ದೇಶ

ಕಳೆದ ಎಂಟು ವರ್ಷಗಳಲ್ಲಿ ಬಿಜೆಪಿ ಮುಖಂಡರ ಮೇಲೆ ಎಷ್ಟು ಇಡಿ, ಐಟಿ ದಾಳಿ ನಡೆದಿದೆ: ಕೆಟಿ ರಾಮ ರಾವ್

Nagaraja AB

ಹೈದ್ರಾಬಾದ್: ಕೇಂದ್ರಿಯ ತನಿಖಾ ಸಂಸ್ಥೆಗಳ ಪಾರದರ್ಶಕತೆಯನ್ನು ಟಿಆರ್ ಎಸ್ ಕಾರ್ಯಾಧ್ಯಕ್ಷ ಕೆ.ಟಿ ರಾಮ ರಾವ್ ಪ್ರಶ್ನಿಸಿದ್ದಾರೆ. ಡಿಎಂಕೆ ನೇತೃತ್ವದ ಸರ್ಕಾರದ ಅವಧಿಯಲ್ಲಿ ಕಳೆದ ಎಂಟು ವರ್ಷಗಳಲ್ಲಿ ಬಿಜೆಪಿ ಮುಖಂಡರು ಹಾಗೂ ಅವರ ಸಂಬಂಧಿಕರ ನಿವಾಸ ಹಾಗೂ ಕಚೇರಿಗಳ ಮೇಲೆ ಎಷ್ಟು ಇಡಿ, ಐಟಿ, ಸಿಬಿಐ ದಾಳಿ ನಡೆದಿದೆ ಎಂದು ಅವರು ಕೇಳಿದ್ದಾರೆ.

ಈ ಕುರಿತು ಶನಿವಾರ ಅವರು ಟ್ವೀಟ್ ಮಾಡಿದ್ದು, ಎಲ್ಲಾ ಬಿಜೆಪಿಯ ಸಂಬಂಧಿಕರು ಸತ್ಯ ಹರಿಶ್ಚಂದ್ರರಾ? ಎಂದು ಪ್ರಶ್ನಿಸಿದ್ದಾರೆ. 

ಅನೇಕ ತಿಂಗಳುಗಳಿಂದ ಬಿಜೆಪಿ ಹಾಗೂ ಟಿಆರ್ ಎಸ್ ಮುಖಂಡರ ನಡುವೆ ಮಾತಿನ ಚಕಮಕಿ ನಡೆಯುತ್ತಿದೆ. ತೆಲಂಗಾಣ ವಿಧಾನಸಭಾ ಚುನಾವಣೆಗೆ ಸನ್ನಿಹದಲ್ಲಿರುವಂತೆಯೇ ಉಭಯ ಪಕ್ಷಗಳ ನಡುವೆ ಆರೋಪ, ಪ್ರತ್ಯಾರೋಪ, ವಾಗ್ವಾದಗಳು ಮತ್ತಷ್ಟು ಹೆಚ್ಚಾಗುತ್ತಿವೆ.

SCROLL FOR NEXT