ಸಿಎಂ ಯೋಗಿ ಆದಿತ್ಯನಾಥ್ 
ದೇಶ

ಸಿಎಂ ಯೋಗಿ ಆದಿತ್ಯನಾಥ್ ಭದ್ರತೆಯಲ್ಲಿ ಲೋಪ, 8 ಪೊಲೀಸರ ಅಮಾನತು

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಭದ್ರತೆಯಲ್ಲಿ ಲೋಪದ ನಂತರ ಓರ್ವ ಇನ್ಸ್ ಪೆಕ್ಟರ್ ಹಾಗೂ ಸಬ್ ಇನ್ಸ್ ಪೆಕ್ಟರ್ ಸೇರಿದಂತೆ 8 ಮಂದಿ ಪೊಲೀಸರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಭದ್ರತೆಯಲ್ಲಿ ಲೋಪದ ನಂತರ ಓರ್ವ ಇನ್ಸ್ ಪೆಕ್ಟರ್ ಹಾಗೂ ಸಬ್ ಇನ್ಸ್ ಪೆಕ್ಟರ್ ಸೇರಿದಂತೆ 8 ಮಂದಿ ಪೊಲೀಸರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರನ್ನು ಸ್ವಾಗತಿಸಲು ಗೋರಕ್ ಪುರ ವಿಮಾನ ನಿಲ್ದಾಣಕ್ಕೆ  ಯೋಗಿ ಆದಿತ್ಯನಾಥ್ ಶುಕ್ರವಾರ ತೆರಳುತ್ತಿರುವಾಗ ಭದ್ರತೆಯಲ್ಲಿ ಲೋಪ ಉಂಟಾಗಿತ್ತು. ಈ ಘಟನೆಯನ್ನು ಗಂಭೀರವಾಗಿ ತೆಗೆದುಕೊಳ್ಳಲಾಗಿದ್ದು, ಶನಿವಾರ ಎಂಟು ಪೊಲೀಸರನ್ನು ಗೋರಕ್ ಪುರ ಎಸ್ ಎಸ್ ಪಿ ವಿಪಿನ್ ತಾಡಾ ಅಮಾನತು ಮಾಡಿದ್ದಾರೆ.

ಶುಕ್ರವಾರ ಬೆಳಗ್ಗೆ 11-28 ಸುಮಾರಿನಲ್ಲಿ ಜೆ.ಪಿ. ನಡ್ಡಾ ಅವರನ್ನು ಬರಮಾಡಿಕೊಳ್ಳಲು ಸಿಎಂ ಗೋರಕ್ ಪುರ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದಾಗ  ಕುಶ್ಮಾಹಿ ರಸ್ತೆಯಿಂದ ಅನೇಕ ವಾಹನಗಳು ಸಿಎಂ ಎದುರಿಗೆ ಬಂದಿದ್ದವು. ಈ ಘಟನೆ ಸಂಬಂಧ ತನಿಖೆಗೆ ಆದೇಶಿಸಿದ್ದ ತಾಡಾ, ಲೋಪ ಕಂಡುಬಂದ ಹಿನ್ನೆಲೆಯಲ್ಲಿ 8 ಪೊಲೀಸರನ್ನು ಸೇವೆಯಿಂದ ಅಮಾನತು ಮಾಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT