ಭದ್ರತಾ ಸಿಬ್ಬಂದಿ 
ದೇಶ

ರಾಂಚಿ ಹಿಂಸಾಚಾರ: ಎಫ್‌ಐಆರ್‌ ದಾಖಲು; ಮೃತರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗಿಯಾಗಿರಲಿಲ್ಲ ಕುಟುಂಬಸ್ಥರು!

ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ಭಾನುವಾರ ಉದ್ವಿಗ್ನತೆ ಉಂಟಾಗಿದ್ದು, ಪ್ರವಾದಿ ಮೊಹಮ್ಮದ್ ಬಗೆಗಿನ ವಿವಾದಾತ್ಮಕ ಹೇಳಿಕೆಗಳ ವಿರುದ್ಧ ಹಿಂಸಾತ್ಮಕ ಪ್ರತಿಭಟನೆಯ ನಂತರ ಪೊಲೀಸರು ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆಯನ್ನು ಬಲಪಡಿಸಿದ್ದಾರೆ.

ರಾಂಚಿ: ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ಭಾನುವಾರ ಉದ್ವಿಗ್ನತೆ ಉಂಟಾಗಿದ್ದು, ಪ್ರವಾದಿ ಮೊಹಮ್ಮದ್ ಬಗೆಗಿನ ವಿವಾದಾತ್ಮಕ ಹೇಳಿಕೆಗಳ ವಿರುದ್ಧ ಹಿಂಸಾತ್ಮಕ ಪ್ರತಿಭಟನೆಯ ನಂತರ ಪೊಲೀಸರು ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆಯನ್ನು ಬಲಪಡಿಸಿದ್ದಾರೆ. ಜೊತೆಗೆ ಸಾವಿರಾರು ಜನರ ವಿರುದ್ಧ 25 ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.

ಇದೇ ವೇಳೆ ಸುಮಾರು 33 ಗಂಟೆಗಳ ನಂತರ ಜಿಲ್ಲೆಯಲ್ಲಿ ಇಂಟರ್ನೆಟ್ ಸೇವೆಗಳನ್ನು ಪುನಃಸ್ಥಾಪಿಸಲಾಗಿದೆ ಎಂದು ರಾಂಚಿ ಉಪ ಆಯುಕ್ತ ಛವಿ ರಂಜನ್ ತಿಳಿಸಿದ್ದಾರೆ.

ಶುಕ್ರವಾರದ ಪ್ರಾರ್ಥನೆಯ ನಂತರ ನಗರದಲ್ಲಿ ನಡೆದ ಪ್ರತಿಭಟನೆಗಳು ಮತ್ತು ಘರ್ಷಣೆಗಳಿಂದಾಗಿ ರಾಂಚಿಯ ಸೂಕ್ಷ್ಮ ಪ್ರದೇಶಗಳಲ್ಲಿ ಸುಮಾರು 3,500 ಭದ್ರತಾ ಸಿಬ್ಬಂದಿ ಕಾವಲು ಕಾಯುತ್ತಿದ್ದಾರೆ. ಹಿಂಸಾಚಾರದ ವೇಳೆ ಇಬ್ಬರು ಸಾವನ್ನಪ್ಪಿದ್ದರೆ ಎರಡು ಡಜನ್‌ಗಿಂತಲೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಪ್ರವಾದಿ ಮೊಹಮ್ಮದ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಬಿಜೆಪಿ ವಕ್ತಾರ ನೂಪುರ್ ಶರ್ಮಾ ಮತ್ತು ಮಾಜಿ ನಾಯಕ ನವೀನ್ ಜಿಂದಾಲ್ ಅವರನ್ನು ಬಂಧಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ರಾಂಚಿಯ ಹಿರಿಯ ಪೊಲೀಸ್ ಅಧೀಕ್ಷಕ ಸುರೇಂದ್ರ ಕುಮಾರ್ ಝಾ ಅವರು ಕ್ಷಿಪ್ರ ಕಾರ್ಯಾಚರಣೆ ಪಡೆ, ಭಯೋತ್ಪಾದನಾ ನಿಗ್ರಹ ದಳ, ವಿಶೇಷ ಕಾರ್ಯಪಡೆ ಮತ್ತು ಜಿಲ್ಲಾ ಪೊಲೀಸರನ್ನು ಆಯಕಟ್ಟಿನ ಸ್ಥಳಗಳಲ್ಲಿ ನಿಯೋಜಿಸಲಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT