ಸಂಜಯ್ ರಾವುತ್ 
ದೇಶ

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ; ಯಾವುದೇ ಕಾರಣಕ್ಕೂ ಶಿವಸೇನೆ ತೊರೆಯುವುದಿಲ್ಲ: ಸಂಜಯ್ ರಾವುತ್

ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ತಂಡವು ಮುಂಬೈನಲ್ಲಿರುವ ಶಿವಸೇನಾ ಸಂಸದ ಸಂಜಯ್ ರಾವುತ್ ಅವರ ನಿವಾಸದಲ್ಲಿ ಶೋಧ ಕಾರ್ಯಾಚರಣೆ ಕೈಗೊಂಡಿರುವ ಬೆನ್ನಲ್ಲೇ, ರಾವುತ್ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮುಂಬೈ: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ತಂಡವು ಮುಂಬೈನಲ್ಲಿರುವ ಶಿವಸೇನಾ ಸಂಸದ ಸಂಜಯ್ ರಾವುತ್ ಅವರ ನಿವಾಸದಲ್ಲಿ ಶೋಧ ಕಾರ್ಯಾಚರಣೆ ಕೈಗೊಂಡಿರುವ ಬೆನ್ನಲ್ಲೇ, ರಾವುತ್ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು. 'ಮಹಾರಾಷ್ಟ್ರ ಮತ್ತು ಶಿವಸೇನೆಯು ಹೋರಾಟವನ್ನು ಮುಂದುವರೆಸುತ್ತದೆ' ಎಂದು ಹೇಳಿದ ಅವರು, ಈ ಆರೋಪವನ್ನು ತಳ್ಳಿಹಾಕಿದರು.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, 'ನನ್ನ ವಿರುದ್ದ ಸುಳ್ಳು ಕ್ರಮ, ಸುಳ್ಳು ಸಾಕ್ಷ್ಯ ನೀಡಿದರೂ ಕೂಡ, ನಾನು ಶಿವಸೇನೆಯನ್ನು ತೊರೆಯುವುದಿಲ್ಲ. ನಾನು ಸತ್ತರೂ ಕೂಡ ಶರಣಾಗುವುದಿಲ್ಲ. ಜೈ ಮಹಾರಾಷ್ಟ್ರ' ಎಂದಿದ್ದಾರೆ.

'ಯಾವುದೇ ಹಗರಣಕ್ಕೂ ನನಗೂ ಸಂಬಂಧವಿಲ್ಲ. ಶಿವಸೇನಾ ಮುಖ್ಯಸ್ಥ ಬಾಳಾಸಾಹೇಬ್ ಠಾಕ್ರೆ ಅವರ ಮೇಲೆ ಪ್ರಮಾಣ ಮಾಡುವ ಮೂಲಕ ನಾನು ಈ ಮಾತನ್ನು ಹೇಳುತ್ತಿದ್ದೇನೆ. ಬಾಳಾಸಾಹೇಬರು ನಮಗೆ ಹೇಗೆ ಹೋರಾಡಬೇಕೆಂದು ಕಲಿಸಿದರು. ನಾನು ಶಿವಸೇನೆಗಾಗಿ ಹೋರಾಡುವುದನ್ನು ಮುಂದುವರಿಸುತ್ತೇನೆ' ಎಂದು ತಿಳಿಸಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, 'ಶಿವಸೇನೆ ದೀರ್ಘಕಾಲ ಗೆಲ್ಲುತ್ತದೆ!!! ಹೋರಾಟ ಯಾವಾಗಲೂ ಇರುತ್ತದೆ..' ಎಂದು ಬರೆದಿದ್ದಾರೆ.

ಜಾರಿ ನಿರ್ದೇಶನಾಲಯದ (ಇ.ಡಿ) ತಂಡವು ಭಾನುವಾರ ಬೆಳಗ್ಗೆ ಮುಂಬೈನಲ್ಲಿರುವ ಶಿವಸೇನಾ ಸಂಸದ ಸಂಜಯ್ ರಾವುತ್ ಅವರ ನಿವಾಸದಲ್ಲಿ ಶೋಧ ಕಾರ್ಯ ಕೈಗೊಂಡಿದೆ. ಮುಂಬೈನ 'ಪತ್ರಾ ಚಾಲ್' ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ರಾವುತ್ ಅವರನ್ನು ಇ.ಡಿ ತನಿಖೆ ನಡೆಸುತ್ತಿದೆ.

ಈಮಧ್ಯೆ, ರಾವುತ್ ಅವರ ಬೆಂಬಲಿಗರು ಅವರ ನಿವಾಸದ ಹೊರಗೆ ಜಮಾಯಿಸಿ, ಇ.ಡಿ ಮತ್ತು ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಜೊತೆ ತಾಯಿ ಸ್ಥದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ