿ ದೇಶದ ಉದ್ದಗಲಕ್ಕೂ ನನ್ನ ಸೈದ್ಧಾಂತಿಕ ನಿಲುವಿಗೆ ಜೊತೆಯಾಗಿ ನಿಂತಿರುವ ಜನರೇ ನನ್ನ ರಾಜಕೀಯ ಶಕ್ತಿ ಎಂದಿದ್ದಾರೆ. 

ಇಂದಿನ ಚನ್ನೈ ಪ್ರವಾಸದ ಸಂದರ್ಭದಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಸಿದ್ದರಾಮಯ್ಯ  ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. 

SCROLL FOR NEXT