ದೇಶ

ಪತ್ರಾ ಚಾಲ್ ಭೂ ಹಗರಣ: ಸಂಸದ ಸಂಜಯ್ ರಾವತ್ ರನ್ನು ವಶಕ್ಕೆ ಪಡೆದ ಇಡಿ

Vishwanath S

ನವದೆಹಲಿ: ಪತ್ರಾ ಚಾಲ್ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನೆ ಮುಖಂಡ, ಸಂಸದ ಸಂಜಯ್ ರಾವತ್ ರನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ. 

ರಾವತ್ ನಿವಾಸದ ಮೇಲೆ ದಾಳಿ ನಡೆಸಿದ ಗಂಟೆಗಳ ನಂತರ ಇಡಿ ಅವರನ್ನು ವಶಕ್ಕೆ ಪಡೆದಿದೆ. 1,034 ಕೋಟಿ ರೂ.ಗಳ ಪತ್ರಾ ಚಾವ್ಲ್ ಭೂ ಹಗರಣಕ್ಕೆ ಸಂಬಂಧಿಸಿದಂತೆ ರಾವತ್ ಅವರನ್ನು ಈ ಹಿಂದೆ ಎರಡು ಬಾರಿ ವಿಚಾರಣೆ ನಡೆಸಲಾಗಿತ್ತು.

ಜುಲೈ 1ರಂದು ರಾವತ್ ಅವರನ್ನು ಸುಮಾರು 10 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದ ಇಡಿ ಈ ಸಂದರ್ಭದಲ್ಲಿ ಅವರ ಹೇಳಿಕೆಯನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ(ಪಿಎಂಎಲ್‍ಎ) ಕ್ರಿಮಿನಲ್ ಸೆಕ್ಷನ್‍ಗಳ ಅಡಿಯಲ್ಲಿ ದಾಖಲಿಸಿಕೊಂಡಿತ್ತು. 

ಕಳೆದ ಏಪ್ರಿಲ್‍ನಲ್ಲಿ, ಜಾರಿ ನಿರ್ದೇಶನಾಲಯವು ತನ್ನ ತನಿಖೆಯ ಭಾಗವಾಗಿ ರಾವತ್ ಅವರ ಪತ್ನಿ ವರ್ಷಾ ರಾವತ್ ಮತ್ತು ಅವರ ಇಬ್ಬರು ಸಹಚರರ 11.15 ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿತ್ತು.

ಜಾರಿ ನಿರ್ದೇಶನಾಲಯದ (ಇ.ಡಿ) ತಂಡವು ಇಂದು ಬೆಳಗ್ಗೆ ಮುಂಬೈನಲ್ಲಿರುವ ಶಿವಸೇನಾ ಸಂಸದ ಸಂಜಯ್ ರಾವುತ್ ಅವರ ನಿವಾಸದಲ್ಲಿ ಶೋಧ ಕಾರ್ಯ ಕೈಗೊಂಡಿದೆ. ಮುಂಬೈನ 'ಪತ್ರಾ ಚಾಲ್' ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ರಾವುತ್ ಅವರನ್ನು ಇ.ಡಿ ತನಿಖೆ ನಡೆಸುತ್ತಿದೆ.

ಸಂಜಯ್ ರಾವತ್ ರನ್ನು ಇಡಿ ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಾವತ್ ನಿವಾಸದ ಎದುರು ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.

SCROLL FOR NEXT