ಕೆ.ಸಿ ವೇಣುಗೋಪಾಲ್ ಮತ್ತಿರರು 
ದೇಶ

ಕಾಂಗ್ರೆಸ್ ಪ್ರತಿಭಟನೆ ವೇಳೆ ಹೈಡ್ರಾಮಾ: ಹರಿದ ಅಂಗಿ ಸಮೇತ ಕೆಸಿ ವೇಣುಗೋಪಾಲ್, ಇತರೆ ನಾಯಕರು ಪೊಲೀಸ್ ವಶಕ್ಕೆ!

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಇಡಿ ವಿಚಾರಣೆ ನಡೆಸುತ್ತಿದ್ದು, ಇದೇ ವೇಳೆ  ಅವರನ್ನು ಬೆಂಬಲಿಸಿ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ್ದ ರ‍್ಯಾಲಿ ವೇಳೆ ಹೈಡ್ರಾಮಾವೇ ನಡೆದಿದೆ.

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಇಡಿ ವಿಚಾರಣೆ ನಡೆಸುತ್ತಿದ್ದು, ಇದೇ ವೇಳೆ  ಅವರನ್ನು ಬೆಂಬಲಿಸಿ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ್ದ ರ‍್ಯಾಲಿ ವೇಳೆ ಹೈಡ್ರಾಮಾವೇ ನಡೆದಿದೆ.

ಹೌದು...ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಇಡಿ ಮುಂದೆ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಿದ್ದು, ಅವರಿಗೆ ಪ್ರಿಯಾಂಕಾ ಗಾಂಧಿ ಸಹ ಸಾಥ್ ಕೊಟ್ಟಿದ್ದಾರೆ. ಈ ವೇಳೆ ಇಡಿ ಕಚೇರಿ ಹೊರಗೆ ಇದ್ದ ಕಾಂಗ್ರೆಸ್ ಕಾರ್ಯಕರ್ತರು ಅವರಿಗೆ ಬೆಂಬಲ ಸೂಚಿಸಲು ಎಐಸಿಸಿ ಕಚೇರಿಯಿಂದ ಇಡಿ ಕಚೇರಿವರೆಗೂ ಪಾದಯಾತ್ರೆ ಮಾಡಿದರು. ಈ ವೇಳೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಏಳು ಬಸ್‍ಗಳಲ್ಲಿ ತುಂಬಿಕೊಂಡು ಹೋಗಿದ್ದಾರೆ.

ಇದೇ ರ್ಯಾಲಿಯಲ್ಲಿ ಕಾಂಗ್ರೆಸ್ ನಾಯಕ ಮತ್ತು ಸಂಸದ ಕೆಸಿ ವೇಣುಗೋಪಾಲ್ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಈ ವೇಳೆ ನಡೆದ ಘರ್ಷಣೆಯಲ್ಲಿ ಕೆ.ಸಿ.ವೇಣುಗೋಪಾಲ್  ಅವರ ಅಂಗಿ ಹರಿದಿದೆ. ಹರಿದ ಅಂಗಿ ಸಮೇತವೇ ಪೊಲೀಸರು ಅವರನ್ನು ವಶಕ್ಕೆ ಪಡೆದು ತುಘಲಕ್ ರಸ್ತೆ ಪೊಲೀಸ್ ಠಾಣೆಗೆ ರವಾನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ವೇಣುಗೋಪಾಲ್ ಅವರು ಕೂಡ ಕೆಲಕಾಲ ಅಸ್ವಸ್ಥರಾಗಿದ್ದರು ಎಂದು ಹೇಳಲಾಗಿದೆ. 

ಇಡಿ ಕಚೇರಿ ಬಳಿ ಬಂದಿದ್ದ ಕಾಂಗ್ರೆಸ್ ನಾಯಕರಾದ ಕೆ.ಸಿ.ವೇಣುಗೋಪಾಲ್ ಮತ್ತು ಡಿ.ಕೆ.ಸುರೇಶ್ ಮತ್ತಿತರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ವೇಳೆ ಪೊಲೀಸರು ವೇಣುಗೋಪಾಲ್ ಅವರ ಅಂಗಿಯನ್ನು ಹರಿದಿದ್ದು, ಅವರು ಅಸ್ವಸ್ಥರಾಗಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT