ಮಮತಾ ಬ್ಯಾನರ್ಜಿ 
ದೇಶ

ರಾಷ್ಟ್ರಪತಿ ಚುನಾವಣೆ: ಜೂನ್ 15 ರಂದು 22 ಪ್ರತಿಪಕ್ಷ ನಾಯಕರು, ಸಿಎಂಗಳ ಸಭೆ ಕರೆದ ಮಮತಾ ಬ್ಯಾನರ್ಜಿ

ಮುಂಬರುವ ರಾಷ್ಟ್ರಪತಿ ಚುನಾವಣೆಗೆ ಜಂಟಿ ಕಾರ್ಯತಂತ್ರವನ್ನು ಸಿದ್ಧಪಡಿಸಲು ಜೂನ್ 15 ರಂದು ದೆಹಲಿಯಲ್ಲಿ ಕರೆದಿರುವ ಸಭೆಗೆ ಹಾಜರಾಗುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶನಿವಾರ 22 ಪ್ರತಿಪಕ್ಷ...

ಕೋಲ್ಕತ್ತಾ: ಮುಂಬರುವ ರಾಷ್ಟ್ರಪತಿ ಚುನಾವಣೆಗೆ ಜಂಟಿ ಕಾರ್ಯತಂತ್ರವನ್ನು ಸಿದ್ಧಪಡಿಸಲು ಜೂನ್ 15 ರಂದು ದೆಹಲಿಯಲ್ಲಿ ಕರೆದಿರುವ ಸಭೆಗೆ ಹಾಜರಾಗುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶನಿವಾರ 22 ಪ್ರತಿಪಕ್ಷ ನಾಯಕರಿಗೆ ಪತ್ರ ಬರೆದಿದ್ದಾರೆ.

ರಾಷ್ಟ್ರಪತಿ ಚುನಾವಣೆ ಸಂಬಂಧ ರಾಷ್ಟ್ರ ರಾಜಧಾನಿಯಲ್ಲಿ ನಡೆಯುವ ಜಂಟಿ ಸಭೆಯಲ್ಲಿ ಭಾಗವಹಿಸುವಂತೆ ವಿರೋಧ ಪಕ್ಷಗಳ ಮುಖ್ಯಮಂತ್ರಿಗಳು ಮತ್ತು ನಾಯಕರಿಗೆ ಮಮತಾ ಬ್ಯಾನರ್ಜಿ ಅವರು ಮನವಿ ಮಾಡಿದ್ದಾರೆ  ಎಂದು ಟಿಎಂಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಕೇರಳ ಸಿಎಂ ಪಿಣರಾಯಿ ವಿಜಯನ್, ಒಡಿಶಾ ಸಿಎಂ ನವೀನ್ ಪಟ್ನಾಯಕ್, ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್, ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್, ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ಮತ್ತು ಪಂಜಾಬ್ ಸಿಎಂ ಭಗವಂತ್ ಮಾನ್ ಸೇರಿದಂತೆ 22 ಪ್ರತಿಪಕ್ಷ ನಾಯಕರಿಗೆ ಪತ್ರ ಬರೆಯಲಾಗಿದೆ..

"ನಮ್ಮ ಗೌರವಾನ್ವಿತ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರು ರಾಷ್ಟ್ರಪತಿ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕ್ರಮದ ಬಗ್ಗೆ ಚರ್ಚಿಸಲು ಎಲ್ಲಾ ಪ್ರಗತಿಪರ ವಿರೋಧ ಪಕ್ಷಗಳಿಗೆ ಜೂನ್ 15, 2022 ರಂದು ನವದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ಮಧ್ಯಾಹ್ನ 3 ಗಂಟೆಗೆ ಸಭೆ ಕರೆ ಕರೆದಿದ್ದಾರೆ" ಎಂದು ತೃಣಮೂಲ ಕಾಂಗ್ರೆಸ್ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯಪಾಲರು ಹೊರಡಿಸಿದ್ದ ಅಮಾನತು ಆದೇಶ ರದ್ದು: KPSC ಅಧ್ಯಕ್ಷರನ್ನಾಗಿ ಶಿವಶಂಕರಪ್ಪ ಮರುನೇಮಕಕ್ಕೆ ಹೈಕೋರ್ಟ್ ಸೂಚನೆ

ನೀಟ್ ಪ್ರತಿಭಟನೆ: ಪೊಲೀಸರ ದೌರ್ಜನ್ಯ ಆರೋಪಗಳ ತನಿಖೆಗೆ ಸುಪ್ರೀಂ ಉನ್ನತಾಧಿಕಾರ ಸಮಿತಿ

'ಮಹಾತ್ಮ ಗಾಂಧಿ, ನೆಹರು ಅಷ್ಟೇ ಅಲ್ಲ ವಾಜಪೇಯಿ ವಿರುದ್ಧವೂ ಕೇಸ್ ದಾಖಲಿಸಿ': ವಂದೇ ಮಾತರಂ ವಿವಾದ ಕುರಿತು ಖರ್ಗೆ ತಿರುಗೇಟು

ಪಬ್‌ನಲ್ಲಿ ಶಾಕಿಂಗ್ ಘಟನೆ: ಬಾರ್‌ಟೆಂಡರ್ ಯುವತಿಗೆ ಚಾಕುವಿನಿಂದ ಇರಿದು ಕೊಂದ ಸಹೋದ್ಯೋಗಿ; ಭಯಾನಕ ಕೃತ್ಯ CCTVಯಲ್ಲಿ ಸೆರೆ! Video

'ಸ್ವಂತ ಕೆಲಸದ ಮೇಲೆ ನಂಬಿಕೆ ಇಲ್ಲವೇ?': ಸಚಿವರು, ಅಧಿಕಾರಿಗಳು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲಿ?; CJP ಸಂಸ್ಥಾಪಕ ಅಭಿಜಿತ್ ದೀಪ್ಕೆ